ಹುಮನಾಬಾದ್ ಕ್ಷೇತ್ರ | ಕಾಂಗ್ರೆಸ್ ಹಣಿಯಲು ಬಿಜೆಪಿ-ಜೆಡಿಎಸ್ ಕಸರತ್ತು

Date:

ಬೀದರ್ ಜಿಲ್ಲೆಯಲ್ಲಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಕ್ಷೇತ್ರ ಹುಮನಾಬಾದ್. ಪ್ರತಿಬಾರಿ ಚುನಾವಣೆಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಕ್ಷೇತ್ರ, ಈ ಬಾರಿಯ ಚುನಾವಣೆಯಲ್ಲೂ ಸದ್ದು ಮಾಡುತ್ತಿದೆ. ಬಿಜೆಪಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮಧ್ಯೆ ತ್ರಿಕೋನ ಸ್ಪರ್ಧೆ ನಡೆಸುತ್ತಿದ್ದು, ಕೈ ಪಡೆಯನ್ನು ಹಣಿಯಲು ಉಳಿದೆರಡು ಪಕ್ಷಗಳು ಕಸರತ್ತು ನಡೆಸುತ್ತಿವೆ.

ಒಂದು ಉಪಚುನಾವಣೆ ಸೇರಿದಂತೆ ನಾಲ್ಕು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿರುವ ಕಾಂಗ್ರೆಸ್‌ ಶಾಸಕ ರಾಜಶೇಖರ ಪಾಟೀಲ ಐದನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಜಿಲ್ಲೆಯಲ್ಲೇ ಕೆಂಪು ಬಾವುಟ ಹಾರಿಸಿದ ಈ ಏಕೈಕ ಕ್ಷೇತ್ರ, ಬಿಜೆಪಿ, ಜೆಡಿಎಸ್, ಜನತಾದಳ ಸೇರಿದಂತೆ ಎಲ್ಲ ಪಕ್ಷಗಳಿಗೂ ಮನ್ನಣೆ ನೀಡಿತ್ತು. ಕಳೆದ ಎರಡು ದಶಕಗಳಿಂದ ಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ.

ನಿರಂತರವಾಗಿ ಗೆಲುವು ಸಾಧಿಸುತ್ತಿರುವ ಪಾಟೀಲ್‌ ಅವರ ಓಟಕ್ಕೆ ಲಗಾಮು ಹಾಕಲು ಬಿಜೆಪಿ ತಂತ್ರ ರೂಪಿಸಿದೆ. ಹಾಲಿ ಶಾಸಕ ರಾಜಶೇಖರ ಪಾಟೀಲ ಅವರ ಸಹೋದರ ಸಂಬಂಧಿ ಡಾ.ಸಿದ್ದು ಪಾಟೀಲ್ ಅವರನ್ನು ಕೇಸರಿ ಪಡೆ ಕಣಕ್ಕಿಳಿಸಿ, ಅಚ್ಚರಿ ಮೂಡಿಸಿದೆ. ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ ಮಗ ಸಿಎಂ ಫೈಜ್ ಮತ್ತು ಎಎಪಿ ಅಭ್ಯರ್ಥಿ ಬ್ಯಾಂಕ್ ರೆಡ್ಡಿ ಕಣದಲ್ಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಮನಾಬಾದ್ ಕ್ಷೇತ್ರದಲ್ಲಿ ಪಾಟೀಲ್ ಪರಿವಾರದ ಬಸವರಾಜ ಪಾಟೀಲ ಅವರು ಕಟ್ಟಿದ ಕಾಂಗ್ರೆಸ್ ಕೋಟೆ ಭದ್ರವಾಗಿ ಕಾಪಿಟ್ಟುಕೊಳ್ಳುವಲ್ಲಿ ಮಕ್ಕಳು ಯಶಸ್ವಿಯಾಗಿದ್ದಾರೆ.‌ ರಾಜಶೇಖರ ಪಾಟೀಲ ಶಾಸಕರಾಗಿದ್ದರೆ, ಅವರ ಇಬ್ಬರು ಸಹೋದರರು ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಹೀಗಾಗಿ, ಹುಮನಾಬಾದ್ ಕ್ಷೇತ್ರದ ಕಾಂಗ್ರೆಸ್ ಕೋಟೆ ಭೇದಿಸುವುದು ಇತರ ಪಕ್ಷಗಳಿಗೆ ಸುಲಭದ ಮಾತಲ್ಲವೆಂದು ಹೇಳಲಾಗುತ್ತಿದೆ.

ಪಾಟೀಲ್ ಪರಿವಾರದ ಮಧ್ಯೆ ಜಿದ್ದಾಜಿದ್ದಿ

ಹುಮನಾಬಾದ್ ಕ್ಷೇತ್ರದಲ್ಲಿ ನಡೆದ ಒಟ್ಟು ಚುನಾವಣೆಯಲ್ಲಿ ಹೆಚ್ಚು ಬಾರಿ ಅಧಿಕಾರ ದಕ್ಕಿದ್ದು ಪಾಟೀಲ್ ಪರಿವಾರಕ್ಕೆ. ಇದೀಗ ಪಾಟೀಲ್ ಮನೆತನದ ಸಹೋದರ ಸಂಬಂಧಿ ಡಾ.ಸಿದ್ದು ಪಾಟೀಲ್ ಅವರು ಎರಡು ವರ್ಷಗಳ ಹಿಂದೆ ಭಿನ್ನಮತದ ಕಾರಣ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಹೀಗಾಗಿ, ಪಾಟೀಲ್ ಪರಿವಾರವೇ ಎರಡು ಪಕ್ಷಗಳಲ್ಲಿದ್ದು, ಕ್ಷೇತ್ರದಲ್ಲಿ ಹೊಸ ರಾಜಕೀಯ ಪರ್ವ ಶುರುವಾಗಿದೆ.

ಕ್ಷೇತ್ರದಲ್ಲಿ 1999ರಲ್ಲಿ ಮೊದಲ ಬಾರಿಗೆ ಗೆದ್ದಿದ್ದ ಬಿಜೆಪಿಗೆ ಮತ್ತೆ ಗೆಲುವು ಕಾಣಲಾಗಿಲ್ಲ. ಡಾ. ಸಿದ್ದು ಪಾಟೀಲ್ ಅವರನ್ನು ಕಣಕ್ಕಿಳಿಸಿ ಈ ಬಾರಿ ಕ್ಷೇತ್ರವನ್ನು ತನ್ನ ತೆಕ್ಕೆಗೆ ತೆದುಕೊಳ್ಳಲು ಕೇಸರಿ ಪಡೆ ಯತ್ನಿಸುತ್ತಿದೆ. ಎಪ್ರಿಲ್ 29ರಂದು ಪ್ರಧಾನಿ ನರೇಂದ್ರ ಮೋದಿ ಅವರು ಹುಮನಾಬಾದ್ ಕ್ಷೇತ್ರದಿಂದಲೇ ರಾಜ್ಯದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದರು. ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿರುವ ಡಾ.ಸಿದ್ದು ಪಾಟೀಲ್ ಅವರಿಗೆ ರಾಜಕೀಯ ಅನುಭವಿದೆ, ಕ್ಷೇತ್ರದ ಜನರೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದ್ದಾರೆ.‌ ಯುವ ಪಡೆಯೊಂದಿಗೆ ಪ್ರಚಾರ ಕೈಗೊಂಡು ಕ್ಷೇತ್ರದಲ್ಲಿ ಕಮಲ ಅರಳಿಸುವ ಪ್ರಯತ್ನದಲ್ಲಿದ್ದಾರೆ.

ಹಾಲಿ ಶಾಸಕ ಹಾಗೂ ವಿಧಾನ ಪರಿಷತ್ ಸದಸ್ಯರಾದ ಇಬ್ಬರು ಸಹೋದರರಿಗೆ ಕ್ಷೇತ್ರ ಉಳಿಸಿಕೊಳ್ಳುವುದು ಪ್ರತಿಷ್ಠೆ ಎನ್ನುವಂತಾಗಿದೆ. ಶಾಸಕ ರಾಜಶೇಖರ ಪಾಟೀಲ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕರೆಸಿ ಶಕ್ತಿ ಪ್ರದರ್ಶಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ?: ರೋಣ ಕ್ಷೇತ್ರ | ನೂರೆಂಟು ಸಮಸ್ಯೆಗಳು – ಫಲಿಸದ ಯೋಜನೆಗಳು; ಬದಲಾವಣೆಯತ್ತ ಮತದಾರ

ಕಾಂಗ್ರೆಸ್‌ಅನ್ನು ಮಣಿಸಬೇಕೆಂದು ಜೆಡಿಎಸ್‌ ಕೂಡ ಯತ್ನಿಸುತ್ತಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪುತ್ರ ಸಿಎಂ ಫೈಜ್ ಅವರನ್ನು ಕಣಕ್ಕಿಳಿ‌ಸಿದೆ. ಬಿಎಸ್ಪಿ ಪಕ್ಷದಿಂದ ಸ್ಪರ್ಧಿಸಲು ಮುಂದಾಗಿದ್ದ ಅಂಕುಶ ಗೋಖಲೆ ಅವರು ಪಕ್ಷ ತೊರೆದು ಜೆಡಿಎಸ್ ಸೇರಿದ್ದು, ಜೆಡಿಎಸ್‌ಗೆ ಮತ್ತಷ್ಟು ಬಲ ಬಂದಂತಾಗಿದೆ. ಇದರಿಂದ ಕ್ಷೇತ್ರ ತ್ರಿಕೋನ ಸ್ಪರ್ಧೆಯ ಕಣವಾಗಿ ಮಾರ್ಪಟ್ಟಿದ್ದು, ಬಿರುಸಿನ ಪ್ರಚಾರ ಮುಂದುವರೆದಿದೆ.

ಆಮ್ ಆದ್ಮಿ ಪಕ್ಷದಿಂದ ಸ್ಪರ್ಧಿಸಿದ ಬ್ಯಾಂಕ್ ರೆಡ್ಡಿ ಕ್ಷೇತ್ರದಲ್ಲಿ ತಮ್ಮದೇ ಆದ ಬೆಂಬಲಿಗರ ಯುವ ಪಡೆ ಹೊಂದಿದ್ದಾರೆ. ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಸುತ್ತಾಟ ಆರಂಭಿಸಿದ್ದರು. ಕಾಂಗ್ರೆಸ್ ಜೆಡಿಎಸ್ ಬಿಜೆಪಿ ಪಕ್ಷಗಳಿಗೆ ಸೋಲಿಸಲು ‘ಆಮ್ ಆದ್ಮಿಗೆ’ ‘ಕೇಜ್ರಿವಾಲ್ ಮಾದರಿ’ ತೋರಿಸಿ ಪ್ರಚಾರ ನಡೆಸುತ್ತಿದ್ದಾರೆ.

ಜಾತಿಬಲ ಮತದಾರರು:

ಲಿಂಗಾಯತ ಮತ್ತು ಮುಸ್ಲಿಂ ಮತಗಳು ನಿರ್ಣಾಯಕ ಪಾತ್ರ ವಹಿಸುವ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ರೆಡ್ಡಿ ಸೇರಿದಂತೆ ಇತರೆ ಸಮುದಾಯಗಳ ಮತದಾರರು ಇದ್ದಾರೆ. ಒಂದೇ ಕುಟುಂಬದ ಒಂದೇ ಪಕ್ಷವನ್ನು ಬಹುತೇಕ ಸಲ ಗೆಲ್ಲಿಸಿದ ಕ್ಷೇತ್ರದ ಮತದಾರರು ಈ ಬಾರಿ ಯಾರಿಗೆ ಮಣೆ ಹಾಕುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಕ್ಷೇತ್ರದಲ್ಲಿ 1,21,884 ಪುರುಷರು, 1,11,681 ಮಹಿಳೆಯರು ಹಾಗೂ 12 ತೃತೀಯ ಲಿಂಗಿ ಮತದಾರರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...