ಹಾಸನ ಲೋಕಸಭಾ ಕ್ಷೇತ್ರ ಪರಿಚಯ

Date:

ಜೆಡಿಎಸ್‌ನ ಭದ್ರಕೋಟೆ ಎಂದೇ ಗುರುತಿಸಿಕೊಂಡಿರುವ ಹಾಸನ ಲೋಕಸಭಾ ಕ್ಷೇತ್ರವು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಕುಟುಂಬ ಪ್ರತಿನಿಧಿಸುತ್ತಾ ಬಂದಿರುವ ಕಾರಣಕ್ಕೆ ಸದಾ ಗಮನ ಸೆಳೆಯುತ್ತದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರ ಸೇರಿದಂತೆ ಹಾಸನ ಜಿಲ್ಲೆಯ ಶ್ರವಣ ಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು, ಸಕಲೇಶಪುರ ವಿಧಾನಸಭಾ ಕ್ಷೇತ್ರಗಳನ್ನು ಹಾಸನ ಲೋಕಸಭಾವು ಒಳಗೊಂಡಿದೆ.

ಹಾಸನ ಕ್ಷೇತ್ರದಲ್ಲಿ ಒಟ್ಟು 16,52,999 ಮತದಾರರು ಇದ್ದಾರೆ. 2019ರಲ್ಲಿ ಒಟ್ಟು 12,77,552 ಮತದಾರರು ಇದ್ದರು. 2019ರಲ್ಲಿ ಕ್ಷೇತ್ರದಲ್ಲಿ ಶೇ. 77.29%ರಷ್ಟು ಮತದಾನ ನಡೆದಿತ್ತು. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು 1991 ರಿಂದ 1994, 1998 ರಿಂದ 1999 ಮತ್ತು ಮತ್ತೆ 2004 ಮತ್ತು 2014ರವರೆಗೆ ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಗೆಲುವು ಸಾಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2019ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊಮ್ಮಗನಿಗೆ ಕ್ಷೇತ್ರವನ್ನು ಬಿಟ್ಟುಕೊಟ್ಟು ’ಕಾಂಗ್ರೆಸ್‌- ಜೆಡಿಎಸ್‌’ ಮೈತ್ರಿಯ ಅಭ್ಯರ್ಥಿಯಾಗಿ ತುಮಕೂರಿನಿಂದ ಸ್ಪರ್ಧಿಸಿದ್ದ ದೇವೇಗೌಡರು ಸೋಲು ಕಂಡಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಎ.ಮಂಜು ಅವರನ್ನು ಪ್ರಬಲವಾಗಿ ಎದುರಿಸಿದ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು 1,00,462 ಅಂತರದಲ್ಲಿ ಗೆಲುವು ಸಾಧಿಸಿದ್ದರು. ಎ.ಮಂಜು ಅವರು 5,35,282 ಮತಗಳನ್ನು ಗಳಿಸಿದ್ದರು.

1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜಿ.ಪುಟ್ಟಸ್ವಾಮಿ ಗೌಡ ಅವರು ಗೆಲುವು ಸಾಧಿಸಿದ್ದರು. ಮಾಜಿ ಸಚಿವರೂ ಆದ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್‌ ಅವರು ಕಾಂಗ್ರೆಸ್‌ನಿಂದ ಈ ಬಾರಿ ಕಣಕ್ಕೆ ಇಳಿಯುತ್ತಿದ್ದಾರೆ.

1957ರಿಂದ ಈವರೆಗಿನ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್‌.ಸಿದ್ದನಂಜಪ್ಪ, ಎನ್‌.ಶಿವಪ್ಪ, ಆರ್‌.ಎಚ್‌.ಲಕ್ಷ್ಮಣ್‌, ಎಸ್.ನಂಜೇಶ ಗೌಡ, ಎಚ್.ಎನ್.ನಂಜೇಗೌಡ, ಎಚ್.ಸಿ.ಶ್ರೀಕಂಠಯ್ಯ, ಎಚ್.ಡಿ.ದೇವೇಗೌಡ, ರುದ್ರೇಶ್‌ಗೌಡ, ಜಿ.ಪುಟ್ಟಸ್ವಾಮಿಗೌಡ, ಪ್ರಜ್ವಲ್ ರೇವಣ್ಣ ಅವರು ಈವರೆಗೆ ಹಾಸನ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ 31 ವರ್ಷದ ಶ್ರೇಯಸ್ ಪಟೇಲ್‌ ಅವರು, ರೇವಣ್ಣ ಅವರಿಗೆ ನಡುಕ ಹುಟ್ಟಿಸಿದ್ದರು. ಕೇವಲ 3152 ಮತಗಳ ಅಂತರದಲ್ಲಿ ಸೋತಿದ್ದ ಶ್ರೇಯಸ್ ಅವರಿಗೆ ಕಾಂಗ್ರೆಸ್‌ ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಸಿದೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣನವರಿಗೆ ಟಿಕೆಟ್ ಸಿಕ್ಕಲ್ಲಿ ಈ ಸಲದ ಹಾಸನ ಚುನಾವಣೆ ರೋಚಕವಾಗುವುದಂತೂ ಖಚಿತ.

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗರೇ ಮೆಜಾರಿಟಿ. ನಂತರದಲ್ಲಿ ಪರಿಶಿಷ್ಟ ಜಾತಿಗಳು, ಲಿಂಗಾಯತರು, ಕುರುಬರು, ಮುಸ್ಲಿಮರು ಹಾಗೂ ಇತರ ಹಿಂದುಳಿದ ಜಾತಿಯವರು ಇದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...