ಬೇಲೂರು | ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು: ಸಿ ಟಿ ರವಿ

Date:

  • ಹಾಸನ ಜಿಲ್ಲೆ ಬಿಜೆಪಿ ಪಾಲಿಗೆ ಭದ್ರಕೋಟೆಯಾಗಬೇಕು ಎಂದ ಸಿ.ಟಿ ರವಿ
  • ʼಪಕ್ಷದ ಎಲ್ಲ ಮುಖಂಡರ ಅಭಿಪ್ರಾಯ ಪಡೆದು ಏ.17ರಂದು ನಾಮಪತ್ರ ಸಲ್ಲಿಸುತ್ತೇನೆʼ

ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಕೆಲವರಿಗೆ ನಿರಾಸೆ ಮೂಡಿರಬಹುದು. ಆದರೆ, ವರಿಷ್ಟರು ನೀಡಿದ ಸಂದೇಶವನ್ನು ಪ್ರತಿ ಆಕಾಂಕ್ಷಿಗಳು ಪಾಲಿಸುವ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಹೇಳಿದರು.

ಹಾಸನ ಜಿಲ್ಲೆ ಬೇಲೂರಿನ ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್‌ ಅವರನ್ನು ಭೇಟಿ ಮಾಡಿ, ಸುದ್ದಿಗಾರರೊಂದಿಗೆ ಮಾತನಾಡಿದರು. “ಈಗಾಗಲೇ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಎರಡನೇ ಪಟ್ಟಿ ಶೀಘ್ರವೇ ಬಿಡುಗಡೆಯಾಗುತ್ತದೆ. ಹಾಸನ ಜಿಲ್ಲೆ ಬಿಜೆಪಿ ಪಾಲಿಗೆ ಭದ್ರಕೋಟೆಯಾಗಬೇಕು ಎಂಬ ಕಾರಣದಿಂದಲೇ ಆಳೆದು ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಅಂತಯೇ, ಬೇಲೂರು ವಿಧಾನಸಭಾ ಕ್ಷೇತ್ರಕ್ಕೆ ಹುಲ್ಲಹಳ್ಳಿ ಸುರೇಶ್ ಹೆಸರು ಅಂತಿಮವಾಗಿದೆ” ಎಂದು ಹೇಳಿದರು.

“ಹಾಸನ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಕಳೆದ ಐದು ವರ್ಷದಿಂದ ಇಡೀ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಾ ಬಂದಿದ್ದು, 189 ಅಭ್ಯರ್ಥಿಗಳ ಪಟ್ಟಿಯಲ್ಲಿ ಹುಲ್ಲಹಳ್ಳಿ ಸುರೇಶ್‌ ಹೆಸರು ಬಂದಿದೆ. ಅವರ ಬೆಂಬಲ ಪಡೆಯುವ ಮೂಲಕ ಬೇಲೂರಿನಲ್ಲಿ ಬಿಜೆಪಿ ಜಯಭೇರಿಗೆ ಹುಲ್ಲಹಳ್ಳಿ ಸುರೇಶ್‌ ಮುಂದಾಗಬೇಕಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನೂ ಕೂಡ ನಿಮ್ಮ ಪಕ್ಕದ ಜಿಲ್ಲೆ, ಇದೇ ತಾಲೂಕಿನ ಅಳಿಯ, ನಿಮ್ಮಗಳ ಬೆಂಬಲ ನನ್ನ ಮೇಲೆ ಇರಬೇಕು” ಎಂದು ತಿಳಿಸಿದ್ದು, ಇದೇ ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸುವ ಬಗ್ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಕೈ ತಪ್ಪಿದ ಬಿಜೆಪಿ ಟಿಕೆಟ್; ಜೆಡಿಎಸ್‌ನತ್ತ ಸೂರ್ಯಕಾಂತ ನಾಗಮಾರಪಳ್ಳಿ?

ಬಿಜೆಪಿ ಅಭ್ಯರ್ಥಿ ಹುಲ್ಲಹಳ್ಳಿ ಸುರೇಶ್‌ ಮಾತನಾಡಿ, “ನಮ್ಮಲ್ಲಿ ಯಾವುದೇ ಭಿನ್ನಮತವಿಲ್ಲ. ಪಕ್ಷದ ಗೆಲುವು ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ನಮ್ಮ ಬಗ್ಗೆ ಇಟ್ಟ ನಂಬಿಕೆಯನ್ನು ಪ್ರಾಮಾಣಿಕವಾಗಿ ಉಳಿಸಿಕೊಳ್ಳಲಾಗುತ್ತದೆ. ನಾನು ಕೂಡ ಪಕ್ಷದ ಎಲ್ಲ ಮುಖಂಡರು, ವಿಶೇಷವಾಗಿ ಆಕಾಂಕ್ಷಿಗಳ ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಪಡೆದು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸುತ್ತೇನೆ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ಅಡಗೂರು ಆನಂದ್, ಜೆ.ಕೆ.ಕುಮಾರ್, ಮಂಜುನಾಥ್, ರೇಣುಕಾ ಕುಮಾರ್‌, ತೆಂಡೇಕೆರೆ ರಮೇಶ್‌ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ...

ರಾಯಚೂರಲ್ಲಿ 2ನೇ ತರಗತಿ ವಿದ್ಯಾರ್ಥಿನಿ & ಹಾಸನದಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ...

ಈಗ ಸ್ವತಂತ್ರ, ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ: ಶಿವಸುಂದರ್‌ ಆತಂಕ

"ಚುನಾವಣಾತ್ಮಕ ಸರ್ವಾಧಿಕಾರಿ ದೇಶವಾಗಿ ಭಾರತ ಹೊಮ್ಮಿದೆ, ಚುನಾವಣೆ ನಡೆಯುತ್ತಿರುವ ಕಾರಣಕ್ಕೆ ಇದನ್ನು...

ಹಾಸನ ಲೋಕಸಭಾ ಕ್ಷೇತ್ರ ಪರಿಚಯ

ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ...