ಆಯೋಗಕ್ಕೆ ದೇಣಿಗೆಯ ದೂರು ನೀಡಿದ ಕರಂದ್ಲಾಜೆ; ನಾಮಪತ್ರ ತಿರಸ್ಕಾರದ ಭೀತಿಯಲ್ಲಿ ಕಾಂಗ್ರೆಸ್ಸಿಗರು!

Date:

  • ಕಾಂಗ್ರೆಸ್ಸಿಗರ ನಾಮಪತ್ರ ತಿರಸ್ಕಾರ ಮಾಡಲು ಆಯೋಗಕ್ಕೆ ಬಿಜೆಪಿ ಮನವಿ
  • ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೇಣಿಗೆಯ ದೂರು ನೀಡಿದ ಕರಂದ್ಲಾಜೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ಎದುರಾಗಿದ್ದ ನಾಮಪತ್ರ ತಿರಸ್ಕಾರದ ಭೀತಿ ಈಗ ಕಾಂಗ್ರೆಸ್ ಅಭ್ಯರ್ಥಿಗಳೆಲ್ಲರಿಗೂ ಎದುರಾಗಿದೆ.

ರಾಜ್ಯ ಬಿಜೆಪಿ ಚುನಾವಣಾ ಆಯೋಗಕ್ಕೆ ನೀಡಿರುವ ದೂರು ಇಂತಹದ್ದೊಂದು ಆತಂಕವನ್ನು ಸೃಷ್ಟಿಸಿದೆ.

ದೇಶದಲ್ಲಿ ಯಾವುದೇ ಪಕ್ಷದಿಂದ ತನ್ನ ಅಭ್ಯರ್ಥಿಗಳಿಂದ ಹಣವನ್ನು ಪಡೆದು ಬಿ ಫಾರಂ ನೀಡುವಂತಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈ ಕೆಲಸ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣೆಗೆ ನಿಂತ ಪಕ್ಷದ ಎಲ್ಲ ಅಭ್ಯರ್ಥಿಗಳಿಂದ ತಲಾ 2 ಲಕ್ಷ ರೂ. ಹಣವನ್ನು ಪಡೆದು ಬಿ ಫಾರಂ ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ಸಲ್ಲಿಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಹಣವನ್ನ ತೆಗೆದುಕೊಂಡು ಅಪ್ಲಿಕೇಶನ್ ಕೊಟ್ಟು, ಬಿ ಫಾರಂ ವಿತರಿಸಿದೆ. ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬಿ ಫಾರಂ ಕೊಡಲು ನಿಯೋಜಿತರಾಗಿದ್ದರು.

ಯಾರಿಗೆ ಕಾಂಗ್ರೆಸ್ ಪಕ್ಷದಿಂದ ಬಿ ಫಾರಂ ಬೇಕು, ಅವರು ಅರ್ಜಿ ಹಾಕಬೇಕು ಎಂದು ಹೇಳಿದ್ದರು. ಹಾಗೆಯೇ ಇದರ ವಿತರಣೆ ವೇಳೆ ಪ್ರತಿ ಅರ್ಜಿಗೆ 2ಲಕ್ಷ ಹಣ ಪಾವತಿಸಿಕೊಂಡಿದ್ದಾರೆ.

ಇಲ್ಲಿಯವರೆಗೆ ಆ ಪಕ್ಷ 1,350 ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿಗಳನ್ನು ಸ್ವೀಕರಿಸಿದೆ. ಇದು ಜನಪ್ರತಿನಿಧಿ ಕಾಯ್ದೆ 171ಡಿ ಪ್ರಕಾರ ಅಪರಾಧ. ಈ ಕಾಯ್ದೆಯನ್ನು ಮುಂದಿಟ್ಟುಕೊಂಡು ನಾವು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದೇವೆ ಎಂದು ಕೇಂದ್ರ ಸಚಿವೆ ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷಾಧ್ಯಕ್ಷರೇ ಹೇಳಿಕೊಂಡಿರುವಂತೆ ಅರ್ಜಿ ವಿತರಣೆಯಿಂದ 23 ಕೋಟಿ ಹಣ ಸಂಗ್ರಹ ಆಗಿದೆ. ಕಾನೂನಾತ್ಮಕವಾಗಿ ಇದು ತಪ್ಪಾಗಲಿದೆ. ಯಾರು ಹಣ ಕೊಟ್ಟು ಬಿ ಫಾರಂ ಪಡೆದಿರುವುದು ಹಣಕ್ಕೆ ಬಿ ಫಾರಂ ವಿತರಿಸುವುದೂ ಅಪರಾಧವಾಗಲಿದೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ 224 ಅಭ್ಯರ್ಥಿಗಳ ಬಿ ಫಾರಂಗಳನ್ನು ಪೀಪಲ್ ರೆಪ್ರೆಸೆಂಟೇಟಿವ್ಸ್ ಕಾಯ್ದೆ ಪ್ರಕಾರ ತಿರಸ್ಕಾರ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.ಶೋಭಾ ಕರಂದ್ಲಾಜೆ ದೂರು

ಈ ಸುದ್ದಿ ಓದಿದ್ದೀರಾ?:ಡಿಕೆಶಿ ನಾಮಪತ್ರ ಅಂಗೀಕಾರ; ಕನಕಪುರದಲ್ಲಿ ಡಿ ಕೆ ಶಿವಕುಮಾರ್‌ ಸ್ಪರ್ಧೆ ಖಚಿತ

ಕಾಂಗ್ರೆಸ್ ಹಣ ಪಡೆದಿದ್ದೇಕೆ?:

ಸುಸಜ್ಜಿತ ಕಾಂಗ್ರೆಸ್ ಭವನ ನಿರ್ಮಾಣದ ಸಲುವಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿತರು ಅರ್ಜಿ ಪಡೆಯಲು ತಲಾ 1 ಸಾವಿರ ರೂಪಾಯಿ ದರ ನಿಗದಿ ಮಾಡಿದ್ದರು.

ಅರ್ಜಿ ಸಲ್ಲಿಕೆ ವೇಳೆ ಕಾಂಗ್ರೆಸ್ ಭವನ ನಿರ್ಮಾಣಕ್ಕಾಗಿ ತಲಾ 2 ಲಕ್ಷ ರೂಪಾಯಿ ದೇಣಿಗೆ ಕೊಡಲು ಸೂಚಿಸಿದ್ದರು. ಅದರಂತೆ ಅಭ್ಯರ್ಥಿಗಳೆಲ್ಲ ದೇಣಿಗೆ ನೀಡಿ ಭಿ ಪಾರಂ ಪಡೆದುಕೊಂಡಿದ್ದರು.

ಕಾಂಗ್ರೆಸ್‌ನ ಈ ದೇಣಿಗೆ ಸಂಗ್ರಹ ವಿಚಾರವೇ ಬಿಜೆಪಿ ಪಾಲಿನ ಚುನಾವಣಾ ಅಸ್ತ್ರವಾಗಿ ಬದಲಾಗಿದೆ. ವಿಪಕ್ಷದ ಮೇಲೆ ಪ್ರಯೋಗಿಸಿರುವ ಕಮಲ ಪಕ್ಷದ ದೂರಿನ ಬಾಣಕ್ಕೆ ಚುನಾವಣಾ ಆಯೋಗ ಯಾವ ಉತ್ತರ ನೀಡುತ್ತದೆ ಎನ್ನುವುದೇ ಈಗ ಕುತೂಹಲದ ಸಂಗತಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...