ಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ, ಜನಸಾಮಾನ್ಯರ ಪಕ್ಷ: ರಾಹುಲ್‌ ಗಾಂಧಿ

Date:

  • ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ
  • ʼನಮ್ಮ ಸರ್ಕಾರ ಬಂದ ಬಳಿಕ ಐದು ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆʼ

ಕಾಂಗ್ರೆಸ್‌ ಯಾವತ್ತಿಗೂ ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಇರುವ ಪಕ್ಷ ಎಂದು ರಾಹುಲ್‌ ಗಾಂಧಿ ಹೇಳಿದರು.

ಬೆಳಗಾವಿ ಜಿಲ್ಲೆಯ ಯಮಕನಮರಡಿ ವಿಧಾನಸಭಾ ಕ್ಷೇತ್ರದಲ್ಲಿ ಶನಿವಾರ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

“ಕರ್ನಾಟಕದ ಜನ ತೀರ್ಮಾನ ಮಾಡಿದ್ದಾರೆ, ಈ ಬಾರಿ ನಿಶ್ಚಿತವಾಗಿಯೂ ಕಾಂಗ್ರೆಸ್‌ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. 150 ಸ್ಥಾನ ಕಾಂಗ್ರೆಸ್‌ ಗೆಲ್ಲಲಿದೆ. ಸರ್ಕಾರ ಬಂದ ಬಳಿಕ 5 ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಮೂರು ವರ್ಷಗಳಲ್ಲಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ನಾನು ಪ್ರಧಾನಿ ಅವರಿಗೆ ನಾನು ಸವಾಲು ಹಾಕುವೆ, ನೀವು ಯಾರ ವಿರುದ್ಧ ಕ್ರಮಕೈಗೊಂಡಿದ್ದೀರಿ? ಎಷ್ಟು ಜನರನ್ನು ಜೈಲಿಗೆ ಕಳುಹಿಸಿದ್ದೀರಿ? ದುರಾದೃಷ್ಟವಶಾತ್ ಪ್ರಧಾನಿ ಅದರ ಬಗ್ಗೆ ಒಂದು ಶಬ್ಧವನ್ನು ಇದುವರೆಗೆ ತೆಗೆದಿಲ್ಲ. ಇಲ್ಲಿ ಬರ್ತಾರೆ, ಯಾವುದದಾರೊಂದು ನೆಪ ಹೇಳಿ ದೆಹಲಿಗೆ ವಾಪಸ್ಸು ಹೋಗ್ತಾರೆ” ಎಂದು ಟೀಕಿಸಿದರು.

“ಬೆಲೆ‌ ಏರಿಕೆ, ಗ್ಯಾಸ್‌ ಸಿಲೆಂಡರ್‌ 1100 ರೂ. ಆಗಿದೆ, ಪ್ರೆಟ್ರೋಲ್‌ 100 ರೂ. ಗಡಿ ದಾಟಿದೆ, ದೇಶದಲ್ಲಿ ನಿರುದ್ಯೋಗ ಹೆಚ್ಚಳವಾಗಿದೆ. ವರ್ಷಕ್ಕೆ 2 ಕೋಟಿ ಜನಕ್ಕೆ ಉದ್ಯೋಗದ ಕೊಡ್ತೀರಾ ಅಂತ ಹೇಳಿದ್ರಿ ಇಷ್ಟು ಜನರಿಗೆ ಉದ್ಯೋಗ ನೀಡಿದ್ರಿ, ರಾಜ್ಯಗಳ ಮಧ್ಯಗಿರುವ ನೀರಿನ ವಿವಾದವನ್ನು ಹೇಗೆ ಬಗೆಹರಿಸಿದ್ದೀರಿ? ರಾಜ್ಯದಲ್ಲಿ ಪ್ರವಾಹ ಬಂದಾಗ ಅವಾಗ ನೀವು ಏನು ಮಾಡಿದ್ರಿ? ಕರ್ನಾಟಕ್ಕಾಗಿ ನೀವು ಏನು ಮಾಡಿಲ್ಲ” ಎಂದು ಹರಿಹಾಯ್ದರು.

ಈ ಸುದ್ದಿ ಓದಿದ್ದೀರಾ? ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ಪ್ರಮುಖ ವಿಷಯಗಳ ಕುರಿತು ಪ್ರಧಾನಿ ಅವರು ಮಾತನಾಡಲ್ಲ. ರೈತರು, ಕಾರ್ಮಿಕರು, ಬಡವರು, ಯುವಕರಿಗಾಗಿ ಒಂದು ಶಬ್ದವನ್ನು ಎತ್ತಲ್ಲ. ಬರೀ ಭಾಷಣದಲ್ಲಿ ಹೇಳ್ತಾರೆ; ಕಾಂಗ್ರೆಸ್‌ ನವರು 91 ಸಲ ನನ್ನನ್ನು ಬೈದಿದ್ದಾರೆ ಅಂತ. ಇಂದು ಯಾವ ವಿಷಯದ ಬಗ್ಗೆ ಚರ್ಚೆ ನಡೆಸಬೇಕಿತ್ತೋ, ಆ ವಿಷಯವನ್ನು ಅವರು ಎಂದಿಗೂ ಪ್ರಸ್ತಾಪ ಮಾಡುತ್ತಿಲ್ಲ” ಎಂದರು.

“ನೀವು ಇಂದು ಸತೀಶ್ ಜಾರಕಿಹೊಳಿ ಅವರನ್ನು ಮತ್ತೇ ಅತ್ಯಧಿಕ ಬಹುಮತದಿಂದ ನೀವು ಅವರನ್ನು ಗೆಲ್ಲಿಸಿಬೇಕು. ಅವರೋರ್ವ ಬಡವರ ಬಗ್ಗೆ ವಿಶೇಷ ಕಾಳಜಿಯಿರುವ ವ್ಯಕ್ತಿ. ಬಡ ಮತ್ತು ಜನಸಾಮಾನ್ಯನ ಜತೆಗೆ ನಿಕಟ ಸಂಪರ್ಕವಿರುವ ವ್ಯಕ್ತಿ. ಇಂದು ಕಾಂಗ್ರೆಸ್‌ ಪಕ್ಷವನ್ನು ಇಡೀ ಬೆಳಗಾವಿ ಜಿಲ್ಲೆಯಲ್ಲಿ ಎಲ್ಲ ಸೀಟನ್ನು ನೀವು ಗೆಲ್ಲಿಸಬೇಕು” ಎಂದು ರಾಹುಲ್‌ ಗಾಂಧಿ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...