ಗೊಂದಲ ಗಲಭೆ ಇಲ್ಲದ ಚುನಾವಣೆ ನಡೆಯಲಿ: ಶೋಭಾ ಕರಂದ್ಲಾಜೆ

Date:

  • ಈ ಬಾರಿ ಚುನಾವಣೆ ಶಾಂತಿಯುತ ಮತದಾನದಿಂದ ಕೂಡಿರಲಿ ಶೋಭಾ ಕರಂದ್ಲಾಜೆ
  • ಜನತೆ ಡಬಲ್ ಎಂಜಿನ್ ಸರ್ಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ

ಚುನಾವಣಾ ದಿನಾಂಕ ನಿಗದಿಪಡಿಸಿಕೊಂಡಿರುವ ರಾಜ್ಯ ವಿಧಾನಸಭಾ ಚುನಾವಣೆ ಗೊಂದಲ ಗಲಭೆ ಇಲ್ಲದೆ ನಡೆಯುವಂತಾಗಲಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಶಯ ವ್ಯಕ್ತಪಡಿಸಿದರು.

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿಯಲ್ಲಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶೋಭಾ ಕರಂದ್ಲಾಜೆ ಮರುಮತದಾನವಾಗದ ಚುನಾವಣೆ ನಡೆಯಲಿ ಎಂದರು.

ಒಂದೇ ಹಂತದಲ್ಲಿ ಚುನಾವಣೆ ನಡೆಯಬೇಕು ಎಂಬುವುದು ನಮ್ಮ ನಿರೀಕ್ಷೆಯಾಗಿತ್ತು. ಅದರಂತೆಯೇ ಚುನಾವಣೆ ನಡೆಯುತ್ತಿದೆ. ಶಾಂತಿಯುತ ಮತದಾನದಿಂದ ಕೂಡಿರಲಿ, ಈ ಬಾರಿ ಚುನಾವಣೆಯಲ್ಲಿ 9.17 ಲಕ್ಷ ಯುವಜನರು ಮೊದಲ ಬಾರಿಗೆ ಮತದಾನ ಮಾಡಲಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಟ್ಟಾರೆ ಮತದಾರ ಪಟ್ಟಿಗೆ ನೋಂದಣಿ ಮಾಡಿಸಲು ಏಪ್ರಿಲ್ 11ವರೆಗೆ ಅವಕಾಶ ನೀಡಲಾಗಿದೆ. ಇದು ಸ್ವಾಗತಾರ್ಹ ಎಂದು ಕೇಂದ್ರ ಸಚಿವೆ ತಿಳಿಸಿದರು.

80 ವರ್ಷಕ್ಕಿಂತ ಮೇಲ್ಪಟ್ಟ 12 ಲಕ್ಷಕ್ಕೂ ಹೆಚ್ಚು ಮತದಾರರು, ಸಾವಿರಾರು ದಿವ್ಯಾಂಗ ಮತದಾರರು ಮನೆಯಲ್ಲೇ ಕುಳಿತು ಮತದಾನ ಮಾಡಲು ಅವಕಾಶ ನೀಡಲಾಗಿದೆ.

ಚುನಾವಣಾ ಆಯೋಗದ ಈ ನಡೆ ಸ್ವಾಗತಾರ್ಹ. ತಂತ್ರಜ್ಞಾನಕ್ಕೆ ಒತ್ತುಕೊಟ್ಟ ಕಾರಣ ಇದು ಸಾಧ್ಯವಾಗಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಬೆಂಗಳೂರಿಗೆ ಒತ್ತು

ಬೆಂಗಳೂರಿನಲ್ಲಿ ಮತದಾನದ ಶೇಕಡಾವಾರು ಕಡಿಮೆ ಆಗುವ ಕುರಿತು ಆಯೋಗ ಆತಂಕ ವ್ಯಕ್ತಪಡಿಸಿದೆ. ಜತೆಗೆ ಈ ವಿಚಾರದ ಬಗ್ಗೆ ನಾಗರಿಕರು ಹೆಚ್ಚು ಒತ್ತು ಕೊಡಲು ಕೋರಿದೆ.

ಇದಕ್ಕಾಗಿ ನಗರದ ಮತದಾರರನ್ನು ಕರೆತರಲು ಮತ್ತು ಮನ ಒಲಿಸಲು ವಿಶೇಷ ಪ್ರಯತ್ನ ಅಗತ್ಯ. ಇದನ್ನು ಪಕ್ಷಾತೀತವಾಗಿ ಎಲ್ಲರೂ ಮಾಡುವಂತಾಗಬೇಕು ಎಂದು ಅವರು ನುಡಿದರು.

ರಾಜ್ಯದ ಹಲವು ಕ್ಷೇತ್ರಗಳಲ್ಲಿ ಪುರುಷ ಮತದಾರರು ಬಹುತೇಕ ಸರಿಸಮವಾಗಿ ಮಹಿಳಾ ಮತದಾರರರಿದ್ದಾರೆ, ಕೆಲವೆಡೆ ಹೆಚ್ಚು ಮತದಾರರಿರುವುದೂ ಖುಷಿಯ ವಿಚಾರ ಎಂದು ಕೇಂದ್ರ ಸಚಿವೆ ಮೆಚ್ಚುಗೆ ವ್ಯಕ್ತಪಡಿಸಿದರು.

2018ರಲ್ಲಿ ಬಿಜೆಪಿ 104 ಸೀಟುಗಳ ಜೊತೆ ಅತ್ಯಂತ ದೊಡ್ಡ ಪಕ್ಷವಾಗಿ ಜನಾಶೀರ್ವಾದ ಪಡೆದಿತ್ತು. ಆದರೆ, ಬಹುಮತ ಸಿಗಲಿಲ್ಲ. ಕಾಂಗ್ರೆಸ್-ಜೆಡಿಎಸ್ ಅಪವಿತ್ರ ಮೈತ್ರಿ ಸರಕಾರ ರಚಿಸಲಾಯಿತು.

ಆದರೆ ಮುಂದಿನ ಚುನಾವಣೆಯಲ್ಲಿ ಜನ ಇದಕ್ಕೆ ಆಸ್ಪದ ನೀಡದೆ ಬಿಜೆಪಿಗೆ ಪೂರ್ಣ ಬಹುಮತ ನೀಡಲಿದ್ದಾರೆ ಎಂದು ಶೋಭಾ ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಚುನಾವಣೆ ಬಂದಾಗ ಗ್ಯಾರಂಟಿ ಕೊಡುವ ಪಕ್ಷಗಳು. ಚುನಾವಣೆಗಾಗಿ ಜಾತಿ, ಧರ್ಮದ ಹೆಸರು ಹೇಳಿ ಒಡೆದು ಆಳುವ ಕೆಲಸ ಮಾಡುತ್ತವೆ ಎಂದು ಶೋಭಾ ಆರೋಪಿಸಿದರು.

2013-18ರ ಕಾಲಾವಧಿಯಲ್ಲಿ ಕೂಡ ಕಾಂಗ್ರೆಸ್ ಆಡಳಿತವಿದ್ದಾಗ ಆ ಪಕ್ಷ ಇದನ್ನೇ ಮಾಡಿತ್ತು. ಸಿದ್ದರಾಮಯ್ಯರ ಸರಕಾರ ಸಮಾಜ, ಧರ್ಮವನ್ನು ಒಡೆಯುವ ದುಷ್ಕೃತ್ಯ ಮಾಡಿತ್ತು ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?:ಈ ಬಾರಿಯ ಚುನಾವಣೆಗೆ ಹೊಸ ಇವಿಎಂ, ವಿವಿಪ್ಯಾಟ್ ಬಳಕೆ…

ಬಿಜೆಪಿ ಸರ್ವ ಜನಾಂಗವನ್ನು ಒಟ್ಟಿಗೆ ಒಯ್ಯುವ, ಯಾವುದೇ ಯೋಜನೆ ಇದ್ದರೂ ಎಲ್ಲ ಜನಾಂಗಗಳ ಕೊನೆ ವ್ಯಕ್ತಿಗಳಿಗೆ ತಲುಪಿಸುವ ಕಾರ್ಯವನ್ನು ಮಾಡಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಹೆಚ್ಚು ವೇಗವಾಗಿ ಅಭಿವೃದ್ಧಿ ಕಾರ್ಯ ಸಾಧ್ಯ ಎಂದು ಜನರು ಅಭಿಪ್ರಾಯ ಹೊಂದಿದ್ದಾರೆ.

ಕರ್ನಾಟಕದಲ್ಲಿ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಸರ್ಕಾರದ ಯೋಜನೆಗಳನ್ನು ನಾವು ನಿರಂತರವಾಗಿ ಜನರಿಗೆ ತಿಳಿಸುತ್ತಿದ್ದೆವು. ಚುನಾವಣೆ ಇಲ್ಲದ ಕಾಲದಲ್ಲೂ ನಾವು ಇದನ್ನು ಶಿಸ್ತಿನಿಂದ ಮಾಡಿದ್ದೇವೆ ಎಂದು ಅವರು ಹೇಳಿದರು.

ಹೀಗಾಗಿ ಮೇ 10ರಂದು ನಡೆಯುವ ಚುನಾವಣೆಯಲ್ಲಿ ಜನತೆ ಡಬಲ್ ಎಂಜಿನ್ ಸರ್ಕಾರ ರಚನೆಗೆ ಮತ್ತೆ ಅವಕಾಶ ಮಾಡಿಕೊಡಲಿದ್ದಾರೆ ಎಂದು ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...