ಚಿಕ್ಕಮಗಳೂರು | ಅಕ್ರಮ ಮದ್ಯಕ್ಕೆ ನಾಲ್ಕನೇ ಬಲಿ; ರಸ್ತೆಯಲ್ಲಿ ಶವವಿಟ್ಟು ಪ್ರತಿಭಟಿಸಿದ ಗ್ರಾಮಸ್ಥರು

Date:

  • ಅಧಿಕಾರಿಗಳು ಗ್ರಾಮಕ್ಕೆ ಬಂದು ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ
  • ಮದ್ಯ ಸೇವನೆಯಿಂದ ಇದೇ ಗ್ರಾಮದ ಮೂವರು ಯುವಕರು ಹಿಂದೆ ಮೃತಪಟ್ಟಿದ್ದರು

ಗ್ರಾಮೀಣ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಇದರಿಂದಾಗಿ ಅನೇಕ ಕುಟುಂಬಗಳು ಬೀದಿ ಬೀಳುತ್ತಿವೆ. ಗ್ರಾಮಗಳಲ್ಲಿಯೇ ಸುಲಭವಾಗಿ ಮದ್ಯ ಸಿಗುವುದರಿಂದ ಕುಡಿತದ ಚಟಕ್ಕೆ ಅನೇಕರು ತಮ್ಮ ಬದುಕು ಕಳೆದುಕೊಳ್ಳುತ್ತಿದ್ದಾರೆ.

ಕುಡಿತದ ಚಟಕ್ಕೆ ಪ್ರಾಣವನ್ನೇ ಕಳೆದುಕೊಂಡ ಒಂದು ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆಗೂರು ಗ್ರಾಮ ಕಿತ್ಲೆಗೊಳಿ ಸೈಟ್ ನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಆದಿವಾಸಿ ಸಮುದಾಯದ ಕೂಲಿ ಕಾರ್ಮಿಕ ಪುಟ್ಟೇಗೌಡ ವಿಪರೀತ ಮದ್ಯ ಸೇವಿಸಿ ಮೃತಪಟ್ಟಿದ್ದಾರೆ.

ಪುಟ್ಟೇಗೌಡ ಅವರ ಪತ್ನಿ ಮಂಗಳವಾರ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ತೆರಳಿದ್ದರು. ಸಂಜೆ 3 ಗಂಟೆ ಸಮಾರಿಗೆ ಮನೆಗೆ ಹಿಂತಿರುಗಿ ಬಂದು ನೋಡಿದಾಗ ಪುಟ್ಟೇಗೌಡ ನಿಧನರಾಗಿರುವುದು ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಬುಧವಾರ ಗ್ರಾಮಸ್ಥರು ಪುಟ್ಟೇಗೌಡ ಅವರ ಶವವನ್ನು ರಸ್ತೆಯಲ್ಲಿಯೇ ಇಟ್ಟು ಪ್ರತಿಭಟನೆ ನಡೆಸಿದರು. “ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಆಗಮಿಸಿ, ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಮದ್ಯ ಮಾರಾಟ ನಿಲ್ಲಿಸಬೇಕು. ಅಲ್ಲಿಯ ವರೆಗೂ ಶವ ತೆಗೆಯುವುದಿಲ್ಲ” ಎಂದು ಗ್ರಾಮಸ್ಥರು ಪಟ್ಟು ಹಿಡಿದರು.

“ಗ್ರಾಮದಲ್ಲಿ ಹಲವು ತಿಂಗಳಿನಿಂದ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮೊದಲು 15 ಕಿ.ಮೀ ದೂರ ಹೋಗಿ ಮದ್ಯ ಸೇವಿಸಬೇಕಿತ್ತು. ಗ್ರಾಮದಿಂದ ದೂರ ಇದ್ದಿದ್ದರಿಂದ ಯಾರೂ ನಿತ್ಯ ಮದ್ಯ ಸೇವಿಸುತ್ತಿರಲಿಲ್ಲ. ಆದರೆ, ಈಗ ಗ್ರಾಮದಲ್ಲಿಯೇ ಸುಲಭವಾಗಿ ಮದ್ಯ ಸಿಗುವುದರಿಂದ ನಿತ್ಯ ಹಗಲಿನಲ್ಲಿಯೇ ಕುಡಿಯುವರ ಸಂಖ್ಯೆ ಹೆಚ್ಚಾಗಿದೆ” ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡರು.

ವಿಪರೀತವಾಗಿ ಮದ್ಯ ಸೇವನೆಯಿಂದ ಗ್ರಾಮದ ಮೂರು ಮಂದಿ ಮಧ್ಯಮ ವಯಸ್ಸಿನವರು ಮೃತಪಟ್ಟಿದ್ದಾರೆ. ಈ ಸಮಸ್ಯೆ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು.

ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನು ನಿಲ್ಲಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಆದಿವಾಸಿ ಬುಡಕಟ್ಟು ಸಮುದಾಯದವರು, ಗ್ರಾಮಸ್ಥರು ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು ಎಂದು ‘ಕರ್ನಾಟಕ ಜನಶಕ್ತಿ’ಯ ವೆಂಕಟೇಶ್, ರಾಧಾ ಹಾಗೂ ವಾಲ್ಮೀಕಿ ಸಂಘಟನೆಯ ಶ್ರೀನಿವಾಸ್ ‘ಈದಿನ.ಕಾಮ್’ಗೆ ತಿಳಿಸಿದ್ದಾರೆ.

(ಮಾಸ್ ಮೀಡಿಯಾ ಹಾಸನ, ಚಿಕ್ಕಮಗಳೂರು ಜಿಲ್ಲಾ ಸಂಯೋಜಕಿ ಗಿರಿಜಾ ಎಸ್ ಜಿ ಮಾಹಿತಿ ಆಧರಿಸಿದ ವರದಿ)

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...