ಚಿತ್ರದುರ್ಗ | ರೈತರಿಗೆ ಬೆಳೆವಿಮೆ ಮಧ್ಯಂತರ ಪರಿಹಾರಕ್ಕೆ ಜಿಲ್ಲಾಧಿಕಾರಿ ಶಿಫಾರಸು

Date:

ಚಿತ್ರದುರ್ಗ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆಯಿಂದ ಬರ ಆವರಿಸಿದೆ. ಮಳೆ ಆಶ್ರಿತ ಬೆಳೆಗಳು ಶೇ.80ರಿಂದ 100ರಷ್ಟು ಹಾನಿಯಾಗಿದ್ದು, ಬೆಳೆ ವಿಮೆ ಕಂಪನಿಗಳು ಶೇ.25ರಷ್ಟು ತುರ್ತು ಮಧ್ಯಂತರ ಪರಿಹಾರವನ್ನು ನೀಡುಬೇಕೆಂದು, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು .ಜಿ.ಆರ್.ಜೆ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ಹವಾಮಾನ ತಜ್ಞರು, ವಿಮಾ ಕಂಪನಿ ಪ್ರತಿನಿಧಿಗಳು ಹಾಗೂ ಜಿಲ್ಲೆಯ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ಮಾತನಾಡಿದರು.

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಂಪೂರ್ಣ ಮಳೆ ಕೊರತೆ ಉಂಟಾಗಿದೆ. ರಾಜ್ಯ ಸರ್ಕಾರ ಬರ ಘೋಷಣೆಗೆ ತೀರ್ಮಾನ ಮಾಡಿದೆ. ಕೃಷಿ ಸಚಿವರು ಮಳೆ ಕೊರತೆಯಿಂದ ಬೆಳೆ ಹಾನಿ ಉಂಟಾದ ಜಿಲ್ಲೆಯ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಮುಖ ಬೆಳೆಗಾಳದ ಶೇಂಗಾ, ಮುಸುಕಿನ ಜೋಳ, ಜೋಳ, ರಾಗಿ, ಸಿರಿಧಾನ್ಯಗಳು, ತೊಗರಿ, ಸೂರ್ಯಕಾಂತಿ, ಹತ್ತಿ, ಈರುಳ್ಳಿ ಸೇರಿದಂತೆ, ಇತರೆ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯ ರೈತರ ಹಿತ ಕಾಯುವ ನಿಟ್ಟಿನಲ್ಲಿ ತಕ್ಷಣವೇ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಶೇ.25ರಷ್ಟು ಮಧ್ಯಂತರ ಬೆಳೆ ಪರಿಹಾರವನ್ನು ವಿಮಾ ಕಂಪನಿಗಳು ನೀಡುವಂತೆ ಶಿಫಾರಸ್ಸು ಮಾಡಲಾಗುವುದು. ರೈತರು ಈ ಕುರಿತು ಗೊಂದಲಗಳಿಗೆ ಒಳಗಾವುದು ಬೇಡ ಎಂದಿದ್ದಾರೆ ಜಿಲ್ಲಾಧಿಕಾರಿಗಳು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದೆ. ಜಿಲ್ಲೆಯ 2,98,150 ಹೆಕ್ಟೇರ್ ಕೃಷಿ ಭೂಮಿ ಪೈಕಿ, 2,81,395 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬಿತ್ತನೆಯಾಗಿದೆ. ಶೇ.94.38ರಷ್ಟು  ಬಿತ್ತನೆ ಪ್ರಮಾಣ ದಾಖಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲೆಯಲ್ಲಿ 83,606 ರೈತರು ನೊಂದಣಿ ಮಾಡಿಕೊಡಿದ್ದಾರೆ. ಒಟ್ಟು 11.92 ಕೋಟಿ ರೂಪಾಯಿ ಪ್ರೀಮಿಯಂ ಮೊತ್ತ ಪಾವತಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.

 ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಓಂಕಾರಪ್ಪ ಮಾತನಾಡಿ, ಕೃಷಿ ಇಲಾಖೆಯ ಕೋರಿಕೆಯಂತೆ ಮಳೆಕೊರತೆಯಿಂದ ಉಂಟಾದ ಹಾನಿ ಬಗ್ಗೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಕೃಷಿ ವಿಜ್ಞಾನಿಗಳ ತಂಡ ಪರಿಶೀಲನೆ ನೆಡೆಸಿದೆ. ಚಳ್ಳಕೆರೆ ಭಾಗದಲ್ಲಿ ಶೇಂಗಾ ಬೆಳೆ ಸಂಪೂರ್ಣವಾಗಿ ವಿಫಲವಾಗಿದೆ. ಶೇಂಗಾ ಜಿಲ್ಲೆಯಲ್ಲಿ ಕಾಳುಗಟ್ಟಲು ಸಾಧ್ಯವೇ ಇಲ್ಲ. ಹೆಚ್ಚು ಬಿತ್ತನೆಯಾಗಿರುವ ಮೆಕ್ಕೆಜೋಳ ಮೂರು ಅಡಿ ಎತ್ತರ ಬೆಳೆದಿದ್ದರು, ಮಳೆ ಕೊರತೆಯಿಂದ ಕಾಳುಗಟ್ಟಿಲ್ಲ. ರೈತರು ರಾಗಿಯನ್ನು ಎರೆಡು ಬಾರಿ ಬಿತ್ತನೆ ಮಾಡಿದರೂ ಬೆಳೆ ಕೈಗೆ ಬರುವ ಯಾವ ಲಕ್ಷಣಗಳು ಇಲ್ಲ. ಮಳೆ ಕೊರತೆಯಿಂದ ಈರುಳ್ಳಿ ಸಹ ಬಾಧಿತವಾಗಿದೆ. ಜಿಲ್ಲೆಯಲ್ಲಿ ಶೇ.100ರಷ್ಟು ಬೆಳೆ ಹಾನಿಯಾಗಿದೆ ಎಂದರು.

ಚಿತ್ರದುರ್ಗ ತಾಲ್ಲೂಕು ತುರವನೂರು ಹೋಬಳಿ ಹುಣಸೆಕಟ್ಟೆ ಗ್ರಾಮದಲ್ಲಿ ಸೇವಂತಿ ಬೆಳೆ ನುಸಿರೋಗ ಬಾಧೆಯಿಂದ ಹಾನಿಗೆ ಒಳಗಾಗಿದೆ. ಹೊಸದುರ್ಗ ಹಾಗೂ ಹೊಳಲ್ಕೆರೆ ಭಾಗದಲ್ಲಿ ತೆಂಗಿನ ತೋಟದಲ್ಲಿ ಕಪ್ಪು ತಲೆ ಉಳುವಿನ ಬಾದೆ ಹೆಚ್ಚಾಗಿ ಕಂಡುಬರುತ್ತಿದೆ. ಈ ಎರಡು ಪ್ರಕರಣಗಳು ಕೀಟ ಬಾಧೆ ಆಗಿವೆ. ಇವನ್ನು ಪ್ರಕೃತಿ ವಿಕೋಪದಡಿ ಪರಿಗಣಿಸಲು ಸಾಧ್ಯವಿಲ್ಲ. ಇದಕ್ಕಾಗಿ ವಿಶೇಷ ಘೋಷಣೆ ಮಾಡುವ ನಿರೀಕ್ಷೆ ಇದೆ. ಇದರಲ್ಲಿ ಬೆಳೆಗೆ ಅಗತ್ಯ ಇರುವ ಔಷಧ ಹಾಗೂ ಪರಿಕರಗಳನ್ನು ರೈತರಿಗೆ ನೀಡಲಾಗುವುದು ಎನ್ನುತ್ತಾರೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...