ಮೋದಿ ಮಾರ್ಗದರ್ಶನದಂತೆ ಸಿಲಿಂಡರ್‌ಗೆ ಪೂಜೆ ಮಾಡಿ ಮತದಾನ: ಡಿ ಕೆ ಶಿವಕುಮಾರ್

Date:

ಎಲ್ಲ ಬೂತ್ ಬಳಿ ಖಾಲಿ ಅಡುಗೆ ಅನಿಲ ಸಿಲಿಂಡರ್ ಇಟ್ಟು ಪೂಜೆ ಮಾಡಿ ಮತದಾನ ಮಾಡುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದ್ದೇನೆ. ಪ್ರಧಾನಿ ಅವರ ಮಾರ್ಗದರ್ಶನದಂತೆ ಈ ಸೂಚನೆ ನೀಡಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಹೇಳಿದರು.

ಕನಕಪುರದಲ್ಲಿ ಮತದಾನ ಮಾಡುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ಕೆಂಕೇರಮ್ಮ ದೇವಿ ನಮ್ಮ ಮನೆ ದೇವರು. ನಾಮಪತ್ರ ಸಲ್ಲಿಕೆ ಮುನ್ನ ನಾವು ಇಲ್ಲಿ ಪೂಜೆ ಸಲ್ಲಿಸಿದ್ದೆವು. ಈಗ ಮತದಾನ ಮುನ್ನ ಪೂಜೆ ಸಲ್ಲಿಸುತ್ತಿದ್ದೇವೆ. ಇಲ್ಲಿಂದ ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ನಂತರ ಮತದಾನ ಮಾಡುತ್ತಿದ್ದೇವೆ” ಎಂದರು.

“ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವು ನೀಡಲು ಕಾಂಗ್ರೆಸ್ ಐದು ಗ್ಯಾರಂಟಿ ಯೋಜನೆ ಘೋಷಿಸಿದೆ. ಇಂದು ರಾಜ್ಯದಲ್ಲಿ ಬದಲಾವಣೆ ಮಾಡಿಕೊಳ್ಳುವ ದಿನ. ನಮ್ಮ ಭವಿಷ್ಯ ನಾವೇ ಬರೆದುಕೊಳ್ಳುವ ದಿನ. ನಮ್ಮ ಗ್ಯಾರಂಟಿ ಯೋಜನೆಗಳಿಗೆ ಮುದ್ರೆ ಒತ್ತುವ ದಿನ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ಪುತ್ರ ಹಾಗೂ ಪುತ್ರಿ ಇಬ್ಬರೂ ಈ ಬಾರಿ ಮೊದಲ ಬಾರಿಗೆ ಮತದಾನ ಮಾಡುತ್ತಿದ್ದಾರೆ. ಹೊಸ ಮತದಾರರಿಗೆ ಮತದಾನದ ಹುಮ್ಮಸ್ಸು ಇರುತ್ತದೆ. ರಾಜ್ಯದ ಎಲ್ಲ ಯುವ ಮತದಾರರಿಗೆ ಶುಭ ಕೋರಿ, ರಾಜ್ಯಕ್ಕೆ ದೊಡ್ಡ ಬದಲಾವಣೆ ತರುವ ಜವಾಬ್ದಾರಿ ಇದ್ದು ಅದನ್ನು ಸಮರ್ಥವಾಗಿ ನಿಭಾಯಿಸುವಂತೆ ಸಲಹೆ ನೀಡುತ್ತೇನೆ. ಯುವ ಮತದಾರರು ಪ್ರಜ್ಞಾವಂತರಾಗಿದ್ದು, ಈ ದುರಾಡಳಿತವನ್ನು ಕೊನೆಗಾಣಿಸುತ್ತಾರೆ ಎಂದು ಭಾವಿಸಿದ್ದೇನೆ. ಈ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ರಾಜೀವ್ ಗಾಂಧಿ ಅವರು. ಈ ಯುವ ಮತದಾರರು ಪ್ರಜಾಪ್ರಭುತ್ವದ ಆಚರಣೆ ಮಾಡಲಿ” ಎಂದು ತಿಳಿಸಿದರು.

ಸಚಿವ ಅಶೋಕ್ ನಿಮ್ಮ ವಿರುದ್ಧ ಸ್ಪರ್ಧೆ ಮಾಡಿದ್ದು, ಎಷ್ಟು ಅಂತರದಿಂದ ಗೆಲುವು ಸಾಧಿಸುತ್ತೀರಿ ಎಂದು ಕೇಳಿದಾಗ,”ಅಶೋಕ್ ಅವರು, ಮುಖ್ಯಮಂತ್ರಿಗಳು ಇಲ್ಲಿ ಬಂದು ಪ್ರಚಾರ ಮಾಡಿದ್ದಾರೆ. ಇದು ಗುಪ್ತ ಮತದಾನ, ಯಾರು ಗೆಲ್ಲುತ್ತಾರೆ ಎಂದು 13ರಂದು ನೋಡೋಣ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...