ಚುನಾವಣೆ 2023 | ಜೆಡಿಎಸ್‌ನಲ್ಲಿ ಪಕ್ಷಾಂತರಿಗಳ ಹವಾ; ಕೈ-ಕಮಲ ತೊರೆದು ತೆನೆ ಹೊತ್ತ 24 ಮಂದಿ

Date:

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಮೂರು ವಾರಗಳಷ್ಟೇ ಬಾಕಿ ಉಳಿದಿವೆ. ಎಲ್ಲ ಪ್ರಮುಖ ಪಕ್ಷಗಳು ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳಿಗೂ ತಮ್ಮ ಅಭ್ಯರ್ಥಿಗಳನ್ನು ಘೋಷಿಸಿದ್ದಾರೆ. ಒಂದೊಂದು ಪಟ್ಟಿ ಪ್ರಕಟವಾದಂತೆ ಬಂಡಾಯದ ಕಾವು ಏರುತ್ತಲೇ ಇದೆ. ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಬೆಳೆಯುತ್ತಲೇ ಇದೆ. ಆದರೂ, ಪಕ್ಷಾಂತರ ಲಾಭವನ್ನು ಜೆಡಿಎಸ್‌ ಹೆಚ್ಚಾಗಿ ಪಡೆದುಕೊಂಡಿದೆ. ಇದೂವರೆಗೂ ರಾಜ್ಯದಲ್ಲಿ 24 ಮಂದಿ ಪ್ರಭಾವಿ ನಾಯಕರು ಮತ್ತು ಮುಖಂಡರು ಕೈ-ಕಮಲ ಪಕ್ಷಗಳನ್ನು ತೊರೆದು ಜೆಡಿಎಸ್‌ ಸೇರಿಸಿದ್ದಾರೆ.

ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ಸಿಟ್ಟಿಗೆದ್ದಿರುವ ಉಭಯ ಪಕ್ಷಗಳ ಮುಖಂಡರು ಪಕ್ಷಗಳನ್ನು ತೊರೆದು, ಜೆಡಿಎಸ್‌ ಸೇರಿದ್ದಾರೆ. ಇದೂವರೆಗೆ ಕಾಂಗ್ರೆಸ್‌ ಮತ್ತು ಬಿಜೆಪಿಯ ಮಾಜಿ ಶಾಸಕರು, ಮಾಜಿ ಸಚಿವರು ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯರು ಸೇರಿದಂತೆ ಹಲವಾರು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ ಸಖ್ಯ ಬೆಳೆಸಿದ್ದಾರೆ. ಅವರೆಲ್ಲ ಸೇರ್ಪಡೆಯಿಂದ ಜೆಡಿಎಸ್‌ ಶಕ್ತಿ ಹೆಚ್ಚಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನ ಗಳಿಸಲು ನೆವಾಗಲಿದೆ ಎನ್ನಲಾಗಿದೆ.

ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಜೆಡಿಎಸ್‌ಗೆ ನೆಲೆ ಇರಲಿಲ್ಲ. ಇದೀಗ, ಅಲ್ಲಿನ ಸ್ಥಳೀಯ ನಾಯಕರು ಜೆಡಿಎಸ್‌ಗೆ ಸೇರ್ಪಡೆಯಾಗಿರುವುದರಿಂದ ಪಕ್ಷವು ತನ್ನ ಪ್ರಾಬಲ್ಯವನ್ನು ಬೆಳೆಸಿಕೊಳ್ಳಲು ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಹಲವು ಹಾಲಿ ವಿಧಾನ ಪರಿಷತ್‌ ಸದಸ್ಯರು ಮತ್ತು ಶಾಸಕರು ಜೆಡಿಎಸ್‌ ಸೇರುವ ಸಾಧ್ಯತೆಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌-ಬಿಜೆಪಿ ತೊರೆದು ಜೆಡಿಎಸ್‌ ಸೇರಿದವರ ಪಟ್ಟಿ ಹೀಗಿದೆ:

ಬಿಜೆಪಿ ತೊರೆದು ತೆನೆ ಹೊತ್ತವರು

  • ಶಹಾಪುರದ ಗುರುಪಾಟೀಲ್‌ ಶಿರವಾಳ್‌
  • ಜೇವರ್ಗಿಯ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್
  • ಬೀದರ್‌ನ ಸೂರ್ಯಕಾಂತ ನಾಗಮಾರಪಲ್ಲಿ
  • ಕುಡಚಿಯ ಆನಂದ ಮಾಳಗ
  • ರಾಯಬಾಗದ ಪ್ರದೀಪ ಮಾಳಗಿ
  • ಯಾದಗಿರಿಯ ಎ.ಬಿ ಮಾಲಕರೆಡ್ಡಿ
  • ಬಸವನ ಬಾಗೇವಾಡಿಯ ಅಪ್ಪುಗೌಡ ಪಾಟೀಲ್‌
  • ಕೊಪ್ಪಳದ ಸಿ.ವಿ ಚಂದ್ರಶೇಖರ್
  • ಅರಸೀಕೆರೆಯ ಎನ್‌.ಆರ್‌ ಸಂತೋಷ್‌
  • ಅರಕಲಗೂಡಿನ ಎ ಮಂಜು
  • ಮೂಡಿಗೆರೆಯ ಎಂ.ಪಿ ಕುಮಾರಸ್ವಾಮಿ
  • ವರುಣಾ ಕ್ಷೇತ್ರದ ಭಾರತಿ ಶಂಕರ್‌

ಕಾಂಗ್ರೆಸ್‌ಗೆ ಕೈ ಕೊಟ್ಟು ತೆನೆ ಹೊತ್ತವರು

  • ಅಥಣಿಯ ಶಶಿಕಾರ್‌ ಪಡಲಗಾ
  • ಹಾನಗಲ್‌ನ ಮನೋಹರ ತಹಸೀಲ್ದಾರ್‌
  • ಜಗಳೂರಿನ ಎಚ್‌.ಪಿ ರಾಜೇಶ್
  • ಚಿತ್ರದುರ್ಗದ ರಘು ಆಚಾರ್‌
  • ಹಳಿಯಾಳದ ಘೋಕ್ಲೃಕರ್‌
  • ಬಾಗಲಕೋಟೆಯ ದೇವರಾಜ ಪಾಟೀಲ್‌
  • ಚನ್ನಗಿರಿಯ ತೇಜಸ್ವಿ ಪಟೇಲ್
  • ಮಾಯಕೊಂಡದ ಆನಂದಪ್ಪ
  • ಶಿಕಾರಿಪುರದ ನಾಗರಾಜಗೌಡ
  • ಕಂಪ್ಲಿಯ ರಾಜು ನಾಯಕ್
  • ಕಾರವಾರದ ಚೈತ್ರಾ ಕೋಠಾರ್‌ಕರ್
  • ಬೆಂಗಳೂರು ದಕ್ಷಿಣ ಕ್ಷೇತ್ರದ ರಾಜಗೋಪಾಲರೆಡ್ಡಿ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...