ಹಾಸನ | ಬಿಜೆಪಿ ಅಭ್ಯರ್ಥಿಯ ಬೃಹತ್‌ ರ‍್ಯಾಲಿ; ಖರ್ಚಿನ ಲೆಕ್ಕವಿದೆಯೇ ಎನ್ನುತ್ತಿದ್ದಾರೆ ಸ್ಥಳೀಯರು

Date:

  • ಬೃಹತ್ ರ‍್ಯಾಲಿಯಲ್ಲಿ ಐವತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗಿ
  • ಚೆಕ್‌ಪೋಸ್ಟ್‌ಗಳಲ್ಲಿ ನಡೆಯುತ್ತಿರುವ ವಾಹನಗಳ ತಪಾಸಣೆ

ವಿಧಾನಸಭಾ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದ್ದು, ನೀತಿ ಸಂಹಿತೆಯೂ ಜಾರಿಯಲ್ಲಿದೆ. ಈ ವೇಳೆ ಯಾವ ಅಕ್ರಮವೂ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹಾಸನ ಜಿಲ್ಲೆಯ ಹಲವೆಡೆ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಚೆಕ್‌ಪೋಸ್ಟ್‌ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ.

ಈ ನಡುವೆ, ಹಾಸನ ನಗರದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ, ಶಾಸಕ ಪ್ರೀತಂ ಗೌಡ ಬೃಹತ್ ರ‍್ಯಾಲಿ ನಡೆಸಿದ್ದಾರೆ. ರ‍್ಯಾಲಿಗೆ ಸರಿಸುಮಾರು ಐವತ್ತು ಸಾವಿರಕ್ಕೂ ಹೆಚ್ಚು ಜನ ಸೇರಿರುವುದಾಗಿ ಮಾತುಗಳು ಕೇಳಿಬರುತ್ತಿವೆ. ಐವತ್ತು ಸಾವಿರಕ್ಕೂ ಅಧಿಕ ಮಂದಿ ಸುಮ್ಮನೇ ಬಂದಿಲ್ಲ. ಒಬ್ಬರಿಗೆ ₹500ರಿಂದ ₹1000 ಹಣ ಕೊಟ್ಟು ಕರೆದುಕೊಂಡು ಬಂದಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ.

“ಐವತ್ತು ಸಾವಿರಕ್ಕೂ ಹೆಚ್ಚಿನ ಜನಕ್ಕೆ ಹಂಚುವ ಹಣ ಎಲ್ಲಿಂದ ಬಂತು..? ಈಗ ಇರುವ ಚೆಕ್ ಪೋಸ್ಟ್‌ಗಳನ್ನು ದಾಟಿಕೊಂಡು ಅಕ್ರಮ ಹಣ ಕ್ಷೇತ್ರಕ್ಕೆ ಬಂದಿತೇ..? ಅಷ್ಟೂ ಮಂದಿಗೂ ಹಂಚಿರುವ ಟೋಪಿಗಳು ಎಲ್ಲಿಂದ ಬಂದವು” ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಸರು ಹೇಳಲಿಚ್ಛಿಸದ ಹಾಸನ ನಿವಾಸಿಯೊಬ್ಬರು ಈ ದಿನ.ಕಾಮ್‌ ಜೊತೆ ಮಾತನಾಡಿದ್ದು, “ಟೋಪಿಗಳನ್ನು ಕ್ಷಣದಲ್ಲೇ ತರಿಸಿದ್ದಾರೆ ಅಂದರೆ ಸಹಸ್ರಾರು ಟೋಪಿಗಳನ್ನು ಹೇಗೆ ತರಿಸಲಾಯಿತು? ಅಥವಾ ಈ ಮೊದಲೇ ಎಲ್ಲಾದರೂ ಸ್ಟಾಕ್ ಮಾಡಿದ್ದರಾ? ಹಾಗೆ ಮಾಡಿದ್ದರೆ ಯಾಕೆ ಅದನ್ನು ಅಧಿಕಾರಿಗಳು ಪತ್ತೆ ಹಚ್ಚಿಲ್ಲ?” ಎಂದು ಪ್ರಶ್ನಿಸಿದ್ದಾರೆ.

“ಹಳೆಬೀಡು, ಬೇಲೂರುಗಳಲ್ಲಿ ಇದೇ ಪಕ್ಷದ ಅಭ್ಯರ್ಥಿಯದ್ದು ಎಂದು ತಿಳಿದುಬಂದಿದ್ದ ವಸ್ತುಗಳನ್ನು ಗೊಡೌನ್‌ಗಳಲ್ಲಿ ವಶ ಪಡಿಸಿಕೊಳ್ಳಲಾಗಿತ್ತು. ಪುನಃ ಇಲ್ಲಿ ಹೇಗೆ ಬಂದವು? ಟೋಪಿಗಳನ್ನು ಕೊಂಡು ತಂದ ಬಿಲ್ ತೋರಿಸಬಲ್ಲರೇ? ಊಟ ಕೂಡ ಪ್ಯಾಕೆಟ್ ಮೂಲಕ ಹಂಚುವುದು ಎಲ್ಲೆಡೆ ಕಾಣುತ್ತಿತ್ತು. ಅದರ ಖರ್ಚಿನ ವಿವರವೇನು?” ಎಂದು ಅವರು ಕೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್ ಎರಡನೇ ಪಟ್ಟಿ ಬಿಡುಗಡೆ : ಹಾಸನಕ್ಕೆ ಅಭ್ಯರ್ಥಿಯಾದ ಸ್ವರೂಪ್

ಒಟ್ಟಾರೆಯಾಗಿ ಕೋಟಿಗಳ ಲೆಕ್ಕದಲ್ಲಿ ಹಣ ಖರ್ಚು ಮಾಡಲಾಗಿದೆ. ಈ ಚುನಾವಣಾ ನೀತಿಸಂಹಿತೆ ಕಾಲದಲ್ಲಿ ಹೀಗೆ ಲೆಕ್ಕವಿಲ್ಲದೇ ಕಾರ್ಯಕ್ರಮ ನಡೆಸಲು ಸಾಧ್ಯವೇ? ಎಂಬುದು ಜನಸಾಮಾನ್ಯರ ಪ್ರಶ್ನೆಯಾಗಿದೆ.

“ಹೇಗಾದರೂ ರಾಜಕೀಯ ಪ್ರಚಾರ ಮಾಡಿಕೊಳ್ಳಲಿ. ಆದರೆ, ಕೋಟಿಗಟ್ಟಲೆ ಹಣದ ಲೆಕ್ಕ ಪತ್ರಗಳು ತಿಳಿಯದಿದ್ದಲ್ಲಿ ಚುನಾವಣೆ ಹಿಡಿತಕ್ಕೆ ಸಿಗದಂತಾಗುತ್ತದೆ” ಎಂಬುದು ಹಾಸನ ನಗರದ ಜನಸಾಮಾನ್ಯರ ಅಭಿಪ್ರಾಯವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ...

ರಾಯಚೂರಲ್ಲಿ 2ನೇ ತರಗತಿ ವಿದ್ಯಾರ್ಥಿನಿ & ಹಾಸನದಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ...

ಈಗ ಸ್ವತಂತ್ರ, ನ್ಯಾಯೋಚಿತ ಚುನಾವಣೆ ನಡೆಯುತ್ತಿಲ್ಲ: ಶಿವಸುಂದರ್‌ ಆತಂಕ

"ಚುನಾವಣಾತ್ಮಕ ಸರ್ವಾಧಿಕಾರಿ ದೇಶವಾಗಿ ಭಾರತ ಹೊಮ್ಮಿದೆ, ಚುನಾವಣೆ ನಡೆಯುತ್ತಿರುವ ಕಾರಣಕ್ಕೆ ಇದನ್ನು...

ಹಾಸನ ಲೋಕಸಭಾ ಕ್ಷೇತ್ರ ಪರಿಚಯ

ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ...