ಚುನಾವಣಾ ಸಮೀಕ್ಷೆ | ಮುಕ್ತ ಚರ್ಚೆ ನಡೆಸಲು ಬಿ.ಎಲ್‌ ಸಂತೋಷ್‌ಗೆ ‘ಈದಿನ.ಕಾಮ್‌’ ಆಹ್ವಾನ

Date:

ಕರ್ನಾಟಕದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈದಿನ.ಕಾಮ್ Scientific random sampling ಮೂಲಕ ರಾಜ್ಯಾದ್ಯಂತ ನಡೆಸಿದ ಚುನಾವಣಾಪೂರ್ವ ಸಮೀಕ್ಷೆಯ ಫಲಿತಾಂಶವನ್ನು ಈಗಾಗಲೇ ಪ್ರಕಟಿಸಿದೆ.

ಕೃತಕವಾಗಿ ಜನಾಭಿಪ್ರಾಯ ಉತ್ಪಾದಿಸುವ ಕೆಲಸ ನಡೆಯುವಾಗ ಬಲಾಢ್ಯರು, ಪಟ್ಟಭದ್ರ ಹಿತಾಸಕ್ತಿ ಉಳ್ಳವರ ಅನಿಸಿಕೆಗಳೇ ಜನಾಭಿಪ್ರಾಯ ಎಂದು ಬಿಂಬಿತವಾಗುತ್ತವೆ. ಹಾಗಾಗಿ ಜನರ ನಿಜವಾದ ಅಭಿಪ್ರಾಯಗಳನ್ನು ಕ್ರೋಡೀಕರಿಸಿ ಜನರಿಗೇ ತಿಳಿಸುವ ಕೆಲಸ ಮಾಡುವುದು ಮಾಧ್ಯಮದ ಕರ್ತವ್ಯ ಎಂದು ಈದಿನ.ಕಾಮ್ ಬಲವಾಗಿ ನಂಬುತ್ತದೆ.

ಅದೇ ಉದ್ದೇಶದಿಂದ ಈ ಚುನಾವಣಾಪೂರ್ವ ಸಮೀಕ್ಷೆಯನ್ನು ಈದಿನ.ಕಾಮ್‌ ನಡೆಸಿದೆ. ಯಾರು ಸೋಲುತ್ತಾರೆ, ಯಾರು ಗೆಲ್ಲುತ್ತಾರೆ ಎಂಬುದಕ್ಕಿಂತ ಜನರ ಸಮಸ್ಯೆಗಳು, ಯಾವ ಜಾತಿ ಸಮುದಾಯಗಳು/ಆರ್ಥಿಕ ಸ್ತರಗಳವರು ಏನು ಯೋಚಿಸುತ್ತಾರೆ ಎಂಬುದನ್ನು ಪರಿಶೀಲಿಸುವುದಕ್ಕೆ ನಾವು ಒತ್ತು ಕೊಟ್ಟಿದ್ದೆವು. ಹಾಗೆ ನೋಡಿದರೆ ಯಾರು ಮುಖ್ಯಮಂತ್ರಿ ಮುಖ ಎಂಬ ಪ್ರಶ್ನೆಯೇ ನಮ್ಮಲ್ಲಿ ಇರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ನಾವು ಪ್ರಕಟಿಸಿದ ಸರ್ವೇ ಫಲಿತಾಂಶದ ಕುರಿತು ಭಿನ್ನ ಅಭಿಪ್ರಾಯಗಳು, ಟೀಕೆ, ವಿಮರ್ಶೆಗಳು ಹಾಗೂ ಮೆಚ್ಚುಗೆಗಳು ಬಂದಿವೆ. ಸಮೀಕ್ಷೆ ನಡೆಸಿರುವ ವಿಧಾನ ವೈಜ್ಞಾನಿಕವಾಗಿದೆ ಎಂದು ಹಲವರು ಹೇಳಿದ್ದಾರೆ. ಅವನ್ನು ನಾವು ಗೌರವಿಸಿ, ಸ್ವಾಗತಿಸುತ್ತೇವೆ; ಅಗತ್ಯವಿದ್ದರೆ ತಿದ್ದಿಕೊಳ್ಳುತ್ತೇವೆ.

ಇದೆಲ್ಲದರ ನಡುವೆ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ್ದು, ‘ಇದು ಕೃತಕವಾಗಿ ತಯಾರಿಸಲಾದ (Cooked up) ಸಮೀಕ್ಷೆ’ಯೆಂದು ಹೇಳಿದ್ದಾರೆ. ಅವರ ಟೀಕೆ ನಿರಾಧಾರವಾದುದು. ಹಾಗಾಗಿ, ಅವರು ನಮ್ಮ ಸರ್ವೇ ವಿಧಾನ, ಡೇಟಾವನ್ನು ಖುದ್ದಾಗಿ ಪರಿಶೀಲಿಸಲು ನಮ್ಮ ಕಚೇರಿಗೆ ಬರಬೇಕೆಂದೂ, ಈ ಕುರಿತಂತೆ ಮುಕ್ತ, ಪಾರದರ್ಶಕ ಚರ್ಚೆಯನ್ನು ನಡೆಸಬೇಕೆಂದು ಪ್ರೀತಿಯಿಂದ ಆಹ್ವಾನಿಸುತ್ತಿದ್ದೇವೆ.

ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ, ವಿಜ್ಞಾನವಾಗಿ ಬೆಳೆಯುತ್ತಿರುವ ‘ಜನಾಭಿಪ್ರಾಯ ಸಂಗ್ರಹ’ದ (Psephology) ತಿಳಿವಳಿಕೆಯನ್ನು ಎಲ್ಲರೂ ಸೇರಿ ಇನ್ನಷ್ಟು ಬೆಳೆಸೋಣ. ಪೂರ್ವಗ್ರಹಗಳಿಂದ ಮುಕ್ತರಾಗಿ ಮುಕ್ತ ಚರ್ಚೆಯಲ್ಲಿ ಭಾಗಿಯಾಗೋಣ.

ಬಿ.ಎಲ್.ಸಂತೋಷ್ ಅವರ ಆಗಮನವನ್ನು ಎದುರು ನೋಡುತ್ತಿದ್ದೇವೆ…

ಸಂಪಾದಕರು,
ಈದಿನ.ಕಾಮ್ ಪರವಾಗಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...