ಕಾಂಗ್ರೆಸ್‌-ಬಿಜೆಪಿ ವಾಕ್ಸಮರ: ರಾಷ್ಟ್ರ ಮತ್ತು ರಾಜ್ಯ ನಾಯಕರ ಪ್ರಚಾರ ನಿಷೇಧಕ್ಕೆ ಒತ್ತಾಯ

Date:

ಮೋದಿಯನ್ನು ವಿಷಸರ್ಪ ಎಂದಿದ್ದ ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ಹೇಳಿಕೆಯನ್ನು ದಾಳವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗಿತ್ತು. ಇದೇ ಹೊತ್ತಿನಲ್ಲಿ, ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಬಿಜೆಪಿ ಶಾಸಕ ಯತ್ನಾಳ್‌ ವಿಷಕನ್ಯೆ ಎಂದು ಕರೆದಿದ್ದು, ಬಿಜೆಪಿಗೆ ಕೈಗೆ ಬಂದ ತುತ್ತು ಬಾಯಿಗೆ ಬರದಂತಾಯಿತು. 

ಕರ್ನಾಟಕದ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ತೀವ್ರ ಮಾತಿನ ಚಕಮಕಿ ನಡೆಯುತ್ತಿದೆ. ಉಭಯ ಪಕ್ಷಗಳು ತಮ್ಮ ರಾಷ್ಟ್ರ ನಾಯಕರು ಮತ್ತು ಇತರ ರಾಜ್ಯಗಳ ಸ್ಟಾರ್‌ ಪ್ರಚಾರಕನ್ನು ಪ್ರಚಾರಕ್ಕಾಗಿ ರಾಜ್ಯಕ್ಕೆ ಕರೆಸುತ್ತಿವೆ. ಈ ನಡುವೆ, ಇದೇ ಪಕ್ಷಗಳು ಹೊರ ರಾಜ್ಯಗಳ ನಾಯಕರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಮಾಡುವುದನ್ನು ನಿಷೇಧಿಸಬೇಕೆಂದು ಚುನಾವಣಾ ಆಯೋಗದ ಮೊರೆ ಹೋಗಿವೆ.

ಮೋದಿ ಅವರನ್ನು ವಿಷಸರ್ಪವೆಂದಿರುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕು ಮತ್ತು ಅವರು ಪ್ರಚಾರ ಮಾಡದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಕೋರಿದೆ. ಇತ್ತ, ಅಲ್ಪಸಂಖ್ಯಾತರ ವಿರುದ್ಧ ಹೇಳಿಕೆ ನೀಡಿ, ಕೋಮು ಪ್ರಚೋದನೆ ನೀಡುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇಲೆ ನಿರ್ಬಂಧ ಹೇರಬೇಕೆಂದು ಕಾಂಗ್ರೆಸ್ ಒತ್ತಾಯಿಸಿದೆ.

ಕೇಂದ್ರ ಸಚಿವ ಭೂಪೇಂದರ್ ಯಾದವ್ ನೇತೃತ್ವದ ಬಿಜೆಪಿ ನಿಯೋಗವು ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ, ಖರ್ಗೆ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಮತ್ತು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯಬೇಕು ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಾದವ್, “ಖರ್ಗೆ ಅವರ ಹೇಳಿಕೆ ಕೇವಲ ಅಚಾನಕ್‌ ಆಗಿ ಹೇಳಿರುವುದಲ್ಲ. ಅದು, ಕಾಂಗ್ರೆಸ್‌ನ ದ್ವೇಷ ರಾಜಕೀಯದ ಭಾಗವಾಗಿದೆ. ಮೋದಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಖರ್ಗೆ ವಿರುದ್ಧ ಮಾನನಷ್ಟಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 499 ಮತ್ತು 500 ಹಾಗೂ ಉದ್ದೇಶಪೂರ್ವಕ ಅವಮಾನ ಮತ್ತು ಪ್ರಚೋದನೆಗೆ ಸಂಬಂಧಿಸಿದ ಸೆಕ್ಷನ್ 504ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಒತ್ತಾಯಿದ್ದೇವೆ” ಎಂದಿದ್ದಾರೆ.

“ಭಾರತೀಯ ಸಮಾಜದಲ್ಲಿ ಯಾರನ್ನಾದರೂ ವಿಷಪೂರಿತ ಹಾವಿಗೆ ಹೋಲಿಸುವುದೆಂದರೆ, ಆ ವ್ಯಕ್ತಿಯನ್ನು ‘ಶತ್ರು, ನಂಬಲಾಗದ ವಿಶ್ವಾಸದ್ರೋಹಿ, ವಿಶ್ವಾಸಘಾತುಕ ಮತ್ತು ವಂಚಕ’ ಎಂದು ಬಿಂಬಿಸಿದಂತೆ. ಖರ್ಗೆ ಅವರನ್ನು ಕರ್ನಾಟಕ ಚುನಾವಣೆಗಳಲ್ಲಿ ಪ್ರಚಾರ ಮಾಡದಂತೆ ನಿರ್ಬಂಧಿಸಬೇಕು ಮತ್ತು ಇಂತಹ ಕಟುವಾದ ಪ್ರಚಾರವನ್ನು ತಡೆಗಟ್ಟಬೇಕು” ಎಂದು ಬಿಜೆಪಿ ಒತ್ತಾಯಿಸಿದೆ.

ಮೋದಿ ಕುರಿತ ಹೇಳಿಕೆ ಬಗ್ಗೆ ಆಕ್ರೋಶ ಭುಗಿಲೆದ್ದ ಬಳಿಕ, ಖರ್ಗೆ ಅವರು “ತಮ್ಮ ಹೇಳಿಕೆಗಳು ಪ್ರಧಾನಿಯನ್ನು ಉದ್ದೇಶಿಸಿಲ್ಲ. ಆದರೆ, ಆಡಳಿತಾರೂಢ ಬಿಜೆಪಿ ಮತ್ತು ಅದರ ಸಿದ್ಧಾಂತವನ್ನು ಗುರಿಯಾಗಿಸಿಕೊಂಡಿವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈ ಸಮೀಕ್ಷಾ ವರದಿ ಓದಿದ್ದೀರಾ?: ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

ಖರ್ಗೆ ಅವರ ಹೇಳಿಕೆಗೆ ಪ್ರತಿಯಾಗಿ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶುಕ್ರವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ‘ವಿಷಕನ್ಯೆ’ ಎಂದು ಕರೆದು, ವಿವಾದ ಸೃಷ್ಟಿಸಿದ್ದಾರೆ.

‘ವಿಷಕನ್ಯೆ’ ಹೇಳಿಕೆ ನೀಡಿರುವ ಯತ್ನಾಳ್ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯಿಸಿದೆ. “ಶಾ ಮತ್ತು ಆದಿತ್ಯನಾಥ್ ಅವರು ಕರ್ನಾಟಕದಲ್ಲಿ ಚುನಾವಣಾ ಪ್ರಚಾರದ ಸಮಯದಲ್ಲಿ ‘ಸುಳ್ಳು, ಪಕ್ಷಪಾತ ಮತ್ತು ಕೋಮುವಾದಿ’ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕೋಮು ಸೌಹಾರ್ದತೆಯ ವಾತಾವರಣವನ್ನು ಕದಡಲು ಯತ್ನಿಸುತ್ತಿದ್ದಾರೆ. ಅವರು ರಾಜ್ಯದಲ್ಲಿ ಪ್ರಚಾರ ಮಾಡದಂತೆ ನಿಷೇಧಿಸಬೇಕು” ಎಂದು ಚುನಾವಣಾ ಆಯೋಗವನ್ನು ಕಾಂಗ್ರೆಸ್‌ ಒತ್ತಾಯಿಸಿದೆ.

“ಚುನಾವಣೆ ಮುಗಿಯುವವರೆಗೆ ಎಲ್ಲ ಪ್ರಚಾರ ಚಟುವಟಿಕೆಗಳಿಂದ ಅಮಿತ್ ಶಾ ಅವರನ್ನು ನಿರ್ಬಂಧಿಸಬೇಕು. ಅವರು ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಡಿಯೋಗಳ ಪ್ರಚಾರವನ್ನು ತಡೆಯಬೇಕು” ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಬೆಂಗಳೂರಿನ ಚುನಾವಣಾ ಆಯೋಗದ ಕಚೇರಿ ಹೊರಗೆ ಮಾತನಾಡಿದ ಸುರ್ಜೇವಾಲಾ, “ನಾವು ಆಯೋಗದೊಂದಿಗೆ ಮಹತ್ವದ ಸಭೆ ನಡೆಸಿದ್ದೇವೆ. ವಿಶೇಷವಾಗಿ ಬಿಜೆಪಿಯ ಉನ್ನತ ನಾಯಕತ್ವದಿಂದ ಬರುವ ಅತ್ಯಂತ ಆಕ್ಷೇಪಾರ್ಹ, ಪಕ್ಷಪಾತ, ಕೋಮುವಾದಿ ಮತ್ತು ಸುಳ್ಳು ಹೇಳಿಕೆಗಳನ್ನು ನೀಡುವವರ ಬಗ್ಗೆ ದೂರು ನೀಡಿದ್ದೇವೆ. ಗೃಹ ಸಚಿವ ಅಮಿತ್ ಶಾ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಅಂತಹ ವ್ಯಕ್ತಿಗಳ ಪ್ರಚಾರವನ್ನು ನಿಷೇಧಿಸುವಂತೆ ಮನವಿ ಮಾಡಿದ್ದೇವೆ” ಎಂದಿದ್ದಾರೆ.

“ಚುನಾವಣಾ ಸೋಲಿನ ಭಯದಿಂದ ಮತ್ತು ಮತದಾರರನ್ನು ತಮ್ಮತ್ತ ಸೆಳೆಯುವ ಉದ್ದೇಶದಿಂದ ಅಮಿತ್ ಶಾ ಅವರು ಮತದಾರರ ಮುಂದೆ ಸುಳ್ಳು ಮತ್ತು ಆಧಾರರಹಿತ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ನೀಡುತ್ತಿದ್ದಾರೆ. ಆ ಮೂಲಕ, ರಾಜ್ಯದ ಕಾನೂನು ಪಾಲಿಸುವ ಮತದಾರರನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ. ಅವರ ವಿವಾದಾತ್ಮಕ ಹೇಳಿಕೆಯ ವಿಡಿಯೋವನ್ನು ಬಿಜೆಪಿ ಹೆಚ್ಚಾಗಿ ಪ್ರಸಾರ ಮಾಡುತ್ತಿದೆ” ಎಂದು ಕಾಂಗ್ರೆಸ್‌ ದೂರಿದೆ.

ಈ ಸುದ್ದಿ ಓದಿದ್ದೀರಾ?: ಈ ದಿನ ಸಮೀಕ್ಷೆ | ಬಿಜೆಪಿಗೆ ನಿದ್ರಾಭಂಗ; ಕಾಂಗ್ರೆಸ್‌ನಲ್ಲಿ ಹೊಸ ಹುಮ್ಮಸ್ಸು

“ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಬಂಧನದಲ್ಲಿದ್ದ ಎಲ್ಲಾ ಪಿಎಫ್‌ಐ ಕಾರ್ಯಕರ್ತರನ್ನು ಬಿಡುಗಡೆ ಮಾಡಿದ್ದರು. ಬಿಜೆಪಿ ಸರ್ಕಾರವೇ ಅವರನ್ನು ಪತ್ತೆ ಮಾಡಿ ಮತ್ತೆ ಜೈಲಿಗಟ್ಟಿತು” ಎಂದು ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ ನಡೆಸಿದ್ದರು.

ಏಪ್ರಿಲ್ 26 ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, “ಕರ್ನಾಟಕದಲ್ಲಿ ಪಿಎಫ್‌ಐನಂತಹ ನಿಷೇಧಿತ ಸಂಘಟನೆಗಳನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ. ಆ ಮೂಲಕ ಒಡೆದು ಆಳುವ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...