ಬಿ ಎಲ್ ಸಂತೋಷ್‌ ನನಗಷ್ಟೇ ಅಲ್ಲ, ತೇಜಸ್ವಿನಿ ಅನಂತಕುಮಾರ್ ಗೂ ಟಿಕೆಟ್ ತಪ್ಪಿಸಿದರು: ಜಗದೀಶ್ ಶೆಟ್ಟರ್

Date:

  • ಸಂತೋಷ್ ವಿರುದ್ದ ಮರಳಿ ವಾಗ್ದಾಳಿ ನಡೆಸಿದ ಜಗದೀಶ್‌ ಶೆಟ್ಟರ್
  • ಯಾರು ಬಂದರೂ ನನ್ನ ಗೆಲುವು ತಡೆಯಲು ಸಾಧ್ಯವಿಲ್ಲ ಮಾಜಿ ಸಿಎಂ

ನನ್ನಂತೆಯೇ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರ ಟಿಕೆಟನ್ನೂ ತಪ್ಪಿಸಲಾಗಿದೆ. ಇದು ವಿಘ್ನ ಸಂತೋಷಿಗಳ ಕೃತ್ಯ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್, ಸಂತೋಷ್‌ ವಿರುದ್ಧ ನೇರ ಆರೋಪ ಮಾಡಿದರು.

ಇಂದು (ಏ.28) ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಬಿಜೆಪಿಯಲ್ಲಿದ್ದರೆ ನಂಬರ್ ಒನ್ ನಾಯಕನಾಗುತ್ತಿದ್ದೆ, ಪ್ರತಿಸ್ಪರ್ಧಿ ಆಗುತ್ತೇನೆ ಎಂಬ ಕಾರಣಕ್ಕೆ ನನ್ನ ವಿರುದ್ಧ ಷಡ್ಯಂತ್ರ ಮಾಡಿದರು. ತೇಜಸ್ವಿನಿ ಅನಂತ್ ಕುಮಾರ್ ಅವರಿಗೂ ಟಿಕೆಟ್ ಕೈತಪ್ಪಲು ಬಿ.ಎಲ್ ಸಂತೋಷ್ ಕಾರಣ. ನನಗೆ ಆದ ಅನ್ಯಾಯ ತೇಜಸ್ವಿನಿ ಅನಂತಕುಮಾರ್ ಗೂ ಆಗಿದೆ ಎಂದವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೆಲವರಿಗೆ ಅಡ್ಡಿ ಆಗುತ್ತೇನೆ ಅಂತ ನನ್ನ ವಿರುದ್ಧ ನೆಗೆಟಿವ್ ಪ್ರಚಾರ ನಡೆಸಿದರು. ಕೆಲವರಿಗೆ ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಇದೆ. ಅವರೆಲ್ಲ ಸೇರಿಕೊಂಡು ನನ್ನ ಹಾದಿಗೆ ಕಲ್ಲು ಹಾಕಿದರು. ನನಗೆ ಟಿಕೆಟ್ ಸಿಗದಂತೆ ನೋಡಿಕೊಂಡರು ಎಂದು ಶೆಟ್ಟರ್ ಆಕ್ರೋಶ ಹೊರ ಹಾಕಿದರು.

ಬಿ ಎಲ್ ಸಂತೋಷ್ ಗೆ ಲಿಂಗಾಯತರ ಹೊರತಾಗಿ ಸರ್ಕಾರ ರಚನೆ ಮಾಡಬೇಕಿದೆ. ಇದಕ್ಕಾಗಿ ಲಿಂಗಾಯತರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ನಾನು ಬಿ.ಎಲ್ ಸಂತೋಷ್ ವಿರುದ್ಧ ಮಾತನಾಡಿದ್ದಕ್ಕೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ.

ಬಿಜೆಪಿ ಹೈಕಮಾಂಡ್ ನಾಯಕರುಗಳೇ ನನ್ನ ವಿರುದ್ಧ ಹೋರಾಟಕ್ಕಿಳಿದಿದ್ದಾರೆ. ಎಲ್ಲರಿಗೂ ನಾನೇ ಟಾರ್ಗೆಟ್. ಅವರೇನೇ ಮಾಡಿದರೂ ನನ್ನ ಗೆಲುವು ತಡೆಯಲಾಗುವುದಿಲ್ಲ. ನನ್ನ ವಿರುದ್ಧ ಇಷ್ಟೆಲ್ಲ ಮಾಡುವ ಸಂತೋಷ್ ಹೀಗೆಲ್ಲ ಮಾಡುವ ಬದಲು ನೇರವಾಗಿ ನಿಂತು ಯುದ್ದ ಮಾಡಲಿ ಎಂದು ಶೆಟ್ಟರ್ ಸವಾಲೆಸೆದರು.

ಈ ಸುದ್ದಿ ಓದಿದ್ದೀರಾ?:ಸಮೀಪದ ಸ್ಪರ್ಧೆ ಕಾಣಲಿರುವ ಕರ್ನಾಟಕದ 70 ಸೀಟುಗಳಲ್ಲಿ ಗೆಲುವಿಗೆ ಕಾಂಗ್ರೆಸ್ ಒತ್ತು

ಏನು ಮಾಡಿದರು ಜಗದೀಶ ಶೆಟ್ಟರ್ ಸ್ವಲ್ಪ ಸಿಟ್ಟಾಗಿ ಸುಮ್ಮನಾಗಿ ಬಿಡುತ್ತಾರೆ ಎಂದು ಅವರು ಅಂದುಕೊಂಡಿದ್ದರು. ನನ್ನನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವ ಹುನ್ನಾರ, ಸ್ವಾಭಿಮಾನಕ್ಕೆ ಧಕ್ಕೆ ತಂದಿದ್ದರಿಂದ ಬಿಜೆಪಿ ಬಿಟ್ಟು ಹೊರ ಬಂದೆ, ನಾನು ಕಾಂಗ್ರೆಸ್ ಸೇರಿರುವುದು ಬಿಜೆಪಿಯವರಿಗೆ ತಳಮಳ ಶುರುವಾಗಿದೆ ಎಂದರು.

ಒಬ್ಬ ಜಗದೀಶ ಶೆಟ್ಟರನನ್ನು ಸೋಲಿಸಲು ಕೇಂದ್ರ-ರಾಜ್ಯ ಸರಕಾರಗಳು, ಇಡೀ ಬಿಜೆಪಿಯೇ ಟೊಂಕ ಕಟ್ಟಿ ನಿಂತಂತಿದೆ. ಯಾರೇ ಬಂದರೂ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ ಎಂದರು.

ಇತ್ತ ಸಂತೋಷ್‌ ವಿರುದ್ದ ಶೆಟ್ಟರ್‌ ನೀಡಿರುವ ಹೇಳಿಕೆಯೀಗ ಬಿಜೆಪಿ ಮನೆಯೊಳಗೆ ತಲ್ಲಣ ಸೃಷ್ಟಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...