ಕೈಲಾಸಗಿರಿ ನಗರ ಸಾರಿಗೆ ಸಂಚಾರ ವ್ಯವಸ್ಥೆಗೆ ಸಚಿವರಿಂದ ಚಾಲನೆ

Date:

ಚಿಂತಾಮಣಿ : ಚಿಂತಾಮಣಿ ನಗರಕ್ಕೆ ಸಮೀಪವಿರುವ ಗ್ರಾಮಗಳನ್ನು ಸೇರಿಸಿಕೊಂಡು ಕೈಲಾಸಗಿರಿ ನಗರ ಸಾರಿಗೆ ಸಂಚಾರ ವ್ಯವಸ್ಥೆಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸರ್ಕಾರಿ ಬಸ್‌ ನಿಲ್ದಾಣದಲ್ಲಿ ಚಾಲನೆ ನೀಡಿದರು.

ನಗರದ ಮತ್ತು ಸುತ್ತಮುತ್ತಲ ಹಳ್ಳಿಗಳಿಗೆ ನಿರಂತರವಾಗಿ ಬಸ್ ವ್ಯವಸ್ಥೆ ಕಲ್ಪಿಸುವ ನಗರ ಸಾರಿಗೆ ಸಂಚಾರದ ಯೋಜನೆಯನ್ನು ಆರಂಭಿಸಲು 2012 ರಲ್ಲೇ ಪ್ರಯತ್ನ ನಡೆಸಿದ್ದೆ ಬೆಳಿಗ್ಗೆಯಿಂದ ಸಂಜೆಯವರೆಗೂ ಬಸ್ ಗಳು ಸಂಚರಿಸುತ್ತಿರಬೇಕು ಎಂದು ಕನಸು ಕಂಡಿದ್ದೆ. ಕಾರಣಾಂತರಗಳಿಂದ ಕನಸು ನನಸಾಗಲಿಲ್ಲ. 2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಮತ್ತೆ ಪ್ರಯತ್ನ ನಡೆಸಿದೆ. ಆದರೆ ಬಹಳಷ್ಟು ಸಮಸ್ಯೆಗಳಿದ್ದವು. ಹಿಂದಿನ ಸರ್ಕಾರಗಳು ಬಸ್ ಗಳ ಖರೀದಿ ಮಾಡಿರಲಿಲ್ಲ, ಚಾಲಕರ ಮತ್ತು ನಿರ್ವಾಹಕರ ನೇಮಕ ಮಾಡಿರದೆ ಕೊರತೆ ಇತ್ತು ಎಂದರು.

2023 ರಲ್ಲಿ ಅಧಿಕಾರಕ್ಕೆ ಬಂದ ನಂತರ ಮತ್ತೆಪ್ರಯತ್ನ ಮುಂದುವರೆಸಿ ಒತ್ತಡ ತಂದಿದ್ದರಿಂದ 5 ಬಸ್ ನೀಡಿದ್ದಾರೆ. 12 ಮೀಟರ್ ಉದ್ದದ ಡಬಲ್ ಡೋರ್ ನ ಎರಡು ಬಸ್ ಗಳು ಹಾಗೂ 8 ಮೀಟರ್ ಉದ್ದ 3 ಬಸ್ ಗಳಿವೆ. ಆರಂಭದಲ್ಲಿ 5 ಮಾರ್ಗಗಳನ್ನು ಆರಂಭಿಸಲಾಗುತ್ತದೆ.ಚಿಂತಾಮಣಿಯಿಂದ ಕೈವಾರ ಮೂಲಕ ಎಚ್.ಕ್ರಾಸ್, ಚಿಂತಾಮಣಿಯಿಂದ-ಶ್ರೀನಿವಾಸಪುರ, ಚಿಂತಾಮಣಿ-ಶಿಡ್ಲಘಟ್ಟ, ಚಿಂತಾಮಣಿ-ಪೆದ್ದೂರು, ಚಿಂತಾಮಣಿ-ದಿಬ್ಬೂರಹಳ್ಳಿ ಮಾರ್ಗಗಳಿಗೆ ಇಂದು ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ ಮಾತನಾಡಿ ಚಿಕ್ಕಬಳ್ಳಾಪುರ ವಿಭಾಗದಲ್ಲಿ 6 ಘಟಕಗಳಿವೆ. ಚಿಂತಾಮಣಿ ಘಟಕದಿಂದ 120 ಮಾರ್ಗಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಪ್ರತಿನಿತ್ಯ 46 ಸಾವಿರ ಕಿ.ಮೀ ದೂರವನ್ನು ಕ್ರಮಿಸಿ ಸುಮಾರ 46 ಸಾವಿರ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ ಇದುವರೆಗೆ 2.46 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಚಿಂತಾಮಣಿ ಘಟಕದಿಂದ ಸುಮಾರು 20 ಸಾವಿರ ಮಹಿಳಾ ಪ್ರಯಾಣಿಕರ ಟ ್ರಿಪ್‌ ಗಳಿಂದ 8 ಲಕ್ಷ ಆದಾಯ ಸಂಗ್ರಹವಾಗಿದೆ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಾಥ್ ಬಾಬುರೆಡ್ಡಿ,ಡಿ. ವೈ. ಎಸ್. ಪಿ ಮುರಳಿಧರ್,ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮುನಿ ನಾರಾಯಣಪ್ಪ,ಕೃಷಿಕ ಸಮಾಜದ ಅಧ್ಯಕ್ಷ ಜಯರಾಮರೆಡ್ಡಿ, ನಗರಸಭೆ ಆಯುಕ್ತ ಚಲಪತಿ, ಕೆ .ಎಸ್ .ಆರ್. ಟಿ. ಸಿ ಡಿಪೋ ವ್ಯವಸ್ಥಾಪಕಿ ಸರಿತಾ,ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್‌.ಅಶೋಕಕುಮಾರ್‌,ನಗರ ಯೋಜನಾ ಪ್ರಾಧಿಕಾರದ ಸದಸ್ಯರಾದ ಸುರೇಶ್, ಶ್ರೀನಿವಾಸ್,ಮುಖಂಡರಾದ ಚಿನ್ನಪ್ಪ, ಸುಬ್ರಮಣಿ ಸ್ವಾಮಿ,ಮುದ್ದಲಳ್ಳಿ ಲಕ್ಷ್ಮಿಯ್ಯ ,ಕೆ .ಎಸ್ .ಆರ್. ಟಿ. ಸಿ ಚಂದ್ರು,ರಾಜೇಶ್,ರಾಮಯ್ಯ,ಏ ಆರ್ ಟಿ ಓ ಅಧಿಕಾರಿ ಬೈರಾರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related