ಚಿತ್ತಾಪುರ | ರೌಡಿಶೀಟರ್ ಮಣಿಕಂಠ ಪರ ಪ್ರಧಾನಿ ಮೋದಿ ಪ್ರಚಾರ

Date:

  • ಬಿಜೆಪಿ ಅಭ್ಯರ್ಥಿ ಮಣಿಕಂಠ ವಿರುದ್ಧ 40 ಪ್ರಕರಣ
  • ಮೇ 6ರಂದು ಚಿತ್ತಾಪುರದ ರಾವೂರದಲ್ಲಿ ಸಮಾವೇಶ

ಗಡಿಪಾರಾಗಿದ್ದ ರೌಡಿಶೀಟರ್, ಚಿತ್ತಾಪುರದ ಬಿಜೆಪಿ ಅಭ್ಯರ್ಥಿ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮೇ 6ರಂದು ಪ್ರಚಾರ ನಡೆಸಲಿದ್ದಾರೆ.

ಹಾಲಿ ಶಾಸಕ ಪ್ರಿಯಾಂಕ್‌ ಖರ್ಗೆ ಅವರನ್ನು ಹಣಿಯಲು ಬಿಜೆಪಿ ನಾನಾ ರಣತಂತ್ರಗಳನ್ನು ರೂಪಿಸಿದೆ. ಇದರ ಭಾಗವಾಗಿಯೇ ಅಕ್ಕಿ ಕಳ್ಳತನದ ಆರೋಪ ಹೊತ್ತಿರುವ ಮತ್ತು ಚಿತ್ತಾಪುರದಿಂದ ಗಡಿಪಾರಾಗಿದ್ದ ರೌಡಿಶೀಟರ್‌ ಮಣಿಕಂಠ ರಾಠೋಡ್‌ಗೆ ಟಿಕೆಟ್ ನೀಡಿದೆ.

ಕಮಲ ಪಾಳಯದ ಈ ನಿರ್ಧಾರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಇದರ ಬೆನ್ನಲ್ಲೇ ದೇಶದ ಪ್ರಧಾನ ಮಂತ್ರಿ ಮೋದಿ ಅವರೇ ಆತನ ಪರ ಪ್ರಚಾರಕ್ಕೆ ಇಳಿಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕುರಿತು ಮಾತನಾಡಿರುವ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್, “ಪ್ರಧಾನಿ ಮೋದಿ ಅವರು ಮೇ 2ರಂದು ಕಲಬುರಗಿಯಲ್ಲಿ ರೋಡ್ ಶೋ ನಡೆಸಿ ವಾಪಸ್‌ ತೆರಳುತ್ತಾರೆ. ನಂತರ ಮೇ 6ರಂದು ಚಿತ್ತಾಪುರ ಕ್ಷೇತ್ರದ ರಾವೂರ ಸಮೀಪದ ಸಮಾವೇಶ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಪ್ರಚಾರಕ್ಕೆ ಬರುತ್ತಿರುವ ಬಿಜೆಪಿ ಅಭ್ಯರ್ಥಿಯ ಮೇಲೆ ರಾಜ್ಯದಲ್ಲಿ ಮಾತ್ರವಲ್ಲದೆ ತೆಲಂಗಾಣ ಮತ್ತು ಮಹಾರಾಷ್ಟ್ರದ ವಿವಿಧ ಪೊಲೀಸ್ ಠಾಣೆಗಳಲ್ಲಿ 40 ಪ್ರಕರಣಗಳು ದಾಖಲಾಗಿವೆ.

ಈ ಸುದ್ದಿ ಓದಿದ್ದೀರಾ? ಗೋಕಾಕ್‌ | ಕಾಂಗ್ರೆಸ್‌ ಜೊತೆ ‘ಕೈ’ ಜೋಡಿಸಿದ ಜೆಡಿಎಸ್ ಅಭ್ಯರ್ಥಿ ಉಚ್ಚಾಟನೆ?

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ್ ಖರ್ಗೆ, “ಶಿಕ್ಷೆಗೆ ಒಳಗಾದ ಕಳ್ಳನ ಪರವಾಗಿ ಪ್ರಧಾನಿ ಮೋದಿ ಅವರು ಮತ ಕೇಳಲು ಬರುತ್ತಿದ್ದಾರೆ. ಅವರಲ್ಲಿ ಯಾವ ನೈತಿಕತೆಯಿದೆ?” ಎಂದು ಪ್ರಶ್ನಿಸಿದ್ದಾರೆ.

ಟ್ವೀಟ್ ಮಾಡಿ ಪ್ರಧಾನಿ ವಿರುದ್ಧ ಕುಟುಕಿರುವ ಕಾಂಗ್ರೆಸ್, “ಗಡಿಪಾರಾಗಿದ್ದ ರೌಡಿಶೀಟರ್ ಹಾಗೂ ಸರ್ಕಾರದ ಅಕ್ಕಿ ಕಳ್ಳತನದ ಆರೋಪಿಗೆ ಟಿಕೆಟ್ ನೀಡಿರುವುದು ಬಿಜೆಪಿಯ ನೈತಿಕ ದಿವಾಳಿತನಕ್ಕೆ ಸಾಕ್ಷಿಯಾಗಿತ್ತು” ಎಂದು ಹೇಳಿದೆ.ಕಾಂಗ್ರೆಸ್ 2

“ಈಗ ಪ್ರಧಾನಿ ಮೋದಿ ಕಳ್ಳಕಾಕರ ಪರ ಮತ ಕೇಳಲು ಬರುವ ಮೂಲಕ ಈ ದೇಶಕ್ಕೆ ಕಳಂಕ ತರುತ್ತಿದ್ದಾರೆ. ರೌಡಿಗಳಿಗೆ ಕೈಮುಗಿಯುವ ಹಾಗೂ ಮತ ಕೇಳುವ ಮೂಲಕ ಪ್ರಧಾನಿ ಹುದ್ದೆಯ ಘನತೆ ಕಳೆದಿದ್ದಾರೆ” ಎಂದು ವ್ಯಂಗ್ಯವಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...