ಬಂಗಾರಪೇಟೆ ಕ್ಷೇತ್ರ | ಕಾಂಗ್ರೆಸ್‌ಗೆ ಮತ್ತೆ ಮಣೆ ಹಾಕುವುದೇ ಮೀಸಲು ಕ್ಷೇತ್ರ?

Date:

ಪ್ರತಿ ಕ್ಷೇತ್ರ ಮರುವಿಂಗಣೆ ಸಂದರ್ಭದಲ್ಲಿಯೂ ಬದಲಾಗುತ್ತಲೇ ಬಂದದ್ದು, ಬಂಗಾರಪೇಟೆ ವಿಧಾನಸಭಾ ಕ್ಷೇತ್ರ. ಈ ಕ್ಷೇತ್ರವು 1967ರಲ್ಲಿ ಬೇತಮಂಗಲ ಕ್ಷೇತ್ರವಾಗಿ ಮರುನಾಮಕರಣವಾಗಿತ್ತು. ಅ ನಂತರ, 1972ರಲ್ಲಿ ಬೇತಮಂಗಲ ಪರಿಶಿಷ್ಟ ಜಾತಿ (ಎಸ್‌ಸಿ) ಮೀಸಲು ಕ್ಷೇತ್ರವಾಗಿ ಬದಲಾಯಿತು. ಬಳಿಕ, 2008ರಲ್ಲಿ ಬಂಗಾಪೇಟೆ ಮೀಸಲು ಕ್ಷೇತ್ರವಾಯಿತು.

ಕೆ.ಸಿ.ರೆಡ್ಡಿಯವರು ಈ ಕ್ಷೇತ್ರದಿಂದ ಆಯ್ಕೆಯಾಗಿ, ರಾಜ್ಯದ ಮೊದಲ ಮುಖ್ಯಮಂತ್ರಿಯೂ ಆಗಿದ್ದರು. ಅಂದಿನಿಂದ ಇಂದಿನವರೆಗೂ ಹಲವರಿಗೆ ಅವಕಾಶ ನೀಡಿದರೂ, ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆಯಾಗಿ ಉಳಿದಿದೆ. ಕಳೆದ ಎರಡು ಚುನಾವಣೆಗಳಲ್ಲಿ ಗೆಲುವು ಕಂಡಿರುವ ಹಾಲಿ ಶಾಸಕ, ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಎನ್ ನಾರಾಯಣಸ್ವಾಮಿ, ತಮ್ಮ ಮೂರನೇಗೆಲುವಿಗಾಗಿ ಹೋರಾಟ ನಡೆಸುತ್ತಿದ್ದಾರೆ.

ಸದ್ಯ ಅವರ ವಿರುದ್ಧ ಭೂಮಿ ಒತ್ತುವರಿ ಆರೋಪ ಕೇಳಿ ಬಂದಿವೆ. ಆದರೂ, ಅವರು ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಕೆಲಸಗಳಿಂದ ಜನ ಕೈ ಹಿಡಿಯುತ್ತಾರೆ ಎಂಬ ವಿಶ್ವಾಸದಲ್ಲಿದ್ದಾರೆ. ಅಲ್ಲದೆ, ತಮ್ಮ ವಿರುದ್ಧದ ಆರೋಪವನ್ನು ಸಂಸದ ಮುನಿಸ್ವಾಮಿ ಸಾಬೀತು ಪಡಿಸಿದರೆ, ರಾಜಕೀಯ ನಿವೃತ್ತಿ ಪಡೆದುಕೊಳ್ಳುವುದಾಗಿ ಸವಾಲು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಬಿಜೆಪಿ ಅಭ್ಯರ್ಥಿಯಾದ ಮಾಜಿ ಶಾಸಕ ಎಂ ನಾರಾಯಣಸ್ವಾಮಿ ಭೋವಿ ಸಮುದಾಯದವರಾಗಿದ್ದು ಈ ಮೊದಲು ಕ್ಷೇತ್ರದಲ್ಲಿ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು. ಈಗ ಐದನೇ ಬಾರಿಗೆ ಆಯ್ಕೆಯಾಗಬೇಕೆಂಬ ಉತ್ಸಾಹದಲ್ಲಿದ್ದಾರೆ. ಇತ್ತೀಚೆಗೆ ಅವರು ಕೇಸರಿ ಪಾಳಯವನ್ನು ತೊರೆಯುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಪಕ್ಷ ಕೊನೆಗೂ ಅವರಿಗೆ ಮಣೆ ಹಾಕಿದೆ. ಅವರ ಪರವಾಗಿ ನಟ ದರ್ಶನ್‌ ಕೂಡ ರೋಡ್‌ ಶೋ ನಡೆಸಿ, ಮತಚಾಯನೆ ಮಾಡಿದ್ದಾರೆ.

ಜೆಡಿಎಸ್‌ ಕೂಡ ಭೋವಿ ಸಮುದಾಯದ ಮಲ್ಲೇಶ್ ಬಾಬು ಅವರನ್ನು ಕಣಕ್ಕಿಳಿಸಿದೆ. ಕಳೆದ ಚುನಾವಣೆಯಲ್ಲಿಯೂ ಸ್ಪರ್ಧಿಸಿದ್ದ ಮಲ್ಲೇಶ್‌ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದ್ದರು. ಈ ಬಾರಿ, ಅವರಿಗೆ ಕ್ಷೇತ್ರದ ಮತದಾರರು ಅವಕಾಶ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳೂ ಇವೆ.

ಈ ಸುದ್ದಿ ಓದಿದ್ದೀರಾ?: ಮಾಲೂರು ಕ್ಷೇತ್ರ | ಕಾಂಗ್ರೆಸ್‌ಗೆ ನಿರಾಯಾಸದ ಗೆಲುವು ಸಾಧ್ಯತೆ!

ಜೆಡಿಎಸ್-ಬಿಜೆಪಿ ಭೋವಿ ಸಮುದಾಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ. ಹಾಗಾಗಿ, ಆ ಸಮುದಾಯದ ಮತಗಳು ವಿಭಜನೆಯಾಗುತ್ತವೆ ಎಂಬ ಅಭಿಪ್ರಾಯವಿದೆ. ಇದನ್ನು, ಕಳೆದ ಮೂರು ಚುನಾವಣೆಗಳ ಫಲಿತಾಂಶ ಸಾಬೀತುಪಡಿಸಿದೆ. ಈ ಬಾರಿಯೂ ಭೋವಿ ಮತಗಳು ವಿಭಜನೆಗೊಂಡು, ಕ್ಷೇತ್ರವು ಕಾಂಗ್ರೆಸ್‌ ತೆಕ್ಕೆಗೆ ಹೋಗುವ ಸಾಧ್ಯತೆಗಳಿವೆ.

ಬಂಗಾರಪೇಟೆ ಕ್ಷೇತ್ರದಲ್ಲಿ ಭೋಮಿ ಸಮುದಾಯವೂ ಸೇರಿದಂತೆ 70-80 ಸಾವಿರ ದಲಿತ ಮತದಾರರಿದ್ದಾರೆ. ಎರಡನೇ ಸ್ಥಾನದಲ್ಲಿ ಒಕ್ಕಲಿಗರಿದ್ದು, 40 ಸಾವಿರ ಮತಗಳಿವೆ. ಕುರುಬರು, ಪಳ್ಳೀಗ ಎಂದು ಕರೆಯುವ ತಿಗಳ ಸಮುದಾಯ ಮತ್ತು ಮುಸ್ಲಿಂ ಸಮುದಾಯದ ಸುಮಾರು 50 ಸಾವಿರ ಮತಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...