ಬೀದರ್ | ಕೆಲ ಕಚೇರಿಗಳನ್ನು ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ

Date:

ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಅತೀ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದ ಜನರ ಶ್ರೇಯೋ ಅಭಿವೃದ್ಧಿಗಾಗಿ 371(ಜೆ) ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಐತಿಹಾಸಿಕ ದಾಖಲೆಯಾಗಿದೆ. ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲವೆಂಬ ಗಾದೆ ಈ ಭಾಗದ ಜನರಿಗೆ ಅನ್ವಯವಾಗುತ್ತದೆ.

ಬೀದರದಿಂದ ಬೆಂಗಳೂರು 800-850 ಕಿ.ಮೀ. ದೂರವಿದು, ಅದೇ ರೀತಿಯಾಗಿ ಬೆಳಗಾವಿ ಸುವರ್ಣ ಸೌಧ ಸಹ 500-550 ಕಿ.ಮೀ. ಅಂತರದಲ್ಲಿದೆ. ಈ ಕಾರಣಕ್ಕಾಗಿ ದೊಡ್ಡ-‌ ದೊಡ್ಡ ರಾಜ್ಯಗಳನ್ನು ಚಿಕ್ಕದಾಗಿ ಮಾಡಿದರೆ ಅಭಿವೃದ್ಧಿಯಾಗುತ್ತದೆ ಎಂಬ ಕೂಗು ಕೇಳಿ ಬರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಎಂಬ ತಾರತಮ್ಯವೇ ಬೇಡ. ಆದ್ದರಿಂದ, ಆಯಾ ಭಾಗದ ಜನರಿಗೆ ಅನುಕೂಲವಾಗುವಂತೆ ಕೆಲ ಕಚೇರಿಗಳು ಬೆಂಗಳೂರಿನಿಂದ ಆಯಾ ಭಾಗಕ್ಕೆ ಸ್ಥಳಾಂತರಿಸಿದರೆ, ಎಲ್ಲಾ ಭಾಗದ ಜನರು ಎಲ್ಲಾ ಕಡೆಯೂ ಸುತ್ತಲು ಮತ್ತು ಆ ಭಾಗದ ಜನಜೀವನ, ಸಂಸ್ಕೃತಿ, ಸಾಹಿತ್ಯ, ಊಟ, ಉಡುಗೆ ಅರಿಯಲು ಸಹ ಸಾಧ್ಯವಾಗುತ್ತದೆ.

ಹೀಗಾಗಿ, ಕಲ್ಯಾಣ ಕರ್ನಾಟಕದ ಕೇಂದ್ರ ಭಾಗವಾದ ಕಲಬುರಗಿಯಲ್ಲಿ ಕೆಲ ಕಚೇರಿಗಳನ್ನು ಸ್ಥಾಪಿಸಿ, ಈ ಭಾಗದ ಜನರು ಬೆಂಗಳೂರಿಗೆ ಹೋಗುವುದನ್ನು ತಪ್ಪಿಸಬೇಕೆಂದು ಮತ್ತು ಸರ್ಕಾರದ ಆಡಳಿತ ಜನರ ಅನುಕೂಲಕ್ಕೆ ಎಂಬ ಪ್ರಜಾಪ್ರಭುತ್ವದ ಆಶಯವನ್ನು ಸರ್ಕಾರ ಈಡೇರಿಸಬೇಕೆಂದು, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಬಕ್ಕಪ್ಪಾ ನಾಗೋರಾ, ಡಾ. ಸಿ.ಆನಂದರಾವ, ರಮೇಶ್‌ ಬಿರಾದಾರ, ವಿಶ್ವನಾಥ ಉಪ್ಪೆ, ವಿದ್ಯಾಸಾಗರ, ಕೃಷ್ಣರೆಡ್ಡಿ ಸೇರಿದಂತೆ ಇತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...