ಪಕ್ಷಾಂತರಿಗಳು ಹಾಗೂ ಬಂಡಾಯ ಅಭ್ಯರ್ಥಿಗಳಿಂದ ಬಿಜೆಪಿಗೆ ನಷ್ಟವಿಲ್ಲ: ಸಿಎಂ ಬೊಮ್ಮಾಯಿ

Date:

  • ಈ ಬಾರಿ ಅಚ್ಚರಿಯ ಫಲಿತಾಂಶವನ್ನು ಬಿಜೆಪಿ ನೀಡಲಿದೆ
  • ಏಪ್ರಿಲ್ 8ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ

ಪಕ್ಷಾಂತರಿಗಳು ಹಾಗೂ ಬಂಡಾಯದ ಅಭ್ಯರ್ಥಿಗಳಿಂದ ಬಿಜೆಪಿ ಗೆ ನಷ್ಟವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ಮೂರು ದಿನಗಳ ಬೆಳವಣಿಗೆ ಗಮನಿಸಿದರೆ ಕೆಲವು ಕ್ಷೇತ್ರದಲ್ಲಿ ಆಶ್ಚರ್ಯಕರ ಫಲಿತಾಂಶ ಬರಲಿದೆ ಎಂದರು.

ಏ .8ಕ್ಕೆ ಪಟ್ಟಿ ಬಿಡುಗಡೆ
ವಾಸ್ತವಾಂಶ ಆಧರಿಸಿ ಅಭ್ಯರ್ಥಿ ಆಯ್ಕೆಯಾಗಿದೆ. ಇಂದು ರಾಜ್ಯ ಸಮಿತಿಯ ಸಭೆ ಕರೆಯಲಾಗಿದೆ. ಎರಡು ದಿನಗಳ ಸಭೆ ಬಳಿಕ ಈ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಲಾಗುವುದು. 8ರ ಸಭೆ ಬಳಿಕ ಪಟ್ಟಿ ಬಿಡುಗಡೆಯಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಂಡಾಯಕ್ಕೆ ತಲೆ ಕೆಡಿಸಿಕೊಳ್ಳಲ್ಲ
ಆಯನೂರು ಮಂಜುನಾಥ್ ಅವರ ಬಂಡಾಯ ಹಾಗೂ ಶಾಸಕರು ಪಕ್ಷಾಂತರದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಈಗ ನಮ್ಮಲ್ಲಿ 125 ಶಾಸಕರಿದ್ದಾರೆ. ಅದರಲ್ಲಿ ಕೆಲವು ಕಡೆ ಇಬ್ಬರು ಆಕಾಂಕ್ಷಿಗಳು ಇದ್ದಾರೆ. ಅಲ್ಲಿ ಸ್ಥಾನ ದೊರೆಯುವುದಿಲ್ಲ ಎಂದು ಕೆಲವರು ಬಿಟ್ಟು ಹೋಗಿದ್ದಾರೆ ಅಷ್ಟೆ. ಇದರಿಂದ ಬಿಜೆಪಿ ಹಾಗೂ ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಬಿಜೆಪಿಯಿಂದ ಮತ್ತೆ ಯಾರು ಹೋಗುವುದಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಬಿಜೆಪಿಗೆ ಟಿಕೆಟ್‌ ಆಕಾಂಕ್ಷಿಗಳ ತಲೆ ಬಿಸಿ; ಅಭ್ಯರ್ಥಿಗಳ ಪಟ್ಟಿ ಶಿಫಾರಸಿಗೆ ಇನ್ನಿಲ್ಲದ ಕಸರತ್ತು

ಸಿದ್ದರಾಮಯ್ಯ ಸಿಎಂ ಆಗುವ ವಿಚಾರದಲ್ಲಿ ನೀಡಿದ್ದ ಹೇಳಿಕೆಗೆ ಬಗ್ಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕರೇನೋ ಅವರ ಆಸೆ ಹೇಳಿಕೊಂಡಿದ್ದಾರೆ. ಆದರೆ ಜನರ ನಾಡಿಮಿಡಿತ ಏನಿದೆಯೋ ಯಾರಿಗೆ ಗೊತ್ತು? ಫಲಿತಾಂಶ ಬಂದ ಮೇಲೆ ಜನರ ಅಭಿಮತ ತಿಳಿಯಲಿದೆ ಎಂದು ಮಾರ್ಮಿಕವಾಗಿ ನುಡಿದರು.

ಮುಂದುವರೆದು ಮಾತನಾಡಿದ ಅವರು, ಸಿದ್ದರಾಯಮಯ್ಯ ಹೇಳಿರುವುದು ಆ ಪಕ್ಷದೊಳಗಿನ ಆಂತರಿಕ ವಿದ್ಯಮಾನಗಳ ಪ್ರತಿಬಿಂಬ. ಏಕೆಂದರೆ ಹೋದಲ್ಲೆಲ್ಲ ಡಿಕೆಶಿ ನಾನೇ ಸಿಎಂ ನನಗೆ ಆಶೀರ್ವಾದ ಮಾಡಿ ಎನ್ನುತ್ತಾರೆ. ಮತ್ತೊಂದು ಕಡೆ ಸಿದ್ದರಾಮಯ್ಯ ನಾನೇ ಸಿಎಂ ಹೇಳುತ್ತಾರೆ.

ಆದರೆ ಜನರ ಮನಸ್ಸಿನಲ್ಲಿ ಇವರಿಬ್ಬರೂ ಇಲ್ಲ. ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಕನಸು ಕಾಣುತ್ತಿದ್ದಾರೆ. ಆ ಕನಸು ನನಸಾಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...