ಬಿಜೆಪಿ ಟಿಕೆಟ್ ಹಂಚಿಕೆ ಕಗ್ಗಂಟು: ಯಡಿಯೂರಪ್ಪರನ್ನು ಹೊರಗಿಟ್ಟು ಸಭೆ; ಬೇಸರದಿಂದ ಬೆಂಗಳೂರಿಗೆ ವಾಪಾಸು

Date:

  • ನಡೆಯದ ಸಭೆ, ಬೇಸರದಿಂದ ಬೆಂಗಳೂರಿನತ್ತ ಯಡಿಯೂರಪ್ಪ
  • ಐದು ನಿಮಿಷದ ಅಮಿತ್‌ ಶಾ ಭೇಟಿ, ಮಾತು ಕೇಳದ ನಡ್ಡಾ

ಬಿಜೆಪಿಯ ಅಗ್ರನಾಯಕ, ಕೇಂದ್ರ ಸಂಸದೀಯ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ದೆಹಲಿಯ ವರಿಷ್ಠರೊಂದಿಗೆ ನಡೆದ ಮೂರು ಸಭೆಗಳಿಂದಲೂ ಹೊರಗಿಟ್ಟ ಸುದ್ದಿ ಹೊರಬಿದ್ದಿದೆ.

ದೆಹಲಿ ನಾಯಕರ ಈ ವರ್ತನೆಗೆ ಬೇಸತ್ತ ಕರ್ನಾಟಕದ ಅಗ್ರನಾಯಕ ಯಡಿಯೂರಪ್ಪನವರು, ಬಂದ ದಾರಿಗೆ ಸುಂಕವಿಲ್ಲವೆಂದು ಭಾವಿಸಿ, ಬೇಸರದಿಂದಲೇ ಸಂಜೆ 5ರ ಬೆಂಗಳೂರಿನ ವಿಮಾನವೇರಿದ ಸುದ್ದಿ ಹಬ್ಬಿದೆ.

ಈಗಾಗಲೇ ಕಾಂಗ್ರೆಸ್ ಮತ್ತು ಜೆಡಿಎಸ್- ಎರಡೂ ಪಕ್ಷಗಳೂ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೆ, ಆಡಳಿತಾರೂಢ ಬಿಜೆಪಿ ಒಂದು ಪಟ್ಟಿಯನ್ನೂ ಬಿಡುಗಡೆ ಮಾಡದೆ, ಮೀನ ಮೇಷ ಎಣಿಸುತ್ತಿದೆ. ದೆಹಲಿಯಲ್ಲಿ ಸಭೆಗಳ ಮೇಲೆ ಸಭೆಗಳನ್ನು ನಡೆಸಿ ಕಗ್ಗಂಟು ಮಾಡಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ನಾಯಕರಾದ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್, ಬಸವರಾಜ ಬೊಮ್ಮಾಯಿ, ಪ್ರಲ್ಹಾದ್ ಜೋಷಿ, ಸಿಟಿ ರವಿ ಅವರುಗಳು ಶನಿವಾರವೇ ದೆಹಲಿ ತಲುಪಿ, ಶನಿವಾರ ಬೆಳಗ್ಗೆ 11ರಿಂದ ರಾತ್ರಿ 12ರ ತನಕ ನಡೆದ ಸಭೆಗಳಲ್ಲಿ ಪಾಲ್ಗೊಂಡು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸುವ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಶನಿವಾರದ ಸಭೆಗಳ ನಂತರ, ಸೋಮವಾರ ಬೆಳಗ್ಗೆ ಮತ್ತೆ ಆರಂಭವಾದ ಸಭೆಗಳಿಗೆ ರಾಜ್ಯ ನಾಯಕರು ಪಾಲ್ಗೊಂಡು ಪಟ್ಟಿ ಅಂತಿಮಗೊಳಿಸಬೇಕಾಗಿತ್ತು. ಅದರಂತೆ, ಸಂಸದ ರಾಘವೇಂದ್ರ ಅವರ ಮನೆಯಲ್ಲಿ ಬೆಳಗ್ಗೆ ತಿಂಡಿ ತಿಂದು ಹೊರಟ ಯಡಿಯೂರಪ್ಪನವರು, ಮೊದಲು ಧರ್ಮೇಂದ್ರ ಪ್ರಧಾನ್ ಅವರ ಮನೆಯಲ್ಲಿ ನಿಗದಿಯಾಗಿದ್ದ ಸಮಯಕ್ಕೆ ಸಭೆಗೆ ಹೊರಟರು.

ಧರ್ಮೇಂದ್ರ ಪ್ರಧಾನ್ ಮನೆಯಲ್ಲಿ ಆಗಲೇ ರಾಜ್ಯ ನಾಯಕರಾದ ನಳಿನ್, ಬೊಮ್ಮಾಯಿ, ಪ್ರಲ್ಹಾದ್ ಜೋಷಿಗಳಿರುವ ಸುದ್ದಿಯನ್ನು ದಾರಿ ಮಧ್ಯೆದಲ್ಲಿಯೇ ತಿಳಿದ ಯಡಿಯೂರಪ್ಪನವರು, ಅವರ ಮನೆಗೆ ಹೋಗದೇ ವಾಪಾಸು ಬಂದರೆಂಬ ಸುದ್ದಿಯನ್ನು ಬಿಜೆಪಿಯ ಮೂಲಗಳು ತಿಳಿಸಿವೆ.

ಇದಾದ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಯಲ್ಲಿ ನಡೆಯಲಿದ್ದ ಸಭೆಯಲ್ಲಿ ಯಡಿಯೂರಪ್ಪನವರು ಪಾಲ್ಗೊಳ್ಳಬೇಕಾಗಿತ್ತು. ಆದರೆ ಆ ಸಭೆಗೂ ಮುಂಚೆಯೇ, ಅಮಿತ್ ಶಾ ಮನೆಯಲ್ಲಿ ಸಿಟಿ ರವಿ ಇರುವ ವಿಚಾರ ಯಡಿಯೂರಪ್ಪನವರಿಗೆ ತಿಳಿದು ಬಂತು. ಆದರೂ, ಅಮಿತ್ ಶಾರನ್ನು ಕಾಣಲು ಹೋದರೆ, ಕೇವಲ ಐದೇ ನಿಮಿಷಗಳ ಅವಧಿಯಲ್ಲಿ ಭೇಟಿ ಮುಗಿದು, ಶಾ ಅರುಣಾಚಲ ಪ್ರದೇಶಕ್ಕೆ ತೆರಳಬೇಕಾಗಿದ್ದರಿಂದ ಕೊನೇ ಕ್ಷಣದಲ್ಲಿ ಆ ಸಭೆಯೂ ರದ್ದಾಯಿತು. ಹಾಗಾಗಿ ಯಡಿಯೂರಪ್ಪನವರು ಅಮಿತ್ ಶಾರನ್ನು ಭೇಟಿ ಮಾಡಿ, ಟಿಕೆಟ್ ಹಂಚಿಕೆಯ ಬಗ್ಗೆ ಮಾತನಾಡಲಾಗಲೇ ಇಲ್ಲ. ಅಲ್ಲೂ ಅವರಿಗೆ ನಿರಾಶೆಯೇ ಕಾದಿತ್ತು.

ಧರ್ಮೇಂದ್ರ ಪ್ರಧಾನ್ ಮತ್ತು ಅಮಿತ್ ಶಾ ಮನೆಗಳಲ್ಲಿನ ಸಭೆಗಳ ಕತೆ ಹೀಗಾದರೆ, ಮೂರನೆಯ ಸಭೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮನೆಯಲ್ಲಿ ಸಮಾವೇಶಗೊಳ್ಳಬೇಕಾಗಿತ್ತು. ಆ ಸಭೆಯಲ್ಲಿ ಯಡಿಯೂರಪ್ಪನವರ ಭಾಗಿಯಾಗಿ ಟಿಕೆಟ್ ಹಂಚಿಕೆಯ ಬಗ್ಗೆ ಚರ್ಚಿಸಬೇಕಾಗಿತ್ತು. ಪಟ್ಟಿಯನ್ನು ಫೈನಲೈಸ್ ಮಾಡಬೇಕಿತ್ತು. ಆದರೆ ಅಲ್ಲಿ ಆಗಲೇ ಬಸವರಾಜ ಬೊಮ್ಮಾಯಿ, ಪ್ರಲ್ಹಾದ್ ಜೋಷಿ, ನಳಿನ್ ಕುಮಾರ್ ಕಟೀಲ್ ಗಳಿದ್ದು ಒಂದು ಸುತ್ತಿನ ಮಾತುಕತೆ ಮುಗಿದಿತ್ತು.

ಮತ್ತೊಂದು ಸುತ್ತಿನ ಮಾತುಕತೆಗಾಗಿ ಸ್ವಲ್ಪ ವಿರಾಮ ತೆಗೆದುಕೊಳ್ಳಲಾಗಿತ್ತು. ಆ ವಿರಾಮದ ಸಮಯದಲ್ಲಿ ಯಡಿಯೂರಪ್ಪನವರು ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ಕೇವಲ 5 ನಿಮಿಷಗಳ ಅವಧಿಯಲ್ಲಿಯೇ ಹೊರಬಂದದ್ದು ಈಗ ಬಿಜೆಪಿ ವಲಯದಲ್ಲಿ ಭಾರೀ ಕೋಲಾಹಲವನ್ನು ಎಬ್ಬಿಸಿದೆ. ಹಲವು ಅನುಮಾನಗಳಿಗೆ ಕಾರಣವಾಗಿದೆ. ಎಲ್ಲವೂ ಸರಿ ಇಲ್ಲ ಎಂಬ ಸಂದೇಶವನ್ನು ಸಾರುತ್ತಿದೆ.

ನಡ್ಡಾ ಮನೆಯಿಂದ ಹೊರಬಂದ ಯಡಿಯೂರಪ್ಪನವರ ಮನಸ್ಥಿತಿ ಸರಿ ಇರಲಿಲ್ಲ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳುತ್ತಾರೆ. ಮತ್ತೆ ಸಭೆ, ಚರ್ಚೆ, ಮಾತುಕತೆ ಯಾವುದಕ್ಕೂ ಆಸಕ್ತಿ ತೋರದ ಯಡಿಯೂರಪ್ಪನವರು ನೇರವಾಗಿ ವಿಮಾನ ನಿಲ್ದಾಣಕ್ಕೆ ತೆರಳಿ, ಸಂಜೆ 5ರ ಬೆಂಗಳೂರು ವಿಮಾನ ಏರಿದರು ಎಂದು ಬಿಜೆಪಿಯ ನಾಯಕರೊಬ್ಬರು ಹಂಚಿಕೊಂಡಿದ್ದಾರೆ.

ಬಿಜೆಪಿಯ ಮೂಲಗಳು ಹೇಳುವ ಪ್ರಕಾರ, ಶನಿವಾರ ನಡೆದ ಸಭೆಗಳಲ್ಲಿ ಯಡಿಯೂರಪ್ಪನವರು ಭಾಗಿಯಾಗಿದ್ದು, ತಮ್ಮದೇ ಆದ ಪಟ್ಟಿಯನ್ನು ದೆಹಲಿ ವರಿಷ್ಠರಿಗೆ ಕೊಟ್ಟಿದ್ದರಂತೆ. ಆ ಪಟ್ಟಿಯನ್ನು ಪರಿಗಣಿಸುವ ನಿಟ್ಟಿನಲ್ಲಿ ನಡೆದ ಸೋಮವಾರದ ಮೂರು ಸಭೆಗಳಲ್ಲಿ ಯಡಿಯೂರಪ್ಪನವರನ್ನು ಪ್ರಜ್ಞಾಪೂರ್ವಕವಾಗಿಯೇ ಹೊರಗಿಡಲಾಗಿತ್ತಂತೆ.

ಈ ಸುಳಿವು ಅರಿತ ಯಡಿಯೂರಪ್ಪನವರು ಸಿಡಿಸಿಡಿ ಅಂತಲೇ ಸುದ್ದಿ ಮಾಧ್ಯಮಗಳ ಕಣ್ಣಿಗೂ ಬೀಳದೆ, ನೇರವಾಗಿ ಬೆಂಗಳೂರಿನ ವಿಮಾನ ಹತ್ತಿದ್ದಾರೆಂಬ ಸುದ್ದಿ ಈಗ ದೆಹಲಿಯಿಂದ ಹೊರಬೀಳುತ್ತಿದೆ.

ಶಿವಮೊಗ್ಗಕ್ಕೆ ಪ್ರಧಾನಿ ಮೋದಿ ಬಂದಾಗ, ಯಡಿಯೂರಪ್ಪನವರನ್ನು ಹಾಡಿ ಹೊಗಳಿದ್ದರು. ಬೆಂಗಳೂರಿಗೆ ಅಮಿತ್ ಶಾ ಬಂದಾಗ ವಿಜಯೇಂದ್ರನ ಬೆನ್ನು ತಟ್ಟಿ ಶಹಬ್ಬಾಶ್ ಎಂದಿದ್ದರು. ಅವರ ಮನೆಯಲ್ಲಿಯೇ ಬೆಳಗಿನ ಉಪಾಹಾರ ಸೇವಿಸಿ, ಯಡಿಯೂರಪ್ಪನವರು ಪಕ್ಷಕ್ಕೆ ಎಷ್ಟು ಮುಖ್ಯ ಎನ್ನುವುದನ್ನು ಅವರ ನಡೆ-ನುಡಿಯಲ್ಲಿಯೇ ಬಹಿರಂಗಪಡಿಸಿದ್ದರು.

ಆದರೆ, ಅದೇ ಯಡಿಯೂರಪ್ಪನವರು ದೆಹಲಿಗೆ ಹೋದಾಗ, ನಾಯಕರು ಕೈಗೆ ಸಿಗದೆ ತಪ್ಪಿಸಿಕೊಂಡಿದ್ದಾರೆ. ಭೇಟಿಗೆ ನಿರಾಕರಿಸಿ ಅವಮಾನ ಮಾಡಿದ್ದಾರೆ. ತಾವು ಕೊಟ್ಟ ಪಟ್ಟಿಯನ್ನು ಪುರಸ್ಕರಿಸದೆ ತಿರಸ್ಕರಿಸಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...