ಹೊಳೆನರಸೀಪುರ | ರೇವಣ್ಣ ವಿರುದ್ಧ ಸ್ಪರ್ಧಿಸುತ್ತೇನೆಂದು, ನಾಮಪತ್ರವನ್ನೇ ಸಲ್ಲಿಸದ ಪ್ರೀತಂ ಗೌಡ

Date:

ರಾಜ್ಯ ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ಪಕ್ಷಾಂತರ ಅಬ್ಬರ ಜೋರಾಗಿಯೇ ನಡೆದಿದೆ. ಅಲ್ಲದೆ, ಕೆಲವೆಡೆ ಜಿದ್ದಿನ ಸ್ಪರ್ಧೆಯೂ ನಡೆದಿದೆ. ಅಂತೆಯೇ, ಹೊಳೆನರಸೀಪುರ ಕ್ಷೇತ್ರದಲ್ಲಿ ಮಾಜಿ ಸಚಿವ ರೇವಣ್ಣ ವಿರುದ್ಧ ಕಣಕ್ಕಿಳಿಯುತ್ತೇನೆಂದು ಹಾಸನ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಹೇಳಿದ್ದರು. ಅವರು ಹೊಳೆನರಸೀಪುರದಲ್ಲೂ ನಾಮಪತ್ರ ಸಲ್ಲಿಸುತ್ತಾರೆ ಎನ್ನಲಾಗಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಪ್ರೀತಂ ಗೌಡ ಹೊಳೆನರಸೀಪುರದತ್ತ ಮುಖ ಮಾಡದೇ, ಹಾಸನದಲ್ಲಿಯೇ ಉಳಿದಿದ್ದಾರೆ.

ಕನಕಪುರ ಹಾಗೂ ವರುಣಾ ಕ್ಷೇತ್ರಗಳಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ಆರ್ ಅಶೋಕ್ ಹಾಗೂ ವಿ ಸೋಮಣ್ಣ ಅವರನ್ನು ಕಣಕ್ಕಿಳಿಸುವ ಮೂಲಕ ಪ್ರಯೋಗಿಸಿದ್ದ ಅಸ್ತ್ರವನ್ನೇ ಹೊಳೆನರಸೀಪುರದಲ್ಲಿ ರೇವಣ್ಣ ವಿರುದ್ಧ ಪ್ರಯೋಗಿಸಲು ಬಿಜೆಪಿ ಮುಂದಾಗಿತ್ತು. ಅದರಂತೆ, ಪ್ರೀತಂ ಗೌಡರನ್ನು ಕಣಕ್ಕಿಸುತ್ತದೆ ಎನ್ನಲಾಗಿತ್ತು. ಪ್ರೀತಂ ಗೌಡ ಕೂಡ ಹೊಳೆನರಸೀಪುರದಲ್ಲಿ ನಾಮಪತ್ರ ಸಲ್ಲಿಸುವುದಾಗಿ ಹೇಳಿದ್ದರು. ಆದರೆ, ನಾಮಪತ್ರ ಸಲ್ಲಿಕೆಯ ಸಮಯ ಮುಗಿದಿದ್ದರೂ, ಅವರು ಹೊಳೆನರಸೀಪುರದತ್ತ ಸುಳಿದಿಲ್ಲ.

ಈಗಾಗಲೇ ಬಿಜೆಪಿ ಮೊದಲ ಪಟ್ಟಿಯಲ್ಲಿ ಹೊಳೆನರಸೀಪುರ ಕ್ಷೇತ್ರಕ್ಕೆ ದೇವರಾಜೇಗೌಡ ಅವರ ಹೆಸರನ್ನು ಪ್ರಕಟಿಸಿತ್ತು. ಪ್ರೀತಂ ಗೌಡ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆಂದು ತಿಳಿದುಬಂದ ಬಳಿಕ ಪ್ರತಿಕ್ರಿಯೆ ನೀಡಿದ್ದ ದೇವರಾಜೇಗೌಡ, “ಪ್ರೀತಂಗೌಡ ಸ್ಪರ್ಧೆ ಸಂಬಂಧ ಪಕ್ಷದ ವರಿಷ್ಠರು ಏನು ಹೇಳುತ್ತಾರೋ ಅದರಂತೆ ಕೇಳುವೆ” ಎಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಶ್ರವಣಬೆಳಗೊಳ | ‘ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು’ ಸಿದ್ಧಾಂತಕ್ಕೆ ಬಿಎಸ್‌ಪಿ ಬದ್ಧ: ಕುಂದೂರು ರಾಜು

“ನಾನು ಪ್ರಚಾರದಲ್ಲಿದ್ದಾಗ ಹೈ ಕಮಾಂಡ್ ನನಗೆ ಸೂಚನೆ ಕೊಟ್ಟಿದೆ. ಪ್ರೀತಂಗೌಡ ಅವರು ಹೊಳೆನರಸೀಪುರದಿಂದ ಸ್ಪರ್ಧೆ ಮಾಡುತ್ತಾರೆ ಅನ್ನೋ ಸುದ್ದಿಯನ್ನೂ ಮಾಧ್ಯಮಗಳಲ್ಲಿ ನೋಡಿದೆ. ಹಾಗಾಗಿ ಅವರು ಹೊಳೆನರಸೀಪುರಕ್ಕೆ ಬಂದರೆ ನಾನೇ ಸ್ವಾಗತ ಮಾಡುತ್ತೇನೆ. ಕೌರವರನ್ನು ನಾಶ ಮಾಡಲು ಕೃಷ್ಣ ಬಂದಂತೆ, ಕ್ಷೇತ್ರಕ್ಕೆ ಪ್ರೀತಂ ಗೌಡ ಬಂದರೆ ನಾನು ಸಾರಥಿ ಆಗುತ್ತೇನೆ” ಎಂದು ಹೇಳಿದ್ದರು.

ಸದ್ಯ ಪ್ರೀತಂ ಗೌಡ ಅತ್ತ ಸುಳಿಯದ ಕಾರಣ, ದೇವರಾಜೇಗೌಡ ಅವರೇ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...