ಬಿ ಎಲ್ ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿ ಆರೋಪ; ದಿನೇಶ್‌ ಅಮಿನ್‌ಮಟ್ಟು ಸೇರಿ ಐವರ ವಿರುದ್ಧ ಎಫ್‌ಐಆರ್‌

Date:

  • ಬಿಜೆಪಿಯ ಬೆಂಗಳೂರು ಕೇಂದ್ರ ಜಿಲ್ಲೆಯ ಸಂಚಾಲಕ ಯಶವಂತರಿಂದ ದೂರು
  • ದೂರಿ‌ನ ಮೇರೆಗೆ ಮೈಸೂರು ನಗರ ಪೊಲೀಸರಿಂದ ದಿಲೀಪ್ ಗೌಡ ಬಂಧನ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಸುಳ್ಳುಸುದ್ದಿ ಸೃಷ್ಟಿಸಿ ವೈರಲ್ ಮಾಡಿರುವ ಆರೋಪದ ಮೇಲೆ ಹಿರಿಯ ಪತ್ರಕರ್ತ ದಿನೇಶ್‌ ಅಮಿನ್‌ಮಟ್ಟು ಸೇರಿದಂತೆ ಐವರ ಮೇಲೆ ಬಿಜೆಪಿ ದೂರು ದಾಖಲಿಸಿದೆ.

ಭಾರತೀಯ ಜನತಾ ಪಕ್ಷದ ಕಾನೂನು ವಿಭಾಗದ ಬೆಂಗಳೂರು ಕೇಂದ್ರ ಜಿಲ್ಲೆಯ ಸಂಚಾಲಕ ಯಶವಂತ ಎಂ ಅವರು, ದಿನೇಶ್‌ ಅಮಿನ್‌ಮಟ್ಟು, ಬೈರಪ್ಪ ಹರೀಶ್‌ಕುಮಾರ್‌, ಹೇಮಂತ್‌ ಕುಮಾರ್‌, ದಿಲೀಪ್‌ ಗೌಡ ಹಾಗೂ ಬಿಂದು ಗೌಡ ಅವರ ಮೇಲೆ ಬೆಂಗಳೂರು ಉತ್ತರ ವಿಭಾಗದ ಸಿಇಎಸ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  

“ಮೇ 5ರಂದು ದಿನಪತ್ರಿಕೆಯಲ್ಲಿ ಬಂದಿರುವ ಹಾಗೇ ಸುಳ್ಳು ಸುದ್ದಿಯಾದ ‘ನಾವು ಹಿಂದುತ್ವದಲ್ಲಿ ಮುಂದುವರಿಯುತ್ತೇವೆ, ಲಿಂಗಾಯತರ ಅಗತ್ಯವಿಲ್ಲ: ಬಿ ಎಲ್‌ ಸಂತೋಷ್‌’ ಎಂಬ ಒಂದು ವರದಿ ಬಂದಿರುವ ಹಾಗೇ ಸೃಷ್ಟಿಸಿ, ಅದನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್‌ ಮಾಡಿದ್ದು, ಲಿಂಗಾಯತ ಸಮುದಾಯವನ್ನು ಬಿಜೆಪಿ ವಿರುದ್ಧ ಎತ್ತಿ ಕಟ್ಟುವ ಸಲುವಾಗಿ ಸುಳ್ಳು ಸುದ್ದಿ ಸೃಷ್ಟಿಸಿದ್ದಾರೆ” ಎಂದು ಯಶವಂತ ಎಂ ದೂರಿನಲ್ಲಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ನೀಡಿದ ದೂರಿ‌ನ ಮೇರೆಗೆ ದಿಲೀಪ್ ಗೌಡ ಅವರನ್ನು ಈಗಾಗಲೇ ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ.

ಬಿ ಎಲ್‌ ಸಂತೋಷ್

ಬಿ ಎಲ್ ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಗೆ ದಿಲೀಪ್ ಗೌಡ ಬಂಧನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ಪತ್ರಕರ್ತೆ ಹೇಮಾ ವೆಂಕಟ್ ಬಿಜೆಪಿಯ ನಡೆಯನ್ನು ಟೀಕಿಸಿ ಪೋಸ್ಟ್‌ ಹಾಕಿದ್ದು, “ಸುಳ್ಳು ಸುದ್ದಿ ಹರಡುವುದನ್ನು, ಸತ್ಯವನ್ನು ತಿರುಚುವುದನ್ನು ನಾನು ಬೆಂಬಲಿಸಲ್ಲ. ಆದರೆ ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷ, ಮತ್ತವರ ಇಡೀ ಕುಟುಂಬವನ್ನು ಕತ್ತರಿಸಿ ಹಾಕುತ್ತೇನೆ ಎಂದು ಹೇಳಿಕೆ ನೀಡಿರುವ ರೌಡಿ, ಮೇಲಾಗಿ ‘ಸಂಸ್ಕೃತಿ ರಕ್ಷಕರ ಪಕ್ಷ’ ಬಿಜೆಪಿಯ ಅಭ್ಯರ್ಥಿ ಮಣಿಕಂಠ ರಾಥೋಡ್‌ನ ಬಂಧನವಾಗದಿದ್ದರೆ, ಚುನಾವಣಾ ಕಣದಿಂದ ಅನರ್ಹಗೊಳಿಸದಿದ್ದರೆ ಅದು ಈ ನೆಲದ ಕಾನೂನಿಗೆ ಮಾಡುವ ಘೋರ ಅವಮಾನ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿಯಿಂದ ಖರ್ಗೆ ಕುಟುಂಬ ಹತ್ಯೆಗೆ ಸಂಚು, ಮೋದಿ ಮೌನಕ್ಕೆ ಶರಣು : ಸುರ್ಜೇವಾಲ ಗಂಭೀರ ಆರೋಪ

ಮುಂದುವರಿದು, “ಇದೇ ಬೆದರಿಕೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮೇಲೆ ಬಂದಿದ್ದರೆ, ಸರ್ಕಾರ ಸುಮ್ಮನಿರುತ್ತಿತ್ತೇ? ಸುಳ್ಳು ಸುದ್ದಿ ಹರಡಿದವನ ಬಂಧನ ಮಾಡುವಲ್ಲಿ ಪೊಲೀಸರಿಗೆ ಇರುವ ಅದೇ ಬದ್ಧತೆ, ಕೊಲೆ ಬೆದರಿಕೆ ಹಾಕಿದವನನ್ನು ಬಂಧಿಸುವಲ್ಲಿಯೂ ಇರಬೇಕಲ್ಲ? ಬೆಂಗಳೂರಿನ ಆರ್ ಆರ್ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ತನ್ನ ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರ ಮೇಲೆ ನಡೆಸುತ್ತಿರುವ ದಾಳಿ ನೋಡಿಯೂ ಸುಮ್ಮನಿರುವ ಚುನಾವಣಾ ಆಯೋಗದ ಅಧಿಕಾರಿಗಳು ಯಾವ ಸಂದೇಶ ರವಾನಿಸುತ್ತಿದ್ದಾರೆ? ನಿನ್ನೆ ರಾತ್ರಿ ಪುಂಡನೊಬ್ಬ ಕೆಲವೇ ಬೆಂಬಲಿಗರ ಜೊತೆಗಿದ್ದ ಕುಸುಮಾ ಅವರನ್ನು ನಡು ರಸ್ತೆಯಲ್ಲಿ ತಳ್ಳಿರುವ ದೃಶ್ಯ ಹರಿದಾಡುತ್ತಿದೆ. ಮತದಾನ ಮುಗಿಯುವ ಮುನ್ನ ಅಭ್ಯರ್ಥಿಗಳ ಕೊಲೆ ನಡೆದರೂ ಅಚ್ಚರಿಯಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...