ಸಿಎಂ ಬೊಮ್ಮಾಯಿ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇನೆ: ಬಿಜೆಪಿ ಶಾಸಕ ನೆಹರು ಓಲೇಕಾರ್

Date:

  • ಟಿಕೆಟ್‌ ಕೈ ತಪ್ಪಿದ್ದರಿಂದ ಸಿಎಂ ವಿರುದ್ಧ ಓಲೇಕಾರ್‌ ಆಕ್ರೋಶ
  • ಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್‌ ನೀಡಿದ ಬಿಜೆಪಿ

ಹಾವೇರಿ ಎಸ್‌ಸಿ ಮೀಸಲು ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ನೆಹರು ಓಲೇಕಾರ್‌ ಅವರಿಗೆ ಬಿಜೆಪಿ ಟಿಕೇಟ್ ಕೈ ತಪ್ಪಿದ್ದು, ಅಸಮಾಧಾನ ಭುಗಿಲೆದ್ದಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಬೊಮ್ಮಾಯಿ ಮಾಡಿರುವ ಭ್ರಷ್ಟಾಚಾರಗಳನ್ನು ಬಯಲಿಗೆಳೆಯುತ್ತೇನೆ ಎಂದು ನೆಹರು ಓಲೇಕಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಏಕವಚನದಲ್ಲೇ ಹರಿಹಾಯ್ದಿರುವ ಓಲೇಕಾರ್, “ಬೊಮ್ಮಾಯಿ ಅವರು ಮಾಡಿರುವ ಹಗರಣಗಳನ್ನು ಬಹಿರಂಗಪಡಿಸುತ್ತೇನೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆದ ನಂತರ ಮತ್ತು ಅದಕ್ಕಿಂತ ಪೂರ್ವದಲ್ಲಿ ಹಲವಾರು ಹಗರಣಗಳನ್ನು ಮಾಡಿದ್ದಾರೆ. ಅವರಲ್ಲಿ ಹಲವಾರು ನ್ಯೂನತೆಗಳಿವೆ. ಮಂದಿನ ದಿನಗಳಲ್ಲಿ ಅವುಗಳನ್ನು ಸಾರ್ವಜನಿಕರ ಗಮನಕ್ಕೆ ತರಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಬಂಧಪಟ್ಟ ಇಲಾಖೆಗೆ ದೂರು ನೀಡಿ, ಹಗರಣಗಳ ಕುರಿತು ತನಿಖೆ ಮಾಡಿಸುವ ಮೂಲಕ ಅವರು ಮಾಡಿರುವ ಘನ ಕಾರ್ಯವನ್ನು ಬೆಳಕಿಗೆ ತರುವ ಕೆಲಸ ಮಾಡುತ್ತೇವೆ” ಎಂದಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ದೇಶಪೂರ್ವಕವಾಗಿ ಸೇಡು ತೀರಿಸಿಕೊಳ್ಳಲು ನನಗೆ ಟಿಕೆಟ್‌ ತಪ್ಪಿಸಿದ್ದಾರೆ. ಹಿಂದಿನ ಬಾರಿಯೂ ಟಿಕೆಟ್‌ ತಪ್ಪಿಸಲು ಓಡಾಡಿದ್ದರು. ಹಿಂದೆ ಆಗಿರಲಿಲ್ಲ ಹಾಗಾಗಿ ಈ ಬಾರಿ ಮಾಡಿದ್ದಾರೆ. ನನ್ನ ಮುಂದಿನ ರಾಜಕೀಯ ನಿರ್ಧಾರವನ್ನು ಕಾರ್ಯಕರ್ತರ ಜೊತೆಗೆ ಚರ್ಚಿಸಿ ತೆಗೆದುಕೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ರಾಜೀನಾಮೆ

2008ರಲ್ಲಿ ಕ್ಷೇತ್ರ ಮರುವಿಂಗಡಣೆ ಬಳಿಕ ಹಾವೇರಿಯು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರವಾಗಿ ಬದಲಾಯಿತು. 2008ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನೆಹರು ಓಲೇಕಾರ್‌ ಶಾಸಕರಾಗಿದ್ದರು. 2013ರಲ್ಲಿ ಕೆಜೆಪಿ ಯಿಂದ ಸ್ಪರ್ಧಿಸಿ ಸೋತಿದ್ದರು. 2018ರ‌ಲ್ಲಿ ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದರು.

ಈ ಬಾರಿ ಬಹುತೇಕ ಕಡೆ ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್‌ ರೈತಪ್ಪಿದ್ದು, ಹಾವೇರಿ ಮೀಸಲು ಕ್ಷೇತ್ರದಿಂದ ಗವಿಸಿದ್ಧಪ್ಪ ದ್ಯಾಮಣ್ಣವರ ಅವರಿಗೆ ಟಿಕೆಟ್‌ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...