ಹಾಸನ | ಎನ್.ಆರ್ ಸಂತೋಷ್‌ ಬೆಂಬಲಿಗರ ಆಕ್ರೋಶ; ಬಿಜೆಪಿ ಬಾವುಟ, ಫ್ಲೆಕ್ಸ್‌ಗಳಿಗೆ ಬೆಂಕಿ

Date:

  • ಬಿಜೆಪಿ ಅಭ್ಯರ್ಥಿ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ
  • ʼಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆʼ

ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಬೆಂಬಲಿಗರು ಆಕ್ರೋಶಗೊಂಡಿದ್ದು, ಬಿಜೆಪಿ ಬಾವುಟಗಳು, ಫ್ಲೆಕ್ಸ್‌ಗಳನ್ನು ಸುಟ್ಟು ಹಾಕಿದ್ದಾರೆ. 

ಹಾಸನ ಜಿಲ್ಲೆ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಎನ್.ಆರ್ ಸಂತೋಷ್‌ ಬೆಂಬಲಿಗರು ಬಿಜೆಪಿ ಫ್ಲೆಕ್ಸ್‌ಗಳನ್ನು ಹರಿದು ಹಾಕಿದ್ದು, ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ ಟಿಕೆಟ್ ನೀಡಿರುವ ಜಿ.ವಿ ಬಸವರಾಜು 5 ಸಾವಿರ ಮತ ಪಡೆಯಲು ಸಾಧ್ಯವಿಲ್ಲ. ಇಡೀ ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಪಕ್ಷವನ್ನು ಹಾಳು ಮಾಡಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅರಸೀಕೆರೆ | ಕೈ ತಪ್ಪಿದ ಬಿಜೆಪಿ ಟಿಕೆಟ್‌; ಜೆಡಿಎಸ್‌ನತ್ತ ಎನ್‌ ಆರ್‌ ಸಂತೋಷ್‌

“ನಾನು ಎನ್.ಆರ್ ಸಂತೋಷ್ ಗೆಲ್ಲಲಿ ಎಂದು ಗಡ್ಡ ಬಿಟ್ಟಿದ್ದೆ. ಈಗ ಅವರಿಗೆ ಟಿಕೆಟ್ ನೀಡಿಲ್ಲ. ಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆ” ಎಂದು ಸಂತೋಷ್ ಬೆಂಬಲಿಗ ರಂಗನಾಥ್ ಅಸಮಾಧಾನ ವ್ಯಕ್ತಪಡಿಸಿದರು.

ಈ ಮಧ್ಯೆ ಎನ್‌.ಆರ್‌. ಸಂತೋಷ್‌ ಬೆಂಬಲಿಗರ ಜೊತೆ ಸಭೆ ನಡೆಸಿದ್ದು, “ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ. ಜೆಡಿಎಸ್‌ನಿಂದ ಬಿ.ಫಾರಂ ದೊರೆತಲ್ಲಿ ಜೆಡಿಎಸ್‌ನಿಂದ ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ...

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ...

ರಾಯಚೂರಲ್ಲಿ 2ನೇ ತರಗತಿ ವಿದ್ಯಾರ್ಥಿನಿ & ಹಾಸನದಲ್ಲಿ ಅಪ್ರಾಪ್ತ ಬುದ್ಧಿಮಾಂದ್ಯೆ ಮೇಲೆ ಅತ್ಯಾಚಾರ

ರಾಜ್ಯದಲ್ಲಿ ಎರಡನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಹೇಯ ಕೃತ್ಯ...