ಗದಗ | ಬಿಜೆಪಿ ಸಮಾವೇಶದಲ್ಲಿ ನಷ್ಟ ಅನುಭವಿಸಿದ್ದ ವ್ಯಾಪಾರಿಗೆ ₹35,000 ಪರಿಹಾರ

Date:

ಗದಗ ನಗರದಲ್ಲಿ ಶುಕ್ರವಾರ ನಡೆದ ಬಿಜೆಪಿ ಪ್ರಚಾರ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಜನರು ಯುವ ವ್ಯಾಪಾರಿಯ ಬಳಿ ನುಗ್ಗಿದ ಬಿಜೆಪಿ ಕಾರ್ಯಕರ್ತರು ನೀರು ಮತ್ತು ತಂಪು ಪಾನೀಯಾದ ಕಸಿದುಕೊಂಡಿದ್ದರು. ಪರಿಣಾಮ ವ್ಯಾಪಾರಿ ಅಪಾರ ನಷ್ಟ ಅನುಭವಿಸಿ, ಬಿಕ್ಕಿ-ಬಿಕ್ಕಿ ಅತ್ತಿದ್ದರು. ನಷ್ಟ ಅನುಭವಿಸಿದ ವ್ಯಾಪಾರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ 35 ಸಾವಿರ ರೂಪಾಯಿ ಪರಿಹಾರವಾಗಿ ನೀಡಿದ್ದಾರೆ.

ಗದಗದಲ್ಲಿ ಬಿಜೆಪಿ ಪರವಾಗಿ ಪ್ರಚಾರ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದರು. ಬಿಜೆಪಿ ಸಮಾವೇಶಕ್ಕೆ ಸಾವಿರಾರು ಜನರನ್ನು ಅಕ್ಕಪಕ್ಕದ ಊರುಗಳಿಂದ ಕರೆಸಲಾಗಿತ್ತು. ಬೇಸಿಗೆಯ ತಾಪಮಾನ ಹೆಚ್ಚಿದ್ದರೂ ಬಂದವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿರಲಿಲ್ಲ. ನೆರೆದಿದ್ದವರೂ ಬಾಯಾರಿಕೆಯಿಂದ ಹನಿ ನೀರಿಗಾಗಿ ಹಾತೊರೆಯುತ್ತಿದ್ದರು.

ಈ ವೇಳೆ, ಸಮೀರ್ ಎಂಬ ವ್ಯಾಪಾರಿ ತಂಪು ಪಾನೀಯಗಳನ್ನು ಮಾರಾಟ ಮಾಡಲೆಂದು ಸಮಾವೇಶದ ಸ್ಥಳಕ್ಕೆ ತನ್ನ ವಾಹನದಲ್ಲಿ ಆಗಮಿಸಿದ್ದರು. ಇದನ್ನು ಗಮನಿಸಿದ ಕೆಲ ಬಿಜೆಪಿ ಕಾರ್ಯಕರ್ತರು ಆತನ ಬಳಿಯಿದ್ದ ತಂಪು ಪಾನೀಯಗಳನ್ನು ಪಡೆದುಕೊಳ್ಳಲು ಮುಂದೆ ಧಾವಿಸಿದರು. ಇದನ್ನು ಕಂಡ ಜನ ಬಿಜೆಪಿ ಕಾರ್ಯಕರ್ತರು ತಮಗಾಗಿ ತಂಪು ಪಾನೀಯ ತಂದಿದ್ದಾರೆ ಎಂದು ಭಾವಿಸಿ, ವಾಹನದ ಮೇಲೇರಿ ಗಾಡಿಯಲ್ಲಿದ್ದ ಎಲ್ಲ ತಂಪು ಪಾನೀಯಗಳನ್ನು ಕೈಗೆ ಸಿಕ್ಕಷ್ಟು ಬಾಚಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: 2002ರ ಗುಜರಾತ್ ಗಲಭೆ ಆರೋಪಿಗಳೇಕೆ ಸರದಿಯಂತೆ ನ್ಯಾಯಾಲಯದಿಂದ ಬಿಡುಗಡೆಯಾಗುತ್ತಿದ್ದಾರೆ?

ನಷ್ಟ ಅನುಭವಿಸಿದ ಸಮೀರ್ ಕಣ್ಣೀರು ಹಾಕಿದ್ದರು. ಆ ದೃಶ್ಯವುಳ್ಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ನೆಟ್ಟಿಗರು ಬಿಜೆಪಿವ ವಿರುದ್ಧ ಕಿಡಿಕಾರಿದ್ದರು. ಆತನಿಗೆ ಕಾಂಗ್ರೆಸ್‌ 20 ಸಾವಿರ ರೂ. ನೀಡಿತ್ತು.

ಈ ಬಳಿಕ, ಸಂಸದ ಪ್ರತಾಪ್ ಸಿಂಹ ಭಾನುವಾರ ಸಮೀರ್‌ಗೆ ಕರೆ ಮಾಡಿ, 35 ಸಾವಿರ ರೂ.ಗಳನ್ನು ವರ್ಗಾವಣೆ ಮಾಡಿದ್ದಾರೆ. ಸಮೀರ್‌ಗೆ ಹಣ ನೀಡಿರುವುದಾಗಿ ಪ್ರತಾಪ್‌ ಸಿಂಹ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...