ಚುನಾವಣೆ 2023 | ಕನಕಪುರ-ವರುಣಾ ಕ್ಷೇತ್ರದಲ್ಲಿ ಬಿ ಎಲ್ ಸಂತೋಷ್, ಪ್ರಲ್ಹಾದ್‌ ಜೋಶಿಗೆ ಪಂಥಾಹ್ವಾನ ನೀಡಿದ ಕಾಂಗ್ರೆಸ್‌

Date:

  • ‘ಬಿ ಎಲ್ ಸಂತೋಷ್ ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ತೋರಲಿ’
  • ‘ಬಿಜೆಪಿಯೊಳಗಿನ ಕಿತ್ತಾಟ ಅಶೋಕರನ್ನು ಬಲಿಪಶು ಮಾಡಲಿದೆʼ

ಕನಕಪುರ ಮತ್ತು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿ ಎಲ್ ಸಂತೋಷ್ ಹಾಗೂ ಪ್ರಲ್ಹಾದ್‌ ಜೋಶಿ ಅವರನ್ನು ಸ್ಪರ್ಧೆಗೆ ಆಹ್ವಾನಿಸುತ್ತೇವೆ. ಅವರು ಪಂಥಾಹ್ವಾನ ಸ್ವೀಕರಿಸುವರೇ? ಎಂದು ಕಾಂಗ್ರೆಸ್‌ ಸವಾಲು ಹಾಕಿದೆ.

ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, “ನಾಗಪುರದ ವಂಶದವರು ಇತರರನ್ನು ಹೊಂಡಕ್ಕೆ ತಳ್ಳಿ ಆಳ ನೋಡುವ ಬದಲು ತಾವೇ ಮುಂದೆ ನಿಂತು ಸಾಮರ್ಥ್ಯ ತೋರಲಿ. ಬಿ ಎಲ್ ಸಂತೋಷ್ ತೆರೆಮರೆಯಿಂದ ಹೊರಬಂದು ಚುನಾವಣೆಗೆ ಸ್ಪರ್ಧಿಸಿ ಸಾಮರ್ಥ್ಯ ನಿರೂಪಿಸಲಿ” ಪಂಥಾಹ್ವಾನ ನೀಡಿದೆ.

“ಆರ್. ಅಶೋಕ್ ಅವರಿಗೆ ಎರಡು ಟಿಕೆಟ್, ಎನ್.ಆರ್ ರಮೇಶ್‌ಗೆ ಒಂದೂ ಟಿಕೆಟ್ ಇಲ್ಲ. ಬಿಜೆಪಿಯ ಪ್ರಯೋಗವು ಆರ್. ಅಶೋಕ್‌ರವರಿಗೆ “ಖೆಡ್ಡಾ”ವಾಗಿ ಪರಿಣಮಿಸಲಿದೆ. ಪದ್ಮನಾಭನಗರದಲ್ಲಿ ಬಂಡಾಯವೆದ್ದ ಎನ್.ಆರ್ ರಮೇಶ್ ಬಿಜೆಪಿಗೇ ಮುಳುವಾಗುವುದು ನಿಶ್ಚಿತ. ಬಿಜೆಪಿಯೊಳಗಿನ ಕಿತ್ತಾಟ ಅಶೋಕರನ್ನು ಬಲಿಪಶು ಮಾಡಲಿದೆ” ಎಂದು ಕಾಂಗ್ರೆಸ್ ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಜೆಪಿ ನಡೆ ಬೇಸರ ತರಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್ ಶಂಕರ್

‌“ಬಿಜೆಪಿ ಈಗ ಏಕಕಾಲಕ್ಕೆ ಎಲ್ಲವನ್ನೂ ಎದುರಿಸುತ್ತಿದೆ. ಕಣ್ಣೀರು ಪರ್ವ, ಬಂಡಾಯ ಪರ್ವ, ನಿವೃತ್ತಿ ಪರ್ವ, ಆಕ್ರೋಶ ಪರ್ವ, ರಾಜೀನಾಮೆ ಪರ್ವ! ಇಷ್ಟು ದಿನ ಒಳಗೊಳಗೇ ಕುದಿಯುತ್ತಿದ್ದ ಬಿಜೆಪಿಯೊಳಗಿನ ಕಿತ್ತಾಟ ಈ ಚುನಾವಣೆಯಲ್ಲಿ ಜ್ವಾಲಾಮುಖಿಯಾಗಿ ಸ್ಪೋಟಿಸುವುದು ನಿಶ್ಚಿತ. “ನಂಬಿಸಿ ಕತ್ತು ಕುಯ್ಯುವುದು” ಎಂಬ ಮಾತಿಗೆ ಬಿಜೆಪಿಯೇ ಬ್ರಾಂಡ್ ಅಂಬಾಸಿಡರ್” ಎಂದು ಕುಟುಕಿದೆ.

“ಚಿತ್ತಾಪುರ ಕ್ಷೇತ್ರದಲ್ಲಿ ಬಿಜೆಪಿ ಸರ್ಕಾರದಲ್ಲೇ ಗಡಿಪಾರು ಆಗಿದ್ದ, ಅನ್ನಭಾಗ್ಯದ ಅಕ್ಕಿ ಕಳ್ಳಸಾಗಣೆಯ ಆರೋಪಿ ರೌಡಿ ಶೀಟರ್‌ಗೆ ಟಿಕೆಟ್ ಕೊಡುವ ಮೂಲಕ ಬಿಜೆಪಿ ರೌಡಿ ಮೋರ್ಚಾಕ್ಕೂ ಮನ್ನಣೆ ನೀಡಿದೆ. ಬಿಜೆಪಿಯ ಟಿಕೆಟ್‌ಗೆ “ಗಡಿಪಾರು” ಆಗಿರುವುದೇ ಬಹುಮುಖ್ಯ ಮಾನದಂಡ ಎಂಬುದನ್ನು ದಿಲ್ಲಿಯಿಂದ ಇಲ್ಲಿಯವರೆಗೆ ನಿರೂಪಿಸಿದೆ” ಎಂದು ಜರಿದಿದೆ.

“ಮಾಜಿ ಪೊಲೀಸ್ ಕಮಿಷನರ್ ಒಬ್ಬರು ಮೋಸ್ಟ್ ವಾಂಟೆಡ್ ರೌಡಿ ಶೀಟರ್ ಒಬ್ಬನ ಮುಂದೆ ನಿಂತು ಕೈಮುಗಿದು ಬೆಂಬಲ ಕೋರುವುದು ಈ ವ್ಯವಸ್ಥೆಯ ದುರಂತ. ಇದು ಬಿಜೆಪಿ ಮಹಿಮೆ. ಈ ಚುನಾವಣೆಯಲ್ಲಿ ಬಿಜೆಪಿ ರೌಡಿ ಮೋರ್ಚಾ ಪ್ರಬಲವಾಗಿ ಕೆಲಸ ಮಾಡುತ್ತಿದೆ ಎಂದರೆ ಮುಂದೆ ಬಿಜೆಪಿ ಕ್ರಿಮಿನಲ್‌ಗಳ ಸಾಮ್ರಾಜ್ಯ ಸ್ಥಾಪಿಸುತ್ತದೆ ಎಂದೇ ಅರ್ಥ. ಮತದಾರರು ಎಚ್ಚರವಾಗಬೇಕು” ಎಂದು ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...