ಶೆಟ್ಟರ್‌ಗೆ ಉನ್ನತ ಸ್ಥಾನ ಸಿಗಲಿದೆ: ಕಾಂಗ್ರೆಸ್‌ ಮುಖಂಡರ ಆಶಯ

Date:

ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದ ಕಾಂಗ್ರೆಸ್‌ ಸೇರಿ, ಚುನಾವಣೆಯಲ್ಲಿ ಸೋಲುಂಡ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ ಕಾಂಗ್ರೆಸ್ ಉನ್ನತ ಸ್ಥಾನ ನೀಡುತ್ತದೆ ಎಂಬುದು ಪಕ್ಷದ ಮುಖಂಡರ ಅಭಿಪ್ರಾಯ.

ಆರು ಬಾರಿ ಶಾಸಕರಾಗಿದ್ದ ಶೆಟ್ಟರ್, ಅಲ್ಪಾವಧಿಗೆ ಮುಖ್ಯಮಂತ್ರಿಯೂ ಆಗಿದ್ದರು. ಅಲ್ಲದೆ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನಿರಾಕರಿಸಿದ್ದರಿಂದ, ಕೇಸರಿ ಪಾಳಯ ತೊರೆದು ಕಾಂಗ್ರೆಸ್‌ ಸೇರಿದರು. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ವಿರುದ್ಧ 34,289 ಮತಗಳ ಅಂತರದಿಂದ ಸೋಲುಂಡರು.

ಶೆಟ್ಟರ್ ಅವರು ತಮ್ಮ ಕ್ಷೇತ್ರದಲ್ಲಿ ಮತ್ತೆ ಗೆಲ್ಲಲು ಸಾಧ್ಯವಾಗಲಿಲ್ಲ. ಆದರೂ, ಉತ್ತರ ಕರ್ನಾಟಕದ ಲಿಂಗಾಯತ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಹಲವು ಸ್ಥಾನಗಳನ್ನು ಕಾಂಗ್ರೆಸ್‌ ಗೆಲ್ಲಲು ಅವರ ವರ್ಚಸ್ಸು ಕಾರಣವಾಯಿತು. ಅವರನ್ನು ಕಳೆದುಕೊಂಡ ಬಿಜೆಪಿ ಲಿಂಗಾಯತ ಕ್ಷೇತ್ರಗಳಲ್ಲಿ ಹೀನಾಯವಾಗಿ ಸೋಲುಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲಿಂಗಾಯತ ಮತದಾರರ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಗೆಲ್ಲಲು ನೆರವಾದ ಶೆಟ್ಟರ್‌ಗೆ ಸೂಕ್ತ ಪ್ರತಿಫಲ ನೀಡಬೇಕು ಎಂದು ಕಾಂಗ್ರೆಸ್ ಮುಖಂಡರು ಈಗಾಗಲೇ ಪಕ್ಷದ ರಾಜ್ಯ ನಾಯಕತ್ವಕ್ಕೆ ವರದಿ ಸಲ್ಲಿಸಿದ್ದಾರೆ. ಕೆಲವೇ ದಿನಗಳಲ್ಲಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರದಲ್ಲಿ ಶೆಟ್ಟರ್‌ಗೆ ಸ್ಥಾನ ಕಲ್ಪಿಸಲು ಕಾಂಗ್ರೆಸ್ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ?: ಏನೇ ಹೇಳ್ರಿ, ಜಗದೀಶ ಶೆಟ್ಟರ್ ಸೋಲಬಾರದಿತ್ತು!

ಈಗಾಗಲೇ ಕಾಂಗ್ರೆಸ್‌ ನಾಯಕರು ಶೆಟ್ಟರ್‌ ಅವರನ್ನು ಬೆಂಗಳೂರಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಶೆಟ್ಟರ್ ಸದ್ಯ ಬೆಂಗಳೂರಿನಲ್ಲೇ ತಂಗಿದ್ದಾರೆ. ಅಲ್ಲದೆ, “ನಾನು ಬೇಷರತ್ತಾಗಿ ಕಾಂಗ್ರೆಸ್‌ ಸೇರಿದ್ದೇನೆ. ಪಕ್ಷದಲ್ಲಿ ಹುದ್ದೆ ಪಡೆಯುವ ಬಗ್ಗೆ ನಾನು ಏನನ್ನೂ ಹೇಳಲಾರೆ” ಎಂದು ಶೆಟ್ಟರ್ ಹೇಳಿದ್ದಾರೆ.

ಆದಾಗ್ಯೂ, ಶೆಟ್ಟರ್‌ಗೆ ಹೊಸ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗುವುದು ಅಥವಾ ಪಕ್ಷದ ಕಾರ್ಯಾಧ್ಯಕ್ಷ ಹುದ್ದೆಗೆ ಅವರನ್ನು ಪರಿಗಣಿಸಬಹುದು ಎಂದು ಹಿರಿಯ ಕಾಂಗ್ರೆಸ್ ನಾಯಕರು ಹೇಳಿರುವುದಾಗಿ ಟಿಎನ್‌ಐಇ ವರದಿ ಮಾಡಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. ಆದರೆ, ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಪಕ್ಷದಲ್ಲಿ ಕಗ್ಗಂಟಾಗಿ ಉಳಿದಿದೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ನಡೆಯುತ್ತಿದ್ದು, ಇಬ್ಬರನ್ನೂ ಕಾಂಗ್ರೆಸ್‌ ಹೈಕಮಾಂಡ್‌ ದೆಹಲಿಗೆ ಕರೆಸಿಕೊಂಡಿದೆ. ಮಂಗಳವಾರ ಸಂಜೆಯೊಳಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಯಾರು ಎಂಬುದು ಘೋಷಣೆಯಾಗುವ ಸಾಧ್ಯತೆ ಇದೆ. ಪ್ರಮಾಣ ವಚನ ಸ್ವೀಕಾರದ ಬಳಿಕ, ಸಚಿವ ಸಂಪುಟ ರಚನೆಯಾಗಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...