ಭಾಲ್ಕಿ ಕ್ಷೇತ್ರ | ‘ಕೈ’ ಭ್ರದಕೋಟೆಯಲ್ಲಿ ‘ಕಮಲ’ ಕಮಾಲ್; ದಾಯಾದಿಗಳ ಕಾಳಗ

Date:

1962ರಿಂದ ಭಾಲ್ಕಿ ಕ್ಷೇತ್ರ ಖಂಡ್ರೆ ಪರಿವಾರದ ಹಿಡಿತದಲ್ಲಿದೆ. ಕ್ಷೇತ್ರದಲ್ಲಿ ಸ್ಪರ್ಧಿ-ಪ್ರತಿಸ್ಪರ್ಧಿ ಇಬ್ಬರೂ ಖಂಡ್ರೆ ಪರಿವಾರದವರೇ ಆಗಿದ್ದಾರೆ. ಭಾಲ್ಕಿಯಲ್ಲಿ ಖಂಡ್ರೆಗೆ ಖಂಡ್ರೆಯೇ ದಾಯಾದಿಯಾಗಿದ್ದಾರೆ ಎಂಬ ಮಾತು ಜನಜನಿತವಾಗಿದೆ. 

ಭಾಲ್ಕಿ ವಿಧಾನಸಭಾ ಕ್ಷೇತ್ರ ಪ್ರತಿ ಬಾರಿಯೂ ಜಿದ್ದಾಜಿದ್ದಿನ ಕ್ಷೇತ್ರವಾಗಿ ಗಮನ ಸೆಳೆಯುತ್ತದೆ. ಈ ಬಾರಿಯೂ ಭಾಲ್ಕಿ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಕಾಂಗ್ರೆಸ್ ಭ್ರದಕೋಟೆ ಭೇದಿಸಲು ಕಮಲ ಪಡೆ ಭಾರೀ ರಣತಂತ್ರ ಹೆಣೆಯುತ್ತಿದೆ.

ಭಾಲ್ಕಿ ಕ್ಷೇತ್ರ ಖಂಡ್ರೆ ಪರಿವಾರದ ಹಿಡಿತದಲ್ಲಿದೆ. ಪ್ರತಿ ಬಾರಿಯ ಚುನಾವಣೆ ಕಣದಲ್ಲಿ ಖಂಡ್ರೆ ಪರಿವಾರದ್ದೇ ದರ್ಬಾರ್, ಇಲ್ಲಿಯವರೆಗೆ ನಡೆದ ಒಟ್ಟು ಚುನಾವಣೆಯಲ್ಲಿ ಹೆಚ್ಚು ಬಾರಿ ಗೆಲುವು ಕಂಡಿದ್ದು ಕಾಂಗ್ರೆಸ್, ಅದರಲ್ಲಿ ಬಹುಪಾಲು ಅಧಿಕಾರ ಖಂಡ್ರೆ ಪರಿವಾರಕ್ಕೆ ದಕ್ಕಿರುವುದು ವಿಶೇಷ.

ಕ್ಷೇತ್ರದಲ್ಲಿ ಖಂಡ್ರೆ ಪರಿವಾರದಿಂದ ಮೊದಲ ಶಾಸಕರಾಗಿದ್ದ ಭೀಮಣ್ಣಾ ಖಂಡ್ರೆ ಅವರು ಕಟ್ಟಿದ ಕಾಂಗ್ರೆಸ್ ಕೋಟೆಯನ್ನು ಅವರ ಮಕ್ಕಳಾದ ವಿಜಯಕುಮಾರ್ ಖಂಡ್ರೆ, ಈಶ್ವರ ಖಂಡ್ರೆ ಇದೂವರೆಗೂ ಯಶಸ್ವಿಯಾಗಿ ಕಾಪಾಡಿಕೊಂಡು ಬಂದಿದ್ದಾರೆ. 2023ರ ಚುನಾವಣೆಯಲ್ಲಿ ಶಾಸಕ ಈಶ್ವರ ಖಂಡ್ರೆ ಅವರ ನಾಲ್ಕನೇ ಬಾರಿಯ ಗೆಲುವಿಗೆ ಲಗಾಮ ಹಾಕಲು ಬಿಜೆಪಿ ಭಾರೀ ಕಸರತ್ತು ನಡೆಸಿದೆ. ಬಿಜೆಪಿ ಮತ್ತೆ ತನ್ನ ಹಳೆ ಕಲಿಯನ್ನು ಅಖಾಡಕ್ಕಿಳಿಸಿ ಪ್ರತಿಷ್ಠೆಯ ಕಣವಾಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1999-2004ರಲ್ಲಿ ಬಿಜೆಪಿಯಿಂದ ಎರಡು ಬಾರಿ ಸತತವಾಗಿ ಗೆದಿದ್ದ ಪ್ರಕಾಶ್ ಖಂಡ್ರೆ ಅವರ ವರ್ಚಸ್ಸು ಕ್ಷೇತ್ರದಲ್ಲಿ ಇಂದಿಗೂ ಇದೆ. 2008ರಲ್ಲಿ ಈಶ್ವರ ಖಂಡ್ರೆ ವಿರುದ್ಧ ಸೋತ ಪ್ರಕಾಶ್ ಖಂಡ್ರೆ ಮತ್ತೆ ಗೆಲ್ಲಲು ಆಗಲೇ ಇಲ್ಲ. ಇದೀಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿರುವ ಪ್ರಕಾಶ್ ಖಂಡ್ರೆ, ಕಮಲ ಅರಳಿಸುವ ಹುಮ್ಮಸ್ಸಿನಲ್ಲಿದ್ದಾರೆ. ಸೋದರ ಸಂಬಂಧಿ ಈಶ್ವರ ಖಂಡ್ರೆ ಅವರನ್ನು ಸೋಲಿಸಲು ಪ್ರಕಾಶ್ ಖಂಡ್ರೆ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ.

2008ರಿಂದ ನಿರಂತರವಾಗಿ ಗೆದ್ದು ಬರುತ್ತಿರುವ ಶಾಸಕ ಈಶ್ವರ ಖಂಡ್ರೆ ಕ್ಷೇತ್ರದಲ್ಲಿ ಕೈ ಪಡೆಯನ್ನು ಮತ್ತಷ್ಟು ಗಟ್ಟಿಗೊಳಿಸಿದ್ದಾರೆ. ಈ ಹಿಂದೆ ಬಿಜೆಪಿ, ಕೆಜೆಪಿಯಿಂದ ಸ್ಪರ್ಧಿಸಿದ್ದ ಪ್ರಕಾಶ್ ಖಂಡ್ರೆ ಹಾಗೂ ಡಿ.ಕೆ ಸಿದ್ರಾಮ್ ಅವರನ್ನು ಸತತವಾಗಿ ತಿರಸ್ಕರಿಸಿದ ಮತದಾರರು ಒಂದೇ ವ್ಯಕ್ತಿ, ಒಂದೇ ಪಕ್ಷವನ್ನು ಪುನರಾಯ್ಕೆ ಮಾಡಿದ್ದಾರೆ.

ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ ಒಡ್ಡುವುದು ನಿಶ್ಚಿತ. ಹೀಗಾಗಿ ಎರಡೂ ಪಕ್ಷಗಳ ನಾಯಕರು ಗೆಲುವಿಗೆ ಶಕ್ತಿ ಪ್ರದರ್ಶಿಸಲು ತಾ ಮುಂದು ನಾ ಮುಂದು ಎನ್ನುತ್ತಿದ್ದಾರೆ. ಶಾಸಕ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕರೆಸಿ ಶಕ್ತಿ ಪ್ರದರ್ಶಿಸಿದರೆ, ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಖಾಂತರ ನಾಮಪತ್ರ ಸಲ್ಲಿಸಿ ಬಹಿರಂಗ ಸಮಾವೇಶ ನಡೆಸಿದ್ದಾರೆ. ಅಲ್ಲದೆ, ಮೇ 3ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಇದರಿಂದ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ.

ಖಂಡ್ರೆ ಭದ್ರಕೋಟೆ ಭೇದಿಸುವುದು ಸುಲಭವಲ್ಲ

1962ರಿಂದ ಖಂಡ್ರೆ ಪರಿವಾರದ ಹಿಡಿತದಲ್ಲಿರುವ ಭಾಲ್ಕಿ ಕ್ಷೇತ್ರದಲ್ಲಿ ಖಂಡ್ರೆ ಕುಟುಂಬವೇ 11 ಬಾರಿ ಜಯ ಗಳಿಸಿದೆ. ಕ್ಷೇತ್ರದಲ್ಲಿ ಸ್ಪರ್ಧಿ-ಪ್ರತಿಸ್ಪರ್ಧಿ ಇಬ್ಬರೂ ಖಂಡ್ರೆ ಪರಿವಾರದವರೇ ಆಗಿದ್ದಾರೆ. ಕಾಂಗ್ರೆಸ್, ಪಕ್ಷೇತರ ಹಾಗೂ ಬಿಜೆಪಿಯಿಂದ ಸ್ಪರ್ಧಿಸಿದ ಖಂಡ್ರೆ ಪರಿವಾರದವರಿಗೆ ಕ್ಷೇತ್ರದ ಜನ ಜೈ ಎಂದಿದ್ದಾರೆ. ಹೀಗಾಗಿ ಭಾಲ್ಕಿಯಲ್ಲಿ ಖಂಡ್ರೆಗೆ ಖಂಡ್ರೆಯೇ ದಾಯಾದಿಯಾಗಿದ್ದಾರೆ ಎಂಬ ಮಾತು ಜನಜನಿತವಾಗಿದೆ.

1967ರಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಜಯ ಗಳಿಸಿದ ಭೀಮಣ್ಣ ಖಂಡ್ರೆ ಕ್ಷೇತ್ರವನ್ನು ಕಾಂಗ್ರೆಸ್ ಭದ್ರಕೋಟೆಯನ್ನಾಗಿ ಮಾಡಿದ್ದರು. ನಂತರ ಸಚಿವರಾಗಿ ಕ್ಷೇತ್ರದಲ್ಲಿ ನಾನಾ ಕೆಲಸಗಳನ್ನು ಮಾಡುವ ಮೂಲಕ ಸಂಪೂರ್ಣ ಕಾಂಗ್ರೆಸ್ ತೆಕ್ಕೆಗೆ ತೆಗೆದುಕೊಂಡಿದ್ದರು. 1989ರಲ್ಲಿ ಭೀಮಣ್ಣ ಖಂಡ್ರೆ ಅವರು ತಮ್ಮ ಸುಪುತ್ರ ವಿಜಯಕುಮಾರ್ ಖಂಡ್ರೆ ಅವರನ್ನು ರಾಜಕೀಯಕ್ಕೆ ಪ್ರವೇಶ ಕೊಟ್ಟು ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದರು. ನಂತರ 2004ರಿಂದ ಅವರ ಇನ್ನೋರ್ವ ಪುತ್ರ ಈಶ್ವರ ಖಂಡ್ರೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಬಸವಕಲ್ಯಾಣ ಕ್ಷೇತ್ರ | ‘ಕಲ್ಯಾಣ’ ಕದನದಲ್ಲಿ ಪಕ್ಷಾಂತರ ಪರ್ವ; ಬಿಜೆಪಿ ಮಣಿಸಲು ‘ಕೈ’ ತಂತ್ರ

ಭೀಮಣ್ಣ ಖಂಡ್ರೆ ಕುಟುಂಬ ಕಾಂಗ್ರೆಸ್‌ನ ನಿಷ್ಠಾವಂತರಾಗಿದ್ದಾರೆ. ಆದರೆ, ಅವರ ಸೋದರ ಸಂಬಂಧಿ ಪ್ರಕಾಶ್ ಖಂಡ್ರೆ ಬಿಜೆಪಿಯಲ್ಲಿ ಗುರುತಿಸಿಕೊಂಡು ರಾಜಕೀಯ ಪ್ರವೇಶಿಸಿದರು. 1999 ಮತ್ತು 2004ರಲ್ಲಿ ಎರಡು ಬಾರಿ ಬಿಜೆಪಿಯಿಂದ ಜಯ ಗಳಿಸಿದ್ದರು. 2008ರ ಬಳಿಕ ಕ್ಷೇತ್ರವನ್ನು ಕಾಂಗ್ರೆಸ್‌ ಮತ್ತೆ ತನ್ನ ತೆಕ್ಕೆಗೆ ತೆದುಕೊಂಡಿತು.

ಕಾಂಗ್ರೆಸಿಗೆ ಪ್ರತಿಷ್ಠೆ, ಬಿಜೆಪಿಗೆ ಸವಾಲಿನ ಕ್ಷೇತ್ರ

ನಿರಂತರವಾಗಿ ಮೂರು ಅವಧಿಗೆ ಆಯ್ಕೆಯಾಗಿ ಮಂತ್ರಿಯೂ ಆಗಿದ್ದ ಈಶ್ವರ ಖಂಡ್ರೆ, ಪ್ರಸ್ತುತ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿದ್ದಾರೆ. ಕ್ಷೇತ್ರ ಅಷ್ಟೇ ಅಲ್ಲದೆ ರಾಜ್ಯ ರಾಜಕಾರಣದಲ್ಲಿ ತಮ್ಮ ಛಾಪನ್ನು ವಿಸ್ತರಿಸಿಕೊಂಡಿದ್ದಾರೆ. ಹೀಗಾಗಿ ನಾಲ್ಕನೇ ಅವಧಿಗೆ ಶತಾಯಗತಾಯ ಗೆಲ್ಲಲೇಬೇಕು ಎಂಬುದು ಅವರಿಗೆ ಪ್ರತಿಷ್ಠೆ ಎನ್ನುವಂತಾಗಿದೆ.

2008ರಿಂದ ನಂತರ ಸತತವಾಗಿ ಸೋಲುತ್ತಿರುವ ಬಿಜೆಪಿ, ಈ ಬಾರಿ ಕಾಂಗ್ರೆಸ್ ಮಣಿಸಲು ಶತಪ್ರಯತ್ನ ನಡೆಸುತ್ತಿದೆ. ರಾಜ್ಯದ ಘಟಾನುಘಟಿ ನಾಯಕರನ್ನು ಕರೆಸುವ ತಂತ್ರಗಾರಿಕೆ ಹೆಣೆದಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರೂ ಇಂದು (ಎಪ್ರಿಲ್ 29) ಬೀದರ್‌ ಜಿಲ್ಲೆಯ ಹುಮ್ನಾಬಾದ್‌ನಲ್ಲಿ ಪ್ರಚಾರ ನಡೆಸಿದ್ದಾರೆ.

ಕ್ಷೇತ್ರದ ಮತದಾರರು ಮತ್ತು ಜಾತಿಬಲ

ಜಿಲ್ಲೆಯ ಮಧ್ಯಭಾಗದ ಭಾಲ್ಕಿ ಕ್ಷೇತ್ರ ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿದೆ. ಲಿಂಗಾಯತ ಸಮುದಾಯದ ಸಂಖ್ಯಾಬಲ ಅಧಿಕವಿದ್ದರೂ ಮರಾಠ, ಎಸ್ಸಿ, ಎಸ್ಟಿ ಮತಗಳು ನಿರ್ಣಾಯಕ ಪಾತ್ರವಹಿಸುತ್ತವೆ. ಕ್ಷೇತ್ರದಲ್ಲಿ ಅಂದಾಜು 60 ಸಾವಿರ ಲಿಂಗಾಯತ, 45 ಸಾವಿರ ಮರಾಠಾ , 43 ಸಾವಿರ ಪರಿಶಿಷ್ಟಜಾತಿ , 22 ಸಾವಿರ ಪರಿಶಿಷ್ಟ ಪಂಗಡ ಹಾಗೂ 27 ಸಾವಿರ ಮುಸ್ಲಿಂ ಮತಗಳು ಸೇರಿದಂತೆ ಇತರೆ ಸಮುದಾಯದ ಮತದಾರರಿದ್ದಾರೆ. ಪ್ರಸ್ತುತ ಕ್ಷೇತ್ರದಲ್ಲಿ ಒಟ್ಟು 222472 ಮತದಾರರಲ್ಲಿ 116904 ಪುರುಷರು,105560 ಮಹಿಳೆಯರು ಹಾಗೂ 08 ತೃತೀಯ ಲಿಂಗಿಗಳು ಇದ್ದಾರೆ.

ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ಕುಟುಂಬಗಳಲ್ಲಿ ಖಂಡ್ರೆ ಪರಿವಾರವೂ ಒಂದು. ಬಿಜೆಪಿ ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇಲ್ಲಿ ನಿಶ್ಚಿತ ಎನ್ನುವಂತಿದೆ. ಆದರೆ ಯಾವುದೇ ಪಕ್ಷದವರು ಗೆದ್ದರೂ ಭಾಲ್ಕಿ ಮತ್ತೆ ಖಂಡ್ರೆ ಪರಿವಾರದ ಹಿಡಿತದಲ್ಲಿರುತ್ತದೆ‌ ಎಂಬುದು ಮತದಾರರ ಅಭಿಪ್ರಾಯ. ಇದೀಗ ಖಂಡ್ರೆ ಪರಿವಾರದ ಹಳೆ ಕಲಿಗಳೇ ಮತ್ತೆ ಕಣದಲ್ಲಿ ಇರುವ ಕಾರಣ ಭಾಲ್ಕಿ ವಿಧಾನಸಭಾ ಕ್ಷೇತ್ರ ಸಹಜವಾಗಿ ಜಿಲ್ಲೆಯಾದ್ಯಂತ ತೀವ್ರ ಕುತೂಹಲ ಮೂಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...