ದಾವಣಗೆರೆ | ಅಡಿಕೆ ಮರಗಳಿಗೆ ಒಣಗುವ ಔಷಧಿ ಇಟ್ಟ ದುಷ್ಕರ್ಮಿಗಳು

Date:

ಕಟಾವಿಗೆ ಬಂದಿದ್ದ 450ಅಡಿಕೆ ಮರಗಳಿಗೆ ಒಣಗುವ ಔಷಧಿ ಇಟ್ಟಿರುವ ಘಟನೆ ತ್ಯಾವಣಿಗೆ ಸಮೀಪದ ದೊಡ್ಡಘಟ್ಟ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಸಮಾಜದ ನೂರಾಣಿ ಮಸೀದಿಗೆ ಸೇರಿದ ತೋಟದ ಸುಮಾರು 450 ಅಡಿಕೆ ಮರಗಳಿಗೆ ದುಷ್ಕರ್ಮಿಗಳು ವಣಗುವ ಔಷಧಿ ಇಟ್ಟಿದ್ದಾರೆ.

ಮುಸ್ಲಿಂ ಕಮಿಟಿಗೆ ಸೇರಿದ ಜಾಗದಲ್ಲಿ ಸಾಂಗಾಹಳ್ಳಿ ಬಷೀರ್ ಸಾಬ್ ಎಂಬುವವರು, ಎರಡು ಎಕರೆ ಭೂಮಿಯಲ್ಲಿ ಒಂದು ಸಾವಿರ ಅಡಿಕೆ ಸಸಿ ನೆಟ್ಟು ಪೋಷಣೆ ಮಾಡಿ ಬೆಳೆಸಿದ್ದರು. ಈಗ ಈ ಮರಗಳಲ್ಲಿ ಫಸಲು ಕಟಾವು ಹಂತದಲ್ಲಿತ್ತು. ಅಡಿಕೆ ಮರಗಳ ಬುಡಕ್ಕೆ ಮಚ್ಚಿನಿಂದ ಕಚ್ಚಿ ಹಾಕಿ ರೌಂಡ್ ಅಪ್ ಔಷಧಿ ಸಿಂಪಡಿಸಿದ್ದಾರೆ. ಇದರಿಂದಾಗಿ ಅಡಿಕೆ ಮರಗಳು ಒಣಗಿವೆ. ಬಸವಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಬಗ್ಗೆ ಸಮಾಜದವರು ಬಸವಪಟ್ಟಣ ಠಾಣೆಗೆ ದೂರು ನೀಡಲು ನಿರ್ಧರಿಸಿದ್ದಾರೆಂದು ಗ್ರಾಮಸ್ಥರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...