ದಾಸರಹಳ್ಳಿ ಕ್ಷೇತ್ರ | ಜೆಡಿಎಸ್‌, ಬಿಜೆಪಿಯ ಗಟ್ಟಿನೆಲೆಯಲ್ಲಿ ಕಾಂಗ್ರೆಸಿಗೆ ಭರವಸೆ!

Date:

  • ಎರಡು ಬಾರಿ ಬಿಜೆಪಿ, ಪ್ರಸ್ತುತ ಜೆಡಿಎಸ್‌ ಶಾಸಕ ಪ್ರತಿನಿಧಿಸುವ ಕ್ಷೇತ್ರ
  • ಕ್ಷೇತ್ರದ ಚಿತ್ರಣ ಗಮನಿಸಿದರೆ ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯ ಕಾವು  

ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ದಕ್ಷಿಣ ಏಷ್ಯಾದಲ್ಲಿಯೇ ಅತಿ ದೊಡ್ಡ ಕೈಗಾರಿಕಾ ಪ್ರದೇಶ ಪೀಣ್ಯವನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಂಗಳೂರಿನ ವಿವಿಧಡೆಯಿಂದ ಈ ಪ್ರದೇಶಕ್ಕೆ ಬರುವ ಸಾವಿರಾರು ಉದ್ಯೋಗಿಗಳಿಗೆ ಬದುಕು ಕಟ್ಟಿಕೊಂಡಿರುವ ಕ್ಷೇತ್ರವಿದು.

ಹೊರ ರಾಜ್ಯಗಳ ಜನರೂ ಒಳಗೊಂಡು ಕರ್ನಾಟಕದ 22ಕ್ಕೂ ಹೆಚ್ಚು ಜಿಲ್ಲೆಗಳ 9 ಲಕ್ಷಕ್ಕೂ ಅಧಿಕ ಮಂದಿ ಈ ಕ್ಷೇತ್ರದಲ್ಲಿ ವಾಸವಾಗಿದ್ದಾರೆ. ಹಿಂದೆ ಇದು ಪೀಣ್ಯ ದಾಸರಹಳ್ಳಿ ಮುನ್ಸಿಪಲ್ ಕೌನ್ಸಿಲ್ ಆಗಿತ್ತು. ನಂತರ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಬಂತು. 2008ರ ವಿಧಾನಸಭಾ ಕ್ಷೇತ್ರ ಪುನರ್ ವಿಂಗಡಣೆಯ ವೇಳೆಯಲ್ಲಿ ದಾಸರಹಳ್ಳಿ ಕ್ಷೇತ್ರವಾಯಿತು. ಈ ಮೊದಲು ಇದು ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾದ ಉತ್ತರಹಳ್ಳಿ ವ್ಯಾಪ್ತಿಗೆ ಸೇರಿತ್ತು. ನಗರ ಪ್ರದೇಶದ ಜೊತೆ ಸುತ್ತಲಿನ ಹತ್ತು ಹಳ್ಳಿಗಳನ್ನು ಈ ಕ್ಷೇತ್ರ ಒಳಗೊಂಡಿದೆ.

2023ರ ಈ ಬಾರಿಯ ಚುನಾವಣೆಯಲ್ಲಿ ದಾಸರಹಳ್ಳಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಕಳೆದ ಬಾರಿಯ ಹಾಲಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿವೆ. ಕಾಂಗ್ರೆಸ್ ಮಾತ್ರ ಪ್ರತಿಸಲದಂತೆ ಈ ಬಾರಿಯೂ ಹೊಸ ಮುಖಕ್ಕೆ ಮಣೆ ಹಾಕಿದೆ. ಜೆಡಿಎಸ್‌ನಿಂದ ಶಾಸಕ ಆರ್‌ ಮಂಜುನಾಥ್ ಕಣಕ್ಕಿಳಿದರೆ, ಮಾಜಿ ಶಾಸಕ ಪಿ ಮುನಿರಾಜು ಬಿಜೆಪಿಯಿಂದ ನಾಲ್ಕನೇ ಬಾರಿ ಸ್ಪರ್ಧಿಸಿದ್ದಾರೆ. ಕಾಂಗ್ರೆಸಿನಿಂದ ಮೊದಲ ಬಾರಿಗೆ ಟಿಕೆಟ್ ಪಡೆದುಕೊಂಡಿರುವ ಸ್ಥಳೀಯ ಮುಖಂಡ ಜಿ ಧನಂಜಯ ಇವರಿಬ್ಬರಿಗೂ ಸವಾಲು ನೀಡಿ ಚುನಾವಣೆ ಎದುರಿಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ | ಒಕ್ಕಲಿಗರ ಕೋಟೆಯಲ್ಲಿ ಅನ್ಯ ಭಾಷಿಕರೆ ಗೆಲುವಿನ ನಿರ್ಣಾಯಕರು

ಹಾಗೆ ನೋಡಿದರೆ ಕಾಂಗ್ರೆಸ್ ಅಭ್ಯರ್ಥಿ ಧನಂಜಯಗೆ ಇದು ಮೊದಲ ಚುನಾವಣೆ. ಜೆಡಿಎಸ್‌ನ ಮಂಜುನಾಥ್ ಈಗಾಗಲೇ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರೆ, ಬಿಜೆಪಿಯ ಮುನಿರಾಜ್‌ ಎರಡು ಬಾರಿ ಶಾಸಕರಾಗಿದ್ದಾರೆ. ಒಂದೆರಡು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಧನಂಜಯ ಅವರ ತಂದೆ ಗಂಗಾಧರಯ್ಯ ನಗರಸಭೆ ಚುನಾವಣೆಗಳಲ್ಲಿ ಸ್ಪರ್ಧಿಸಿ ಸ್ಥಳೀಯರ ನಾಡಿಮಿಡಿತವನ್ನು ಅರಿತು, ರಾಜಕಾರಣಿ ಎನಿಸಿಕೊಂಡವರು.

ಸ್ಥಳೀಯರೊಂದಿಗೆ ಹೆಚ್ಚು ಸಕ್ರಿಯವಾಗಿರುವ ತೆನೆ ಪಕ್ಷದ ಮಂಜುನಾಥ್ ಹಾಗೂ ರಾಜಕೀಯವಾಗಿ ಹೆಚ್ಚು ಪ್ರಭಾವ ಹೊಂದಿರುವ ಬಿಜೆಪಿಯ ಪಿ ಮುನಿರಾಜು ಅವರೊಂದಿಗೂ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಬೇಕಿದೆ. ಮೇಲ್ನೋಟಕ್ಕೆ ತ್ರಿಕೋನ ಸ್ಪರ್ಧೆಯಂತೆ ಕಂಡರೂ ಜೆಡಿಎಸ್ ಹಾಗೂ ಬಿಜೆಪಿ ನೇರ ಹಣಾಹಣಿ ನಡೆಯಲಿದೆ ಎನ್ನುತ್ತಾರೆ ಇಲ್ಲಿನ ಜನರು. ಆದರೆ ಅಂತಿಮ ತೀರ್ಮಾನ ನಿರ್ಧಾರವಾಗುವುದು ಮೇ 10 ರಂದು.

ಕ್ಷೇತ್ರ ಪುನರ್‌ ವಿಂಗಡಣೆ ನಂತರ 2008ರ ಮೊದಲ ಚುನಾವಣೆಯಲ್ಲಿ ವ್ಯಾಪಾರದ ಹಿನ್ನೆಲೆ ಹೊಂದಿದ್ದ ಎಸ್ ಮುನಿರಾಜು ಕಾಂಗ್ರೆಸಿನ ಕೆ ಸಿ ಅಶೋಕ ವಿರುದ್ಧ 22,155 ಮತಗಳ ಅಂತರದಿಂದ ಗೆಲ್ಲುವುದರ ಮೂಲಕ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 2013ರ ಚುನಾವಣೆಯಲ್ಲಿ ಎಸ್ ಮುನಿರಾಜು ಕಾಂಗ್ರೆಸಿನ ಹಿರಿಯ ರಾಜಕಾರಣಿ, ಮಾಜಿ ಸಭಾಪತಿ ಬಿ ಎಲ್ ಶಂಕರ್ ಅವರನ್ನು 10,828 ಮತಗಳ ಅಂತರದಿಂದ ಸೋಲಿಸಿ ಪುನರಾಯ್ಕೆಯಾದರು. 2018ರಲ್ಲಿ ಮುನಿರಾಜು ಹ್ಯಾಟ್ರಿಕ್ ಕನಸಿಗೆ ಭೂ ಹಗರಣ ಸೇರಿದಂತೆ ಹಲವು ಹಗರಣಗಳು ಅಡ್ಡಿಯಾದವು. ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರ ಗನ್‌ ಮ್ಯಾನ್‌ ಆಗಿ ಸರ್ಕಾರಿ ಕೆಲಸದಿಂದ ನಿವೃತ್ತಿ ಪಡೆದು ರಾಜಕೀಯ ಪ್ರವೇಶಿಸಿದ್ದ ಆರ್ ಮಂಜುನಾಥ್ ಅವರಿಗೆ ಕ್ಷೇತ್ರದ ಜನತೆ ಗೆಲುವು ನೀಡಿತು.

ಈ ಬಾರಿ ಮಂಜುನಾಥ್ ಅವರಿಗೂ ಗೆಲುವು ಅಷ್ಟು ಸುಲಭವಾಗಿಲ್ಲ. ಕ್ಷೇತ್ರದಲ್ಲಿ ಹಲವು ಸಮಸ್ಯೆಗಳು ಹಾಸು ಹೊದ್ದಿವೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಆಗಿನ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ದಾಸರಹಳ್ಳಿ ಕ್ಷೇತ್ರಕ್ಕೆ ಸುಮಾರು 700 ಕೋಟಿ ರೂ. ಅನುದಾನ ನೀಡಿದ್ದರು. ನಂತರ ಬಂದ ಬಿಜೆಪಿ ಸರ್ಕಾರ ಅನುದಾನವನ್ನು ತಡೆ ಹಿಡಿದಿತ್ತು. ಈ ಬಗ್ಗೆ ಸ್ಥಳೀಯ ಜನತೆಯಲ್ಲೂ ಒಂದಿಷ್ಟು ಕೋಪವಿದೆ. 2018ರಿಂದ ಚುನಾವಣೆಯಲ್ಲಿ ಸೋತ ನಂತರ ಬಿಜೆಪಿಯ ಪಿ ಮುನಿರಾಜು ಕ್ಷೇತ್ರದತ್ತ ಮುಖ ಮಾಡಿಲ್ಲ. ಆಡಳಿತ ವಿರೋಧಿ ಅಲೆಯ ಜೊತೆ ಈ ಸಿಟ್ಟು ಕೂಡ ಮತದಾರರಲ್ಲಿದೆ.

ಕ್ಷೇತ್ರದ ಸಮಸ್ಯೆಗಳು

ಅಸಂಖ್ಯಾತ ಜನರಿಗೆ ಉದ್ಯೋಗ ಕೊಟ್ಟಿರುವ ಕೈಗಾರಿಕಾ ಪ್ರದೇಶ ಸಮಸ್ಯೆಗಳಿಂದ ಮಾತ್ರ ಮುಕ್ತವಾಗಿಲ್ಲ. ಇಲ್ಲಿನ ನಿವಾಸಿಗಳು ಉತ್ತಮ ಸರ್ಕಾರಿ ಆಸ್ಪತ್ರೆಗಳ ಕೊರತೆ, ಉದ್ಯಾನವನಗಳು ಮತ್ತು ಟ್ರಾಫಿಕ್ ಅಡೆತಡೆಗಳನ್ನು ಪ್ರಮುಖ ಚುನಾವಣಾ ಸಮಸ್ಯೆಗಳಾಗಿ ಪಟ್ಟಿ ಮಾಡಿದ್ದಾರೆ. ಪೌರಕಾರ್ಮಿಕ ಕಾಮಗಾರಿಗಳೂ ನಡೆಯುತ್ತಿಲ್ಲ ಹಾಗೂ ರಾಜಕಾರಣಿಗಳ ನಡುವಿನ ಘರ್ಷಣೆಯಿಂದ ಅನುದಾನವನ್ನು ತಡೆಹಿಡಿಯಲಾಗಿದೆ ಎಂದು ದೂರುತ್ತಾರೆ.

ದಾಸರಹಳ್ಳಿ ಬಿಬಿಎಂಪಿಗೆ ಸೇರ್ಪಡೆಗೊಂಡ ನಂತರ ಕ್ಷೇತ್ರದ ಚಿತ್ರಣ ಬದಲಾದರೂ ಜನರ ಕನಿಷ್ಠ ನಿರೀಕ್ಷೆಗಳನ್ನು ಈಡೇರಿಸಲಾಗಿಲ್ಲ. ಕಿರಿದಾದ ರಸ್ತೆಗಳಿಂದ ಪಾದಚಾರಿಗಳು, ವಾಹನ ಸವಾರರು ಸಂಚಾರ ದಟ್ಟಣೆಯಿಂದ ನಿತ್ಯ ತೊಂದರೆ ಪಡಬೇಕಿದೆ. ಕುಡಿಯುವ ನೀರಿನ ಸಮಸ್ಯೆ ಪ್ರತಿ ಬೇಸಿಗೆಯಲ್ಲಿ ತಾಂಡವವಾಡುತ್ತದೆ. ಒಳಚರಂಡಿ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ.

ಜಾತಿವಾರು ಪ್ರಾಬಲ್ಯ

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 4,37 ಲಕ್ಷ. ಈ ಪೈಕಿ 1,70,000 ಒಕ್ಕಲಿಗರು. ಈ ಕಾರಣದಿಂದಲೇ ಮೂರು ಪಕ್ಷಗಳು ಒಕ್ಕಲಿಗರಿಗೆ ಟಿಕೆಟ್ ನೀಡಿವೆ. ಇನ್ನುಳಿದಂತೆ ಲಿಂಗಾಯತರು 43,000, ಪರಿಶಿಷ್ಟ ಜಾತಿ ಮತ್ತು ಪಂಗಡ 90,000, ಬ್ರಾಹ್ಮಣರು 25,000, ಒಬಿಸಿ 80,000 ಹಾಗೂ ಇತರೇ ಭಾಷಿಕರು 29,000 ಇದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...