ಸೋಲುವ ಭೀತಿಯಿಂದ ಸಿದ್ದರಾಮಯ್ಯ ಹೆಸರಲ್ಲಿ ನಕಲಿ ಪತ್ರ ಸೃಷ್ಟಿಸಿದ ಬಿಜೆಪಿ: ಡಿ‌ ಕೆ ಶಿವಕುಮಾರ್

Date:

ಬಿಜೆಪಿ ಅವರಿಗೆ ಮಾಡಲು ಕೆಲಸ ಇಲ್ಲ. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಸಿದ್ದರಾಮಯ್ಯ ಅವರ ಹೆಸರಲ್ಲಿ ನನ್ನ ವಿರುದ್ಧ ನಕಲಿ ಪತ್ರ ಬರೆದಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ ಪೂಜೆ ಸಲ್ಲಿಸಿದ ನಂತರ ಮಾಧ್ಯಮಗಳು ಈ ನಕಲಿ ಪತ್ರದ ಬಗ್ಗೆ ಪ್ರಶ್ನಿಸಿದಾಗ ಉತ್ತರಿಸಿದರು.

“ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಯಾಕೆ ಪತ್ರ ಬರೆಯುತ್ತಾರೆ? ಅವರು ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿ ಮೊನ್ನೆಯಷ್ಟೇ ನಾವಿಬ್ಬರೂ ಸೇರಿ ಅಭಿಪ್ರಾಯ ಹಂಚಿಕೊಂಡಿದ್ದೇವೆ. ಈಗಲೂ ನಾವು ಮಾಡುತ್ತಿದ್ದೇವೆ. ಅವರಿಗೆ ಜನರ ಬಳಿ ಪ್ರಚಾರಕ್ಕೆ ಸಮಯ ಸಿಗುತ್ತಿಲ್ಲ. ಇನ್ನು ಈ ರೀತಿ ದೂರಲು ಎಲ್ಲಿ ಸಾಧ್ಯ? ಬಿಜೆಪಿಯವರಿಗೆ ಮಾಡಲು ಕೆಲಸ ಇಲ್ಲ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯಲ್ಲಿರುವ ಆಂತರಿಕ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಪ್ರಯತ್ನ ಮಾಡುತ್ತಿದ್ದಾರೆ. ಮೋದಿ ಅವರು ಬಂದು ಬೀದಿ ಬೀದಿ ಅಲೆದಾಡಿದರು. ಮೋದಿ ಅವರು ಬಂದು ರೋಡ್ ಶೋ ಮಾಡಿದರು. ಅವರ ಜತೆ ಒಬ್ಬ ರಾಜ್ಯ ನಾಯಕನೂ ಇರಲಿಲ್ಲ. ಕನಿಷ್ಠ ಪಕ್ಷ ಆಯಾ ಕ್ಷೇತ್ರದ ಅಭ್ಯರ್ಥಿಯನ್ನಾದರೂ ಜತೆಯಲ್ಲಿ ಇಟ್ಟುಕೊಂಡು ರೋಡ್ ಶೋ ಮಾಡಬಾರದೇ?” ಎಂದರು.

ನೀವು ಸಿದ್ದರಾಮಯ್ಯ ಅವರು ಚಾಮುಂಡಿ ಬೆಟ್ಟಕ್ಕೆ ತೆರಳುತ್ತಿದ್ದೀರಾ ಎಂಬ ಪ್ರಶ್ನೆಗೆ, “ಚಾಮುಂಡಿ ತಾಯಿ ನಾಡಿನ ದೇವತೆ. ಎಲ್ಲರೂ ಸುಭಿಕ್ಷವಾಗಿರಲಿ ಎಂದು ನಾನು ಹಾಗೂ ಸಿದ್ದರಾಮಯ್ಯ ಅವರು ಚಾಮುಂಡಿ ದೇವತೆಯಲ್ಲಿ ಪ್ರಾರ್ಥನೆ ಮಾಡಿ ಆಶೀರ್ವಾದ ಪಡೆಯಲು ಹೋಗುತ್ತಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...