ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು : ಬಿ ವೈ ವಿಜಯೇಂದ್ರ

Date:

  • ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆಗೆ ವಿಜಯೇಂದ್ರ ಬೇಸರ
  • ಯಡಿಯೂರಪ್ಪ ಕೇವಲ ವ್ಯಕ್ತಿಯಲ್ಲ ಒಂದು ಶಕ್ತಿ ಎಂದ ಬಿವೈವಿ

ಲಿಂಗಾಯತ ವೀರಶೈವರೆಂದು ಜಾತಿ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರುವ ಬದಲು ಜಗದೀಶ್ ಶೆಟ್ಟರ್ ಪಕ್ಷೇತರರಾಗಬಹುದಿತ್ತು ಎಂದು ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ್ ಹಿರಿಯರು ಅವರ ಬಗ್ಗೆ ಕೀಳಾಗಿ ಮಾತನಾಡುವುದಿಲ್ಲ. ಆದರೆ ವೀರೇಂದ್ರ ಪಾಟೀಲ್ ಅವರಂತಹ ದೊಡ್ಡ ನಾಯಕರನ್ನೇ ಸರಿಯಾಗಿ ನಡೆಸಿಕೊಳ್ಳದ ಕಾಂಗ್ರೆಸ್ ಇವರಿಗೇನು ಸ್ಥಾನಮಾನ ಕೊಡುತ್ತದೆಂದು ಆ ಪಕ್ಷ ಸೇರಿದರೋ ತಿಳಿಯದು ಎಂದರು.

ಅವರು ಕಾಂಗ್ರೆಸ್ ಸೇರಿದ್ದರ ಬಗ್ಗೆ ನೋವಿದೆ. ಬೇರೆ ಬೇರೆ ಜಾತಿಗಳನ್ನು ಒಡೆಯಲು ಪ್ರಯತ್ನಿಸಿದ್ದ ಕಾಂಗ್ರೆಸ್ ಪಕ್ಷವನ್ನ ಜಗದೀಶ್ ಶೆಟ್ಟರ್ ಸೇರಿದ್ದು ನಿಜಕ್ಕೂ ದುರಂತ. ಸಮಾಜ ಸಮಾಜಗಳನ್ನು ಒಡೆದು ಬೆಂಕಿ ಹಾಕುವ ಪಕ್ಷ ಕಾಂಗ್ರೆಸ್ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೈಕಮಾಂಡ್‌ಗೆ ಎಟಿಎಂ ಆಗಲು ಪಿತೂರಿ ನಡೆಸಿದೆ. ಇದಕ್ಕೆ ರಾಜ್ಯದ ಜನ ಅವಕಾಶ ನೀಡುವುದಿಲ್ಲ ಎಂದರು.

ಯಡಿಯೂರಪ್ಪ, ಕಾಮನ್ ಮ್ಯಾನ್ ಸಿಎಂ ಬಸವರಾಜ ಬೊಮ್ಮಾಯಿ ಅವರು ಮಾಡಿದ ಅಭಿವೃದ್ಧಿ ಕೆಲಸ ಬಿಜೆಪಿಗೆ ಸ್ಪಷ್ಟ ಬಹುಮತ ತಂದು ಕೊಡುತ್ತದೆ. ಬಿಜೆಪಿ ಒಬ್ಬರು ಇಬ್ಬರ ಮೇಲೆ ಡಿಪೆಂಡ್ ಆಗಿಲ್ಲ. ಇದು ಕಾರ್ಯಕರ್ತರ ಪಕ್ಷ ಎಂದರು.

ಇನ್ನು ತಮ್ಮ ತಂದೆ ಪಕ್ಷದ ಹಿರಿಯ ನಾಯಕ ಬಿಎಸ್‌ವೈ ಅವರನ್ನು ಪಕ್ಷ ಮೂಲೆಗುಂಪು ಮಾಡುತ್ತಿದೆ. ಬಳಸಿ ಬಿಸಾಡುವಂತೆ ನಡೆದುಕೊಳ್ಳುತ್ತದೆ ಎನ್ನುವ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಯಡಿಯೂರಪ್ಪ ಒಂದು ಶಕ್ತಿ ಇದ್ದಂತೆ. ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:“ನಮ್ಮಲ್ಲಿ ಮಾತನಾಡೋಕೆ ಪ್ರತಾಪ್ ಸಿಂಹನಂತವರು ಇದ್ದಾರೆ ನಾನೇಕೆ ಮಾತನಾಡಲಿ” : ಬಿ ಎಲ್ ಸಂತೋಷ್

ಬಳಿಕ ಜೆಡಿಎಸ್ ಮೇಲೂ ವಾಗ್ಪ್ರಹಾರ ನಡೆಸಿದ ಅವರು, ಜೆಡಿಎಸ್ ಪಕ್ಷ ಅತಂತ್ರ ಪರಿಸ್ಥಿತಿ ಕನಸು ಕಾಣುತ್ತಿದೆ. ಪ್ರಜ್ಞಾವಂತ ಮತದಾರರು ಬಿಜೆಪಿಯನ್ನು ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುತ್ತಾರೆ ಎಂದರು.

ವರುಣಾ ಕ್ಷೇತ್ರದಲ್ಲಿನ ಪ್ರಚಾರ ಕಾರ್ಯದ ಬಗ್ಗೆ ಮಾತನಾಡಿದ ಬಿಜೆಪಿ ಉಪಾಧ್ಯಕ್ಷರು ವರುಣ ಜನ ನನ್ನನ್ನು ರಾಜ್ಯಕ್ಕೆ ಪರಿಚಯ ಮಾಡಿಸಿದವರು. ವರುಣ ಕ್ಷೇತ್ರದ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಈ ಬಾರಿ ವರುಣ ಮತದಾರರು ಬದಲಾವಣೆ ಬಯಸಿದ್ದಾರೆ. ಮತ್ತೆ ವರುಣಗೆ ನಾನು ಪ್ರಚಾರಕ್ಕೆ ಬರುತ್ತೇನೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...