ಚುನಾವಣೆ ನಡೆಸಲು ಆಯೋಗದ ಖರ್ಚು ಎಷ್ಟು?; ಅದನ್ನು ಯಾರು ಭರಿಸುತ್ತಾರೆ? ಇಲ್ಲಿದೆ ಮಾಹಿತಿ

Date:

ರಾಜ್ಯದ ಒಟ್ಟು 224 ಕ್ಷೇತ್ರಗಳ ಸುಮಾರು 58.,000 ಮತಗಟ್ಟೆಗಳಲ್ಲಿ ಇಂದು (ಮೇ 10) ಮತದಾನ ನಡೆಯುತ್ತಿದೆ. ಲಕ್ಷಾಂತರ ಮಂದಿ ಸಿಬ್ಬಂದಿಗಳು ಚುಣಾವಣಾ ಕರ್ತವ್ಯದಲ್ಲಿದ್ದಾರೆ. ಈ ನಡುವೆ, ಚುನಾವಣಾ ಕರ್ತವ್ಯದ ಭಾಗವಾಗಿರುವ ಆಶಾ ಕಾರ್ಯಕರ್ತೆಯರು ತಮಗೆ ಗೌರವ ಧನ ನೀಡಿಲ್ಲವೆಂದು ಆರೋಪಿಸಿದ್ದಾರೆ. ಅವರಿಗೂ ಗೌರವ ಧನ ನೀಡುವ ಬಗ್ಗೆ ಚುನಾವಣಾ ಆಯೋಗ ಭರವಸೆ ನೀಡಿದೆ. ಇದೆಲ್ಲದರ ನಡುವೆ, ಚುನಾವಣೆ ನಡೆಸಲು ಆಯೋಗಕ್ಕೆ ಎಷ್ಟು ಖರ್ಚಾಗಬಹುದು ಎಂಬ ಪ್ರಶ್ನೆ ಹಲವರಲ್ಲಿ ಮೂಡಿರುತ್ತದೆ. ಚುನಾವಣಾ ವೆಚ್ಚದ ಮಾಹಿತಿ ಇಲ್ಲಿದೆ.

ಚುನಾವಣಾ ಆಯೋಗವು ಮತದಾರ ಗುರುತಿನ ಚೀಟಿ ಮುದ್ರಣ, ಮತಪತ್ರಗಳ ಮುದ್ರಣ, ಮತದಾನ ಜಾಗೃತಿ ಅಭಿಯಾನ, ಮತಗಟ್ಟೆ ಸಿಬ್ಬಂದಿ ಗೌರವಧನ, ಚುನಾವಣಾ ವೀಕ್ಷಕರ ಸಂಭಾವನೆ, ಚುನಾವಣಾ ಸಿಬ್ಬಂದಿಗಳ ಪ್ರಯಾಣಕ್ಕೆ ಕಾರು, ಬಸ್ಸುಗಳ ಬಾಡಿಗೆ ಹಾಗೂ ಚುನಾವಣಾ ಸಿಬ್ಬಂದಿಗೆ ಊಟದ ವ್ಯವಸ್ಥೆಗಾಗಿ ಹಣವನ್ನು ಖರ್ಚು ಮಾಡುತ್ತದೆ.

2023ರ ವಿಧಾನಸಭಾ ಚುನಾವಣೆಗೆ ಎಷ್ಟು ವೆಚ್ಚವಾಗಿದೆ ಎಂದು ಚುನಾವಣಾ ಆಯೋಗ ಇನ್ನೂ ಅಂಕಿಅಂಶ ಬಹಿರಂಗ ಪಡಿಸಿಲ್ಲ. ಮತ ಎಣಿಕೆಯ ಬಳಿಕ ಮಾಹಿತಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ನಡುವೆ, ಫೆಬ್ರವರಿಯಲ್ಲಿ ಆಯೋಗವು ಸರ್ಕಾರಕ್ಕೆ ಸಲ್ಲಿಸಿದ್ದ ಅಂದಾಜಿನ ಪ್ರಕಾರ, ಈ ಬಾರಿ 511 ಕೋಟಿ ರೂ. ಚುನಾವಣಾ ವೆಚ್ಚವಾಗಲಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2013ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಯೋಗವು 160 ಕೋಟಿ ರೂ ಖರ್ಚು ಮಾಡಿತ್ತು. ಆಗ ಒಂದು ಕ್ಷೇತ್ರಕ್ಕೆ ಸರಾಸರಿ 65 ಲಕ್ಷ ರೂ. ವೆಚ್ಚವಾಗಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ 394 ಕೋಟಿ ರೂಗಳನ್ನು ಆಯೋಗ ಖರ್ಚು ಮಾಡಿತ್ತು. ಆ ಚುನಾವಣೆಯಲ್ಲಿ ಪ್ರತಿ ಕ್ಷೇತ್ರಕ್ಕೆ ಸರಾಸರಿ 1.75 ಕೋಟಿ ರೂ. ವೆಚ್ಚವಾಗಿತ್ತು. ಈ ವರ್ಷ, ಪ್ರತಿ ಕ್ಷೇತ್ರಕ್ಕೆ ಸರಾಸರಿ 2.2 ಕೋಟಿ ರೂ. ವೆಚ್ಚವಾಹಬಹುದು ಎಂದು ಅಂದಾಜಿಸಲಾಗಿದೆ.

ಚುನಾವಣಾ ಆಯೋಗವು ಖರ್ಚು ಮಾಡುವ ಹಣವನ್ನು ಆಯಾ ರಾಜ್ಯ ಸರ್ಕಾರಗಳೇ ಭರಿಸುತ್ತವೆ. ರಾಜ್ಯದಲ್ಲಿ ಆಯೋಗದ ಚುನಾವಣಾ ವೆಚ್ಚವನ್ನು ಇಲ್ಲಿನ ಸರ್ಕಾರ ಭರಿಸುತ್ತದೆ. ಈ ಬಾರಿಯ ಚುನಾವಣಾ ಖರ್ಚಿಗಾಗಿ ಸರ್ಕಾರ ಡಿಸೆಂಬರ್ ತಿಂಗಳಿನಲ್ಲಿ 300 ಕೋಟಿ ರೂ. ಮೀಸಲಿಟ್ಟಿತ್ತು. ಆದರೆ, ಆಯೋಗವು ಫೆಬ್ರವರಿಯಲ್ಲಿ 511 ಕೋಟಿ ರೂ. ಮೊತ್ತದ ಅಂದಾಜು ಪಟ್ಟಿಯನ್ನು ಸಲ್ಲಿಸಿತ್ತು. ಬಳಿಕ, ಉಳಿದ ಮೊತ್ತವನ್ನೂ ಸರ್ಕಾರ ಬಿಡುಗಡೆ ಮಾಡಿತ್ತು.

ಈ ಸುದ್ದಿ ಓದಿದ್ದೀರಾ?: ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?: ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ; ಆರೋಪ

ಉಳಿದಂತೆ, ಮತಗಟ್ಟೆ, ಚೆಕ್‌ಪೋಸ್ಟ್‌ಗಳು, ಮತ ಎಣಿಕೆ ಕೇಂದ್ರಗಳಲ್ಲಿ ಭದ್ರತೆಗಾಗಿ ಅರೆಸೇನಾ ಪಡೆ, ಪೊಲೀಸರನ್ನು ನಿಯೋಜಿಸಲಾಗುತ್ತಿದೆ. ಈ ವೆಚ್ಚವನ್ನು ಸರ್ಕಾರವೇ ನೇರವಾಗಿ ಭರಿಸುತ್ತದೆ. ಇದು ಚುನಾವಣಾ ಆಯೋಗದ ಖರ್ಚಿನ ವ್ಯಾಪ್ತಿಗೆ ಒಳಪಡುವುದಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...