ಹಾಸನ | ರಾಜಕಾರಣದಲ್ಲಿ ಮೌಲ್ಯವಿಲ್ಲ, ವ್ಯಾಪಾರವೇ ಎಲ್ಲ: ಎ.ಟಿ ರಾಮಸ್ವಾಮಿ

Date:

  • ನಾನು ಟಿಕೆಟ್ ಕೇಳಿರಲಿಲ್ಲ, ಕೈ ತಪ್ಪಿದೆ ಎನ್ನುವುದು ಅಪಪ್ರಚಾರ
  • ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತಿದೆ, ಯೋಗ್ಯರಿಗಿದು ಕಾಲವಲ್ಲ

ಹಾಸನ ವಿಧಾನಸಭೆ ಚುನಾವಣೆಯಲ್ಲಿ ನಾನು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿರಲಿಲ್ಲ. ನನಗೆ ಟಿಕೆಟ್ ಕೈತಪ್ಪಿದೆ ಎಂಬ ಅಪಪ್ರಚಾರಕ್ಕೆ ಯಾರೂ ಕಿವಿಗೊಡಬೇಡಿ ಎಂದು ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.

ಹಾಸನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ನಾನು ಬಿಜೆಪಿ ಸೇರಿದ್ದು ಯಾವುದೇ ಅಧಿಕಾರದ ಆಸೆಗಾಗಿ ಅಲ್ಲವೆಂದು ಈಗಾಗಲೇ ಎಲ್ಲೆಡೆ ಹೇಳಿದ್ದೇನೆ. ನಾನು ಟಿಕೆಟ್ ಅಪೇಕ್ಷಿತ ಅಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ವರಿಷ್ಠರೂ ಕೂಡ ಬಹಳ ಒತ್ತಡ ಹಾಕಿ ಅಭ್ಯರ್ಥಿ ಆಗಲು ಹೇಳಿದ್ದರು. ನಾನು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವುದಿಲ್ಲವೆಂದು ಅವರಿಗೆ ಹೇಳಿದ್ದೆ” ಎಂದಿದ್ದಾರೆ.

“ನಾನು ಮಾತಿನಂತೆ ನಡೆದುಕೊಂಡಿದ್ದೇನೆ. ರಾಮಸ್ವಾಮಿ ಅವರು ಬಿಜೆಪಿಗೆ ಹೋದರೂ ಟಿಕೆಟ್ ಸಿಗಲಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ಸತ್ಯಕ್ಕೆ ದೂರವಾದ ಮಾತು. ನಾನು ಆಡಿದ ಮಾತಿನಂತೆ ನಡೆದುಕೊಂಡಿದ್ದೇನೆ. ನನ್ನ ನಡೆಯಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮಿಸಿ” ಎಂದು ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ರಾಜಕಾರಣದಲ್ಲಿ ಮೌಲ್ಯ ಇಲ್ಲದಂತಾಗಿದೆ. ರಾಜಕೀಯ ಈಗ ವ್ಯಾಪಾರ ಆಗಿದೆ. ಕೆಲವರು 50 ಕೋಟಿ ರೂಪಾಯಿವರೆಗೂ ಬಂಡವಾಳ ಹೂಡಲು ಹೊರಟಿದ್ದಾರೆ. ಬಂಡವಾಳ ಹೂಡಿದ ಮೇಲೆ ಅದನ್ನು ಹಿಂಪಡೆಯಬೇಕಾಗುತ್ತದೆ. ಹಾಗಿದ್ದಲ್ಲಿ ಒಳ್ಳೆಯವರು, ಪ್ರಾಮಾಣಿಕರು, ಯೋಗ್ಯರು ರಾಜಕಾರಣಕ್ಕೆ ಬರಲು ಹೇಗೆ ಸಾಧ್ಯವಾಗುತ್ತದೆ?” ಎಂದು ಪ್ರಶ್ನಿಸಿದರು.

“ಈ ರಾಜಕೀಯ ವ್ಯವಸ್ಥೆ ಬದಲಾಗಬೇಕಿದೆ. ರಾಜಕಾರಣದಲ್ಲಿ ಮೌಲ್ಯ ಉಳಿಸಬೇಕಾಗಿದೆ. ಚುನಾವಣಾ ಆಯೋಗ ಕೂಡ ಕಟ್ಟು ನಿಟ್ಟಿನ ಕ್ರಮ ವಹಿಸಬೇಕಿದೆ. ಇಲ್ಲವಾದರೆ ಪ್ರಜಾಪ್ರಭುತ್ವ ಬಲಾಢ್ಯರ ಪಾಲಾಗುತ್ತದೆ. ಸತ್ಯ, ಧರ್ಮ, ನ್ಯಾಯದ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಅದರೆ, ಆಳವಡಿಸಿಕೊಳ್ಳಲು ಹಿಂದೆ ಸರಿಯುತ್ತಾರೆ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

“ಮಾಜಿ ಸಿಎಂ ಯಡಿಯೂರಪ್ಪ, ಶೋಭ ಕರಂದ್ಲಾಜೆ ಅವರೆಲ್ಲಾ ನನಗೆ ಟಿಕೆಟ್‌ ಕೊಡುತ್ತೇವೆಂದು ಹೇಳಿದ್ದರು. ನನಗೆ ಅಗತ್ಯವಿಲ್ಲ. ʼಕೆಲವರು ನನಗೆ ಕೊಡಿ, ಮಕ್ಕಳಿಗೂ ಕೊಡಿ ಎಂದು ಕೇಳ್ತಾರೆ, ಆದರೆ, ನಿಮ್ಮದು ವಿಶೇಷ ಸ್ವಭಾವʼವೆಂದಿದ್ದರು” ಎಂದರು.

“ನಾನು ರಾಜಕೀಯದಿಂದ ತಟಸ್ಥನಾಗಿರಬೇಕು ಎನ್ನೋ ಭಾವನೆ ಇತ್ತು. ಆದರೆ, ನನ್ನ ಹಿತೈಷಿಗಳು, ಬೆಂಬಲಿಗರ ರಕ್ಷಣೆಗಾಗಿ ಕೆಲಸ ಮಾಡಲು ಒಂದು ಪಕ್ಷ ಬೇಕೆಂದು ಈ ನಿರ್ಧಾರ ಕೈಗೊಂಡಿದ್ದೇನೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅರಕಲಗೂಡು ದಸರಾ ಮಹೋತ್ಸವ: ಬೂಕರ್ ಪ್ರಶಸ್ತಿ ವಿಜೇತ ಅನುವಾದಕಿ ದೀಪಾ ಬಸ್ತಿಗೆ ಆಹ್ವಾನ

ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ಪ್ರತಿವರ್ಷ ನಡೆಯುವ ಅದ್ಧೂರಿ ದಸರಾ ಮಹೋತ್ಸವ...

ಚಿತ್ರದುರ್ಗ | ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ವಿಸಿ: ಜಿಲ್ಲಾಧಿಕಾರಿ ವೆಂಕಟೇಶ್, ಅಧಿಕಾರಿಗಳು ಭಾಗಿ

ಭಾರತ ಚುನಾವಣಾ ಆಯೋಗದ ನಿರ್ದೇಶನದ ಅನ್ವಯ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು ಮತದಾರರ...

ಹಾಸನ l ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಅನುತ್ತೀರ್ಣ; ವಿದ್ಯಾರ್ಥಿ ಆತ್ಮಹತ್ಯೆ 

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...