ದಕ್ಷಿಣ ಕನ್ನಡ | ತೂಗು ಸೇತುವೆ ನಿರ್ಮಿಸಲು ಆಗ್ರಹ; ಚುನಾವಣೆ ಬಹಿಷ್ಕರಿಸುವುದಾಗಿ ಎಚ್ಚರಿಕೆ

Date:

  • 40 ವರ್ಷಗಳಿಂದ ಶಾಸಕರಾಗಿರುವ ಅಂಗಾರ ವಿರುದ್ಧ ಆಕ್ರೋಶ
  • ಶಿಥಿಲಾವಸ್ಥೆಗೆ ತಲುಪಿ, ಬೀಳುವ ಹಂತದಲ್ಲಿರುವ ತೂಗು ಸೇತುವೆ

ಕಾಡಿನ ಮಧ್ಯ ಭಾಗದಲ್ಲಿರುವ ತಮ್ಮ ಗ್ರಾಮಕ್ಕೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಹಲವು ದಶಕಗಳಿಂದ ಮನವಿ ಮಾಡುತ್ತಿದ್ದರೂ ಅದನ್ನು ಕಾರ್ಯರೂಪಕ್ಕೆ ತರದ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಂತ್ರಸ್ಥರು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವ ಬ್ಯಾನರ್‌ ಹಾಕಿ ಆಕ್ರೋಶ ಹೊರಹಾಕಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅರಮನೆಯ ಎಂಬಲ್ಲಿ ಸುಳ್ಯ ಕಡೆ ಹರಿದು ಬರುವ ಹೊಳೆಗೆ ಶಾಶ್ವತ ಸೇತುವೆ ನಿರ್ಮಿಸಿಕೊಡಬೇಕು ಎಂದು ಇಲ್ಲಿನ ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಸ್ಥಳೀಯ ಶಾಸಕರಲ್ಲಿ ಮನವಿ ಮಾಡಿಕೊಂಡಿದ್ದರು.

ಅಂಬೇಡ್ಕರ್ ರಕ್ಷಣಾ ಸಮಿತಿಯ ಅಧ್ಯಕ್ಷ ಸುಂದರ ಪಾಟಾಜೆ ಮಾತನಾಡಿ, “ಇಲ್ಲಿನ ದಾರಿಯನ್ನು ಅವಲಂಭಿಸಿಕೊಂಡು 40ಕ್ಕೂ ಹೆಚ್ಚು ದಲಿತ ಕುಟುಂಬಗಳಿದ್ದು, ಇವರ ಸಮಸ್ಯೆ ಪರಿಹರಿಸಲು ಇದುವರೆಗೂ ಯಾವುದೇ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸಿಲ್ಲ. ಈ ಭಾಗದ ಗರ್ಭಿಣಿಯರು ಆಸ್ಪತ್ರೆಗೆ ಹೋಗಲು, ಮಹಿಳೆಯರು ಅಂಗಡಿಗೆ ಹೋಗಲು, ವಿದ್ಯಾರ್ಥಿಗಳು ಶಾಲೆಗೆ ಹೋಗಲು ಪರದಾಡುವಂತಾಗಿದೆ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸುಳ್ಯ 02
ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅರಮನೆಯ ಎಂಬಲ್ಲಿ ಸುಳ್ಯ ಕಡೆ ಹರಿದು ಬರುವ ಹೊಳೆಗೆ ನಿರ್ಮಿಸಿರುವ ತಾತ್ಕಾಲಿಕ ತುಗು ಸೇತುವೆ

ತಮ್ಮ ಸಮಸ್ಯೆ ಬಗೆಹರಿಸುವಂತೆ ಅಂಬೇಡ್ಕರ್ ರಕ್ಷಣಾ ಸಮಿತಿ ನೇತೃತ್ವದಲ್ಲಿ ಇಲ್ಲಿನ ನಿವಾಸಿಗಳು ಮುಖ್ಯಮಂತ್ರಿ, ಜಿಲ್ಲಾಧಿಕಾರಿ, ಸಂಸದರಿಗೆ ಹಾಗೂ 40 ವರ್ಷಗಳಿಂದ ಶಾಸಕರಾಗಿರುವ ಹಾಲಿ ಸಚಿವರಾ ಎಸ್ ಅಂಗಾರ ಅವರಿಗೆ ತಮ್ಮ ಸಮಸ್ಯೆ ಮನವರಿಕೆ ಮಾಡಿಕೊಟ್ಟರು ಸ್ಪಂದಿಸುತ್ತಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? : ಗದಗ | ವಿದ್ಯಾದಾನ ಶಿಕ್ಷಣ ಸಮಿತಿ ಮೈದಾನದ ಸಮಸ್ಯೆ ಬಗೆಹರಿಸುವಂತೆ ಮನವಿ

ಅರಂತೋಡು ಗ್ರಾಮ ಪಂಚಾಯಿತಿ ವತಿಯಿಂದ ತಾತ್ಕಾಲಿಕವಾಗಿ ಸಂಚಾರಿಸಲು ತೂಗು ಸೇತುವೆ ನಿರ್ಮಿಸಿಕೊಡಲಾಗಿದೆ. ಆದರೆ, ಈ ತೂಗು ಸೇತುವೆಯು ಸಾಮಾನ್ಯ ಸೇತುವೆಯಾಗಿದ್ದು, ಎರಡು ಕಡೆಗಳಲ್ಲಿ ಪಿಲ್ಲರ್‌ಗಳಿಲ್ಲದೇ ಮರಗಳಿಗೆ ನೇತು ಹಾಕಲಾಗಿದೆ. ಈ ತಾತ್ಕಾಲಿಕ ತೂಗು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಈ ಸೇತುವೆ ಮೇಲೆ ಹೊಳೆ ದಾಟುವುದು ಅಪಾಯಕಾರಿಯಾಗಿದೆ. ಇದರಿಂದ ಈ ಭಾಗದ ಜನರು ನಿತ್ಯ ಸಮಸ್ಯೆ ಸಮಸ್ಯೆ ಅನುಭವಿಸುವಂತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜಕಾರಣಿಗಳು ಚುನಾವಣೆಯಲ್ಲಿ ಗೆದ್ದ ಬಳಿಕ ಗ್ರಾಮಗಳ ಸಮಸ್ಯೆಗಳತ್ತ ಗಮನಹರಿಸದಿರುವುದರಿಂದ ಇಲ್ಲಿನ ನಿವಾಸಿಗಳು ಚುನಾವಣೆ ಬಹಿಷ್ಕರಿಸುವುದಾಗಿ ತೀರ್ಮಾನಿಸಿ, ಗ್ರಾಮದ ಹಲವೆಡೆ ಬ್ಯಾನರ್ ಅಳವಡಿಸಿ, ಅಧಿಕಾರಿಗಳಿಗೆ ಹಾಗೂ ಜನಪ್ರತಿನಿಧಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...