ಜೆಡಿಎಸ್‌ ಅಭ್ಯರ್ಥಿಗೆ ಆಮಿಷ; ಬಿಜೆಪಿ ಸಚಿವ ಸೋಮಣ್ಣ ವಿರುದ್ಧ ಎಫ್‌ಐಆರ್

Date:

ಚಾಮರಾಜನಗರ ಜೆಡಿಎಸ್‌ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿಗೆ ನಾಮಪತ್ರ ಹಿಂಪಡೆಯುವಂತೆ ಒತ್ತಾಯಿಸಿದ್ದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ಸಚಿವ ವಿ ಸೋಮಣ್ಣ ಮತ್ತು ಇನ್ನಿಬ್ಬರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಚುನಾವಣಾ ಫ್ಲೈಯಿಂಗ್‌ ಸ್ಕ್ಯಾಡ್‌ನ ಮ್ಯಾಜಿಸ್ಟ್ರೇಟ್‌ ಡಾ.ಬಿ.ಆರ್‌.ಜಯಣ್ಣ ನೀಡಿರುವ ದೂರಿನ ಆಧಾರದ ಮೇಲೆ ಚಾಮರಾಜನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅದರಲ್ಲಿ ಸೋಮಣ್ಣ ಅವರಿಗೆ ಸಂಬಂಧಿಸಿದ ವಿವರಗಳನ್ನು ಉಲ್ಲೇಖಿಸಲಾಗಿಲ್ಲ. ಅವರನ್ನು ಅಪರಿಚಿತನೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಸೋಮಣ್ಣ ಅವರದ್ದು ಎನ್ನಲಾದ ಆಡಿಯೋದಲ್ಲಿ ಸುದೀಪ್‌ ಮತ್ತು ನಟರಾಜು ಎಂಬ ಹೆಸರುಗಳೂ ಕೇಳಿಬಂದಿದ್ದು, ‌ಆ ಎರಡು ಹೆಸರುಗಳನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಸೋಮಣ್ಣ ಅವರದ್ದು ಎನ್ನಲಾದ ಆಡಿಯೋ ವೈರಲ್‌ ಆಗಿತ್ತು ಮತ್ತು ಭಾರೀ ಸದ್ದು ಮಾಡಿತ್ತು. ಆ ಆಡಿಯೋ ನಾಮಪತ್ರ ಹಿಂಪಡೆಯುವ ಕೊನೆಯ ದಿನ ಸಂಭಾಷಣೆ ನಡೆಸಿದ್ದು ಎನ್ನಲಾಗಿತ್ತು. ಅದರಲ್ಲಿ, ಸೋಮಣ್ಣ ಅವರು ಮಲ್ಲಿಕಾರ್ಜುನ ಅವರಿಗೆ ನಾಮಪತ್ರ ವಾಪಸ್‌ ಪಡೆಯಲು ಆಮಿಷವೊಡ್ಡುವ ಮಾತುಗಳು ರೆಕಾರ್ಡ್‌ ಆಗಿದ್ದವು.

“ನೀನು ನಾಮಪತ್ರವನ್ನು ವಾಪಸ್‌ ಪಡೆದುಕೊ, ನಿನ್ನನ್ನು ನಾನು ನೋಡಿಕೊಳ್ಳುತ್ತೇನೆ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುತ್ತದೆ. ನಿನಗೆ ಗೂಟದ ಕಾರು ಕೊಡಿಸುತ್ತೇನೆ” ಎಂದು ಸೋಮಣ್ಣ ಹೇಳಿರುವುದು ವೈರಲ್‌ ಆದ ಆಡಿಯೋದಲ್ಲಿ ಕೇಳಿಬಂದಿತ್ತು.

ಸೋಮಣ್ಣ ಅವರೇ ತಮಗೆ ಕರೆ ಮಾಡಿದ್ದಾಗಿ ಮಲ್ಲಿಕಾರ್ಜುನ ಸ್ವಾಮಿ ಅವರೂ ದೃಢಪಡಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...