ಕಾಂಗ್ರೆಸ್‌ ಸುಳ್ಳು ಸಮೀಕ್ಷೆಗಳನ್ನು ಮಾಡಿಸಿ ದೇಶದ ಜನರನ್ನು ವಂಚಿಸಿದೆ: ಪ್ರಧಾನಿ ಮೋದಿ ಆರೋಪ

Date:

  • ಹಳೇ ಸಂಪ್ರದಾಯದಂತೆ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ
  • ವೈಜ್ಞಾನಿಕ ಸಮೀಕ್ಷೆಗಳು ಬಿಜೆಪಿ ಸೋಲು ಎಂದು ವರದಿ ಮಾಡಿದ್ದವು

ಕಾಂಗ್ರೆಸ್‌ ಸುಳ್ಳು ಸಮೀಕ್ಷೆಗಳನ್ನು ಮಾಡಿಸಿ ದೇಶದ ಜನರನ್ನು ವಂಚಿಸಿದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಸುಳ್ಳು ಸಮೀಕ್ಷೆ ಮಾಡಿಸಿದೆ. ಹಣ ಬಲದ ಜೊತೆಗೆ ಸುಳ್ಳು ಸಮೀಕ್ಷೆಗಳ ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂದು ಪ್ರಧಾನಿ ಮೋದಿಯವರು ಸಮೀಕ್ಷೆಗಳನ್ನು ತಳ್ಳಿಹಾಕಿದ್ದಾರೆ.

ಬಳ್ಳಾರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶದಲ್ಲಿ ಮಾತನಾಡಿ, ಕಾಂಗ್ರೆಸ್‌ನ ವಿರುದ್ಧ ಮೋದಿಯವರು ವಾಗ್ದಾಳಿ ನಡೆಸಿದ್ದಾರೆ.

ಚುನಾವಣಾ ಪೂರ್ವ ಸಮೀಕ್ಷೆಗಳ ಕುರಿತು ಮಾತನಾಡಿದ ಮೋದಿ, ಕರ್ನಾಟಕದಲ್ಲೂ ಕಾಂಗ್ರೆಸ್ ಸುಳ್ಳು ಸಮೀಕ್ಷೆ ಮಾಡಿಸಿದೆ. ಹಣ ಬಲದ ಜೊತೆಗೆ ಸುಳ್ಳು ಸಮೀಕ್ಷೆಗಳ ಸುದ್ದಿಗಳನ್ನು ಹಬ್ಬಿಸುತ್ತಿದೆ ಎಂದು ಪ್ರಧಾನಿ ಮೋದಿ ಸಮೀಕ್ಷೆಗಳ ಬಗ್ಗೆ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್ ಭ್ರಷ್ಟಾಚಾರ ಮಾಡಿ ದೇಶದ ಜನರನ್ನು ಮೋಸ ಮಾಡಿದೆ. ಆದಿವಾಸಿಗಳ ಮತ್ತು ಹಿಂದುಳಿದ ಸಮುದಾಯಗಳ ಅಭಿವೃದ್ಧಿಯನ್ನು ಕಾಂಗ್ರೆಸ್ ಸಹಿಸುವುದಿಲ್ಲ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಭಯೋತ್ಪಾದಕರ ವಿರುದ್ಧ ಮಾತನಾಡುವುದಿಲ್ಲ. ಭಯೋತ್ಪಾದಕರ ಕುರಿತು ಮೃದು ದೋರಣೆ ಹೊಂದಿದ್ದಾರೆ. ಕರ್ನಾಟಕದ ಜನತೆ ಕಾಂಗ್ರೆಸ್‌ ನೀತಿಗಳಿಂದ ಎಚ್ಚರದಿಂದಿರಿ ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ಬಾರಿ ಯಾರೊಂದಿಗೂ ಹೊಂದಾಣಿಕೆ ಮಾಡಿಕೊಳ್ಳಲ್ಲ: ಬಿ ಎಸ್ ಯಡಿಯೂರಪ್ಪ

ಕಾಂಗ್ರೆಸ್‌ ಅಧಿಕಾರದಲ್ಲಿ ಭ್ರಷ್ಟಾಚಾರ ನಡೆದಿದೆ. ಕೇಂದ್ರದಿಂದ ಒಂದು ರೂಪಾಯಿ ಕಳಿಸಿದರೆ 15 ಪೈಸೆ ಜನರನ್ನು ಮುಟ್ಟುತ್ತದೆ ಎಂದು ಸ್ವತಃ ರಾಜೀವ್ ಗಾಂಧಿ ಒಪ್ಪಿಕೊಂಡಿದ್ದರು. ಈ 85% ಸರ್ಕಾರ ದೇಶವನ್ನು ಅಭಿವೃದ್ಧಿ ಮಾಡಲೇ ಇಲ್ಲ ಎಂದು ಆರೋಪಿಸಿದ್ದಾರೆ.

ಬಿಜೆಪಿ ಬಂಜಾರ ಸಮುದಾಯಕ್ಕೆ ಹಕ್ಕು ಪತ್ರ ನೀಡಿದೆ. ಬಡವರ ಅಭಿವೃದ್ಧಿ ಮಾಡಿದೆ. ಉಕ್ರೇನ್‌ನಿಂದ ವಿದ್ಯಾರ್ಥಿಗಳನ್ನು ಕರೆತಂದಿದ್ದೇವೆ. ಪಾಕಿಸ್ತಾನದಿಂದ ಅಭಿನಂದನ್‌ ಕರೆದಂತಿದ್ದೇವೆ ಎಂದು ಭಾವನಾತ್ಮಕವಾಗಿ ಮತದಾರರನ್ನು ಸೆಳೆಯಲು ಯತ್ನಿಸಿದ್ದಾರೆ.

ಈ ದಿನ.ಕಾಮ್‌ ಸೇರಿದಂತೆ ರಾಜ್ಯದ ಮತ್ತು ದೇಶದ ಕೆಲ ಮಾಧ್ಯಮ ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದವು. ಆ ವೈಜ್ಞಾನಿಕ ಸಮೀಕ್ಷೆಗಳು ಬಿಜೆಪಿ ಸೋಲು ಖಚಿತ ಎಂದಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬಹುದು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...