ಹಿರಿಯ ಪತ್ರಕರ್ತ ಮತ್ತು ಕನ್ನಡ ಹೋರಾಟಗಾರರ ವಿರುದ್ಧದ ಎಫ್‌ಐಆರ್‌ ರದ್ದತಿಗೆ ಒತ್ತಾಯ

Date:

ಸುಳ್ಳುಸುದ್ದಿ ಹರಿಬಿಟ್ಟಿದ್ದಾರೆಂದು ಆರೋಪಿಸಿ ಹಿರಿಯ ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು, ಕನ್ನಡ ಪರ ಹೋರಾಟಗಾರ ಬಿ. ಹರೀಶ್‌ಕುಮಾರ್‌ ಭೈರಪ್ಪ, ಹೇಮಂತ್‌ಕುಮಾರ್‌, ಬಿಂದುಗೌಡ, ದಿಲೀಪ್‌ಗೌಡ ಅವರ ವಿರುದ್ಧ ದುರುದ್ದೇಶದಿಂದ ಎಫ್‌ಐಆರ್‌ ದಾಖಲಿಸಲಾಗಿದೆ. ಕೂಡಲೇ ಎಫ್‌ಐಆರ್‌ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಸಮಾನ ಮನಸ್ಕರ ಒಕ್ಕೂಟ – ಕರ್ನಟಕ ಒತ್ತಾಯಿಸಿದೆ.

ಬೆಂಗಳೂರಿನಲ್ಲಿ ಪೊಲೀಸ್‌ ಮಹಾನಿರೀಕ್ಷಕರಿಗೆ ಹಕ್ಕೊತ್ತಾಯ ಸಲ್ಲಿಸಿರುವ ಒಕ್ಕೂದ ಸದದ್ಯರು, “ದಿನೇಶ್‌ ಮತ್ತಿತರರು ತಮ್ಮ ಫೇಸ್‌ಬುಕ್‌ನಲ್ಲಿ ‘ಬಿ.ಎಲ್‌. ಸಂತೋಷ್‌ ಮಾತನಾಡಿದ್ದಾರೆ ಎಂದು ಹೇಳಲಾಗುವ’ ವರದಿಯನ್ನು ಪೋಸ್ಟ್‌ ಮಾಡಿ ‘ಇದು ನಿಜವೇ, ಅಲ್ಲವೇ ಎಂದು ಸಂತೋಷ್‌ ಅವರು ಸ್ಪಷ್ಟೀಕರಣ ಕೊಡಲಿ’ ಎಂದಿದ್ದಾರೆ. ಅವರು ತಮ್ಮ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ಪ್ರಶ್ನೆ ಮಾಡಿದ್ದಾರೆ. ಎಲ್ಲಿಯೂ ಆ ವರದಿಯನ್ನು ಸಮರ್ಥನೆ ಮಾಡಿಲ್ಲ ಮತ್ತು ನಿಜವೆಂದು ಪ್ರಚಾರ ಮಾಡಿಲ್ಲ” ಎಂದು ವಿವರಿಸಿದ್ದಾರೆ.

“ಯಾವುದೇ ಆಯಾಮದಿಂದ ನೋಡಿದರೂ ದಿನೇಶ್‌ ಮತ್ತಿತರರ ಮೇಲೆ ಮಾಡಲಾದ ಆರೋಪ ಸುಳ್ಳಾಗಿದೆ. ಸತ್ಯಕ್ಕೆ ದೂರವಾಗಿದೆ ಎಂಬುದು ಅವರ ಪೋಸ್ಟ್‌ಗಳನ್ನು ನೋಡಿದರೆ ಸ್ಪಷ್ಟವಾಗತ್ತದೆ. ಹೀಗಾಗಿ, ಅವರೆಲ್ಲರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಅನ್ನು ಹಿಂಪಡೆಯಬೇಕು” ಎಂದು ಒಕ್ಕೂಟ ಮನವಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಿತ್ತಾಪುರ ಕ್ಷೇತ್ರದ ಬಜೆಪಿ ಅಭ್ಯರ್ಥಿ ಮಣಿಕಂಠ ಅವರು ‘ಖರ್ಗೆ ಕುಟುಂಬವನ್ನು ಸಾಫ್‌ ಮಾಡುತ್ತೇನೆ’ ಎಂದು
ಹೇಳುವ ಆಡಿಯೋ ಹರಿದಾಡುತ್ತಿದೆ ಮತ್ತು ಆ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದೆ. ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿರುವ ಮಣಿಕಂಠ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಅವರನ್ನು ಬಂಧಿಸಬೇಕಾಗಿತ್ತು. ಆದರೆ ಸಂಬಂಧಪಟ್ಟವರು ಈ ಕುರಿತು ಮೌನವಾಗಿರುವುದು ನಮಗೆ ಆತಂಕ ಮೂಡಿಸಿದೆ” ಎಂದು ಒಕ್ಕೂಟದ ಮುಖಂಡರು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?: ಈದಿನ.ಕಾಮ್‌ ಸಮೀಕ್ಷೆ-8: ಕಾಂಗ್ರೆಸ್‌ಗೆ ಸಿಗಲಿದೆ ಸ್ಪಷ್ಟ ಬಹುಮತ; 132-140 ಸೀಟುಗಳ ನಿರೀಕ್ಷೆ

“ವಿಜಯಪುರದ ಬಿಜೆಪಿ ಅಭ್ಯರ್ಥಿ ಬಸವರಾಜ ಪಾಟೀಲ್‌ ಯತ್ನಾಳ್‌ ಅವರು ಜನರನ್ನು ಪ್ರಚೋದಿಸುವಂತಹ ಹೇಳಿಕೆ ಕೊಡುತ್ತಿದ್ದಾರೆ. ಆದರೆ, ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿರುವುದಿಲ್ಲ. ಬಿಜೆಪಿ ಮುಖಂಡರು ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್‌ ಎಂದು ಅವಹೇಳನ ಮಾಡುತ್ತಿದ್ದಾರೆ. ಅವರ ವಿರುದ್ಧವೂ ಕ್ರಮ ತೆಗೆದುಕೊಂಡಿಲ್ಲ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರು ‘ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಎಲ್ಲ ಅನುದಾನಗಳನ್ನು ನಿಲ್ಲಿಸುತ್ತೇವೆ’ ಎಂದು ರಾಜ್ಯದ ಜನರನ್ನು ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಂಡಡಿಲ್ಲ. ಆದರೆ, ಸೇಡಿನ ರಾಜಕೀಯದ ಕಾರಣದಿಂದ ದಿನೇಶ್‌ ಮತ್ತು ಹರೀಶ್‌ ಇನ್ನಿತರರ ವಿರುದ್ಧ ಆಧಾರರಹಿತ ದೂರನ್ನು ಆಧರಿಸಿ ಮಿಂಚಿನ ವೇಗದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಈ ಎಫ್‌ಐಆರ್‌ಅನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಒಕ್ಕೂಟದ ಮುಖಂಡರಾದ ಎಸ್‌.ಜಿ ಸಿದ್ದರಾಮಯ್ಯ, ಎನ್.ಎಲ್ ಮುಕುಂದರಾಜ್, ಜಾಣಗೆರೆ ವೆಂಕಟೇಶಯ್ಯ, ವಸುಂಧರಾ ಭೂಪತಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...