ಬಿಜೆಪಿ ಸೋಲಿಸುವ ಗುರಿಯೊಂದಿಗೆ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ಸಿಪಿಐ

Date:

  • ಕೆಪಿಸಿಸಿ ಕಚೇರಿಯಲ್ಲಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಬೆಂಬಲ
  • 215 ಕ್ಷೇತ್ರಗಳಲ್ಲಿ ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ಗೆ ಸಿಪಿಐ ಬೆಂಬಲ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಬೇಕಿದೆ. ಹೀಗಾಗಿ ರಾಜ್ಯಾದ್ಯಂತ ಬಿಜೆಪಿಯನ್ನು ಎದುರಿಸುತ್ತಿರುವ ಜಾತ್ಯತೀತ, ಪ್ರಜಾಸತ್ತಾತ್ಮಕ ಪಕ್ಷ ಕಾಂಗ್ರೆಸ್‌ ಅನ್ನು ಬೆಂಬಲಿಸುವುದಾಗಿ ಸಿಪಿಐ ಹೇಳಿದೆ.

ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಎಐಸಿಸಿ ವಕ್ತಾರ ಗೌರವ್ ವಲ್ಲಭ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದಲ್ಲಿ ಸಿಪಿಐನ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್‌, ಎಐಟಿಯುಸಿ ರಾಜ್ಯಾಧ್ಯಕ್ಷ ಅನಂತ ಸುಬ್ಬರಾವ್, ಸಿಪಿಐ ರಾಜ್ಯ ಸಹಾಯಕ ಕಾರ್ಯದರ್ಶಿ ಬಿ ಅಮಜಕ್‌, ಸಿಪಿಐನ ಕಾರ್ಯಕಾರಿ ಸದಸ್ಯೆ ಎ ಜ್ಯೋತಿ ಹಾಗೂ ಮತ್ತಿತರರು ಸೇರಿ ಕಾಂಗ್ರೆಸ್‌ಗೆ ಭಾನುವಾರ ಬೆಂಬಲ ಸೂಚಿಸಿದರು.

ಈ ವೇಳೆ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, “ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ ಸಾಮಾಜಿಕ ನ್ಯಾಯ, ಬಡವರು ಹಾಗೂ ಸೋಷಿತ ವರ್ಗದವರ ಹಕ್ಕಿನ ರಕ್ಷಣೆ, ಕಾರ್ಮಿಕರ ಹಕ್ಕು, ಮಧ್ಯಮ ವರ್ಗದವರ ಹಕ್ಕಿನ ರಕ್ಷಣೆಗೆ ಹೋರಾಟ ಮಾಡಿಕೊಂಡು ಬಂದಿರುವ ಇತಿಹಾಸವಿದೆ. ಕಾಂಗ್ರೆಸ್ ಮತ್ತು ಸಿಪಿಐ ನಡುವೆ ಸೈದ್ಧಾಂತಿಕವಾಗಿ ಅನೇಕ ವಿಚಾರಗಳಲ್ಲಿ ಭಿನ್ನಾಭಿಪ್ರಾಯವಿದ್ದರೂ ನಮ್ಮ ಗುರಿ ಒಂದೇ ಆಗಿದೆ. ಮೋದಿ ಸರ್ಕಾರದ ಬೆಲೆ ಏರಿಕೆ, ಬೊಮ್ಮಾಯಿ ಸರ್ಕಾರದ 40% ಕಮಿಷನ್ ಭ್ರಷ್ಟಾಚಾರದ ವಿರುದ್ಧ, ಆಡಳಿತದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಹೋರಾಟ ಮಾಡುವುದು ಈ ಎರಡು ಪಕ್ಷಗಳ ಗುರಿಯಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ನಟಿ ರಮ್ಯಾರನ್ನು ಬಿಜೆಪಿಗೆ ಆಹ್ವಾನಿಸುವಷ್ಟು ನಮ್ಮ ಪಾರ್ಟಿ ಬರಗೆಟ್ಟಿಲ್ಲ‌ : ಸಚಿವ ಆರ್ ಅಶೋಕ

“ಕರ್ನಾಟಕದ ಯುವಕರು ₹80 ಲಕ್ಷ ಲಂಚ ನೀಡಿ ಪೊಲೀಸ್ ಸಬ್ ಇನ್‌ಸ್ಟೆಕ್ಟರ್‌ ಹುದ್ದೆ ಪಡೆಯುವ ಸ್ಥಿತಿ ನಿರ್ಮೂಲನೆಯಾಗಬೇಕು. ಶಿಕ್ಷಣ ವ್ಯವಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಮಾರಾಟ ಮಾಡುವ ವ್ಯವಸ್ಥೆ ತೊಲಗಬೇಕು. ರಾಜ್ಯದ ಜನರ ಹಿತ ಕಾಯುವುದು ಸರ್ಕಾರದ ಏಕಮಾತ್ರ ಗುರಿಯಾಗಿರಬೇಕೇ ಹೊರತು, ಬಿಜೆಪಿ ರೀತಿ ರಾಜ್ಯವನ್ನು ಲೂಟಿ ಮಾಡುವುದಲ್ಲ” ಎಂದು ಸುರ್ಜೇವಾಲಾ ವಾಗ್ದಾಳಿ ನಡೆಸಿದರು.

“ಸಿಪಿಐ ಪಕ್ಷ ಈ ಬಾರಿಯ ರಾಜ್ಯ ಚುನಾವಣೆಯಲ್ಲಿ 7 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದು, ಈ ಕ್ಷೇತ್ರಗಳಲ್ಲಿ ಸ್ಪರ್ಧಾತ್ಮಕ ಹೋರಾಟ ಇರಲಿದೆ. ಉಳಿದ 215 ಕ್ಷೇತ್ರಗಳಲ್ಲಿ ಸಿಪಿಐ ಪಕ್ಷದ ಕಾರ್ಯಕರ್ತರು ಯಾವುದೇ ಷರತ್ತು ಇಲ್ಲದೆ ಕಾಂಗ್ರೆಸ್‌ ಅನ್ನು ಬೆಂಬಲಿಸಲಿದೆ. ಬಿಜೆಪಿಯ ವಿರುದ್ಧದ ಹೋರಾಟದಲ್ಲಿ ಇದು ಬಹಳ ದೊಡ್ಡ ತೀರ್ಮಾನವಾಗಿದ್ದು, ಈ ನಿರ್ಧಾರ ಕೈಗೊಂಡಿರುವ ಈ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...