ಹಾವೇರಿ | ಕಳಪೆ ಗುಣಮಟ್ಟದ ಪೈಪ್‌ ಪೂರೈಕೆ; ಬಡ್ಡಿ ಸಮೇತ ಹಣ ಪಾವತಿಸಲು ಆದೇಶ

Date:

ಗುಣಮಟ್ಟದ ಪಿವಿಸಿ ಪೈಪುಗಳನ್ನು ಪೂರೈಸದೇ ಇರುವ ಹುಬ್ಬಳ್ಳಿಯ ರಾಮದೇವ್ ಪ್ಲಾಸ್ಟಿಕ್ ಅಂಗಡಿ ಮಾಲೀಕರನ್ನು  ಹಾವೇರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ತರಾಟೆಗೆ ತೆದುಕೊಂಡಿದೆ. ಮಾಲೀಕರಿಂದ ಪೈಪ್‌ ಖರೀದಿ ಮಾಡಿದ ರೈತನಿಗೆ ಉತ್ತಮ ಗುಣಮಟ್ಟದ ಪೈಟ್‌ ಪೂರೈಸಬೇಕು. ಇಲ್ಲವಾದರೆ ಅದರ ಮೊತ್ತವನ್ನು ಬಡ್ಡಿ ಸಮೇತ ಪಾವತಿಸಬೇಕು ಎಂದು ಆದೇಶ ನೀಡಿದೆ.

ಹಾನಗಲ್ ತಾಲೂಕು ಮಾಸನಕಟ್ಟಿ ಗ್ರಾಮದ ಮಲ್ಲಿಕಾರ್ಜುನ್ ರಾಯಪ್ಪ ಬಿಜಾಪುರ ಎಂಬುವ ರೈತ, ತಮ್ಮ ಜಮೀನಿನಲ್ಲಿ ಕೊಳವೆಬಾವಿ ಕೊರೆಸುವ ಉದ್ದೇಶದಿಂದ. ಡಿಸೆಂಬರ್ 16, 2022ರಂದು, ಹುಬ್ಬಳ್ಳಿಯ ರಾಮದೇವ್ ಪ್ಲಾಸ್ಟಿಕ್‌ನಲ್ಲಿ 180ಎಂಎಂ ಅಳತೆಯ ಆರು ಕೆಜಿ ಸಾಮರ್ಥ್ಯದ ಐದು ಪಿವಿಸಿ ಪೈಪ್‌ ಮತ್ತು 90ಎಂಎಂ ಸಾಮರ್ಥ್ಯದ 50 ಪೈಪ್‌ಗಳನ್ನು 37,000ಕ್ಕೆ ಖರೀದಿಸಿದ್ದರು.

ಆದರೆ, ರಾಮದೇವ ಪ್ಲಾಸ್ಟಿಕ್ ನವರು 19,470ಕ್ಕೆ ಬಿಲ್ ಮಾತ್ರ ಬಿಲ್‌ ನೀಡಿದ್ದರು. ಕೇಳಿದರೆ, ನಮ್ಮ ಪೈಪ್‌ ಏನೂ ಆಗುವುದಿಲ್ಲ ನಿಮಗೆ ಬಿನ್‌ನ ಅವಶ್ಯಕತೆ ಬೀಳುವುದಿಲ್ಲ ಎಂದಿದ್ದರು. ರೈತ ತಮ್ಮ ಜಮೀನಿನಲ್ಲಿ ಪೈಪ್ ಅಳವಡಿಸಿ ನೀರು ಸರಬರಾಜು ಮಾಡಲು ಕೊಳವೆಬಾವಿ ಚಾಲು ಮಾಡಿದಾಗ ಎಲ್ಲಾ ಪೈಪ್‌ಗಳು ಒಡೆದು ಹೋಗಿದ್ದವು.  ಒಡೆದ ಪೈಪ್ ತೋರಿಸಿ ಉತ್ತಮ ಗುಣಮಟ್ಟದ ಪೈಪ್ ಕೊಡುವಂತೆ‌ ರೈತ ಕೇಳಿದಾಗ, ರಾಮದೇವ್ ಪ್ಲಾಸ್ಟಿಕ್‌ನವರು ಸ್ಪಂದಿಸದ ಕಾರಣ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದಲ್ಲಿ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಬಿ.ಎಸ್. ಈಶ್ವರಪ್ಪ ಮತ್ತು ಮಹಿಳಾ ಸದಸ್ಯರಾದ ಉಮಾದೇವಿ ಎಸ್. ಹಿರೇಮಠ ನೇತೃತ್ವದ ತಂಡ ಗ್ರಾಹಕನಿಗೆ ಉತ್ತಮ ಗುಣಮಟ್ಟದ ಪಿವಿಸಿ ಪೈಪ್‌ಗಳನ್ನು ನೀಡಬೇಕು ಅಥವಾ ಪೈಪ್ ಖರೀದಿಗೆ ಪಾವತಿದ್ದ 37ಸಾವಿರ ಶೇಕಡಾ 6ರಷ್ಟು ಬಡ್ಡಿ ಸಹಿತ 30ದಿನದಲ್ಲಿ ಪಾವತಿಸಲು ಆದೇಶಿಸಿದೆ. ಮಾನಸಿಕ, ದೈಹಿಕ ವ್ಯಥ್ಯೆಗಾಗಿ 3000 ಹಾಗೂ ಪ್ರಕರಣದ ಖರ್ಚು 3000 ಗಳನ್ನು ಪಾವತಿಸಬೇಕು. ತಪ್ಪಿದ್ದಲ್ಲಿ ಪರಿಹಾರದ ಮೊತ್ತಕ್ಕೆ ವಾರ್ಷಿಕ ಶೇಕಡ 9ರಂತೆ ಬಡ್ಡಿ ಸಮೇತ ಪಾವತಿಸಬೇಕು ಎಂದು ಆಯೋಗ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...