ಚುನಾವಣೆ 2023 | ಜನಾರ್ದನ ರೆಡ್ಡಿ ಪತ್ನಿಯ ಘೋಷಿತ ಆಸ್ತಿ ₹250 ಕೋಟಿ

Date:

ಬಳ್ಳಾರಿ ನಗರದ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿಅರುಣಾ ಕಣಕ್ಕಿಳಿದಿದ್ದಾರೆ. ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ತಮ್ಮ ಬಳಿಯಿರುವ ಆಸ್ತಿಯನ್ನು ಘೋಷಿಸಿದ್ದಾರೆ. ಅರುಣಾ ಮತ್ತು ಅವರ ಪತಿ ಜನಾರ್ದನ ರೆಡ್ಡಿ ಸೇರಿ 84 ಕೆಜಿ ವಜ್ರ, ಚಿನ್ನ ಮತ್ತು 437 ಕೆಜಿ ಬೆಳ್ಳಿ ಸೇರಿದಂತೆ 250 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ. ಅಲ್ಲದೆ, ಯಾವುದೇ ಖರ್ಚ-ವೆಚ್ಚವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ.

ಕಳೆದ ವರ್ಷ ಡಿಸೆಂಬರ್ 25 ರಂದು ಬಿಜೆಪಿ ತೊರೆದ ಜನಾರ್ದನ ರೆಡ್ಡಿ ಕೆಆರ್‌ಪಿ ಪಕ್ಷವನ್ನು ಕಟ್ಟಿದ್ದಾರೆ. ರೆಡ್ಡಿ ಅವರು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಲು ಸಜ್ಜಾಗಿದ್ದಾರೆ. ಪತ್ನಿ ಲಕ್ಷ್ಮಿ ಅರುಣಾ ಅವರಿಂತ ರೆಡ್ಡಿ ಹೆಚ್ಚು ವಜ್ರ ಮತ್ತು ಚಿನ್ನವನ್ನು ಹೊಂದಿದ್ದಾರೆ. ಅಫಿಡವಿಟ್ ಪ್ರಕಾರ, ರೆಡ್ಡಿ 46 ಕೆಜಿ ವಜ್ರ ಮತ್ತು ಚಿನ್ನವನ್ನು ಹೊಂದಿದ್ದರೆ, ಪತ್ನಿ 38 ಕೆಜಿ ದುಬಾರಿ ಆಭರಣವನ್ನು ಹೊಂದಿದ್ದಾರೆ.

ತಾನು ಮತ್ತು ತನ್ನ ಪತಿ ವ್ಯಾಪಾರ ಮತ್ತು ಕೃಷಿಯಲ್ಲಿ ತೊಡಗಿಸಿಕೊಂಡಿದ್ದೇವೆ ಎಂದು ಘೋಷಿಸಿರುವ ಲಕ್ಷ್ಮಿಅರುಣಾ ಅವರು ಖಾಸಗಿ ಸಾರಿಗೆ, ಗಣಿಗಾರಿಕೆ, ವಿಮಾನಯಾನ ಮತ್ತು ಕೈಗಾರಿಕಾ ಕ್ಷೇತ್ರಗಳಲ್ಲಿ ಹನ್ನೆರಡು ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ. ಅರುಣಾ ಅವರ ಹೂಡಿಕೆಯು 79 ಕೋಟಿ ರೂ.ಗಳಷ್ಟಿದ್ದರೆ, ಅವರ ಪತಿ ರೆಡ್ಡಿಯವರ ಹೂಡಿಕೆಯು ಸುಮಾರು 21 ಕೋಟಿ ರೂ.ಗಳಷ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುತೂಹಲಕಾರಿಯಾಗಿ, ವಿಮಾನಯಾನ ಕಂಪನಿಯಲ್ಲಿ ಹೂಡಿಕೆ ಮಾಡಿರುವ ಹೊರತಾಗಿಯೂ, ದಂಪತಿಗಳು ಯಾವುದೇ ವಿಮಾನ ಅಥವಾ ಖಾಸಗಿ ವಾಹನಗಳನ್ನು ಹೊಂದಿಲ್ಲವೆಂದು ಹೇಳಿಕೊಂಡಿದ್ದಾರೆ. ಆದರೆ, ಜನಾರ್ದನ ರೆಡ್ಡಿ ಅವರ ಗಣಿಗಾರಿಕೆ ನಿರರ್ಗಳವಾಗಿ ನಡೆಯುತ್ತಿದ್ದಾಗ, ಅವರು ಹೆಲಿಕಾಪ್ಟರ್‌ಗಳು ಮತ್ತು ಖಾಸಗಿ ಜೆಟ್‌ಗಳಲ್ಲಿ ಬಳ್ಳಾರಿ ಮತ್ತು ಬೆಂಗಳೂರು ನಡುವೆ ಸಂಚರಿಸುತ್ತಿದ್ದರು.

ಈ ಸುದ್ದಿ ಓದಿದ್ದೀರಾ?: ಚುನಾವಣೆ 2023 | ಬಿಎಸ್‌ವೈ ಪುತ್ರ ವಿಜಯೇಂದ್ರ ಘೋಷಿತ ಆಸ್ತಿ ಮೌಲ್ಯ ₹126 ಕೋಟಿ

2008 ಮತ್ತು 2010ರ ಅವಧಿಯಲ್ಲಿ ಗಣಿಗಾರಿಕೆಯ ಭರಾಟೆಯಲ್ಲಿ ಅರುಣಾ ಅವರು ಹೆಚ್ಚಿನ ಭೂಮಿಯನ್ನು ಖರೀದಿಸಿದ್ದಾರೆ. ಅವರು ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ 93 ಕೃಷಿ ಆಸ್ತಿ ಹೊಂದಿದ್ದಾರೆ. ಅಲ್ಲದೆ, 2021 ಮತ್ತು 2022ರಲ್ಲಿ ಬಳ್ಳಾರಿ ನಗರದಲ್ಲಿ ಕೆಲವು ನಿವೇಶನಗಳನ್ನು ಖರೀದಿಸಿದ್ದಾರೆ.

ಅರುಣಾ ಅವರು ಎಲ್‌ಐಸಿಯಿಂದ ಸಂಭಾವನೆ, ಬಡ್ಡಿ, ಬಾಡಿಗೆ ಮತ್ತು ಪಿಂಚಣಿಗಳು ತಮ್ಮ ಆದಾಯ ಮೂಲಗಳೆಂದು ಅಫಿಡೆವಿಟ್‌ನಲ್ಲಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...