ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಜೆಡಿಎಸ್

Date:

  • ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಹೊಸ ಯೋಜನೆ ಹಮ್ಮಿಕೊಂಡ ಜೆಡಿಎಸ್
  • ಪಕ್ಷದ ಪ್ರಣಾಳಿಕೆ ಅನಾವರಣಗೊಳಿದ ಮಾಜಿ ಪಿಎಂ ದೇವೇಗೌಡ

ರಾಜ್ಯದ ಚುಕ್ಕಾಣಿ ಹಿಡಿಯುವ ಆಶಯದೊಂದಿಗೆ ಅಮಿತೋತ್ಸಾಹದಲ್ಲಿ ಸಾಗುತ್ತಿರುವ ಪ್ರಾದೇಶಿಕ ಪಕ್ಷ ಜೆಡಿಎಸ್ ಈಗ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆಯುವಂತೆ ಮತ್ತೊಂದು ಹೆಜ್ಜೆ ಇಟ್ಟಿದೆ.

ಎರಡೂ ಪಕ್ಷಗಳಿಗೂ ಮೊದಲೇ ರಾಜಧಾನಿ ಬೆಂಗಳೂರಿಗೆ ಪ್ರತ್ಯೇಕ ಪ್ರಣಾಳಿಕೆ ರೂಪಿಸಿರುವ ಪಕ್ಷ ಇಂದು ಅದನ್ನು ಬಿಡುಗಡೆ ಮಾಡಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಈ ಪ್ರಣಾಳಿಕೆ ಅನಾವರಣಗೊಳಿಸಿದ್ದಾರೆ. ಈ ಹಿಂದೆ ರಾಜ್ಯಕ್ಕೊಂದು ಭರವಸೆಯ ಪ್ರಣಾಳಿಕೆ ನೀಡಿದ್ದ ಜೆಡಿಎಸ್ ಈಗ ಉದ್ಯಾನ ನಗರಿಗೆ ಪ್ರತ್ಯೇಕ ಭರವಸೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪದ್ಮನಾಭನಗರ ನಿವಾಸದಲ್ಲಿ ಬೆಂಗಳೂರು ಪ್ರಣಾಳಿಕೆ ಬಿಡುಗಡೆ ಮಾಡಿದ ದೇವೇಗೌಡ ಎಲ್ಲಾ ವರ್ಗಕ್ಕೂ ಅನುಕೂಲವಾಗುವ ರೀತಿ ಪ್ರಣಾಳಿಕೆ ಇದಾಗಿದೆ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ ನಾವು ಬದ್ಧ. ಬೆಂಗಳೂರು ಸಾಕಷ್ಟು ಬೆಳೆದಿದೆ, 1 ಕೋಟಿಗೂ ಹೆಚ್ಚು ಜನ ಇದ್ದಾರೆ. ಬೆಂಗಳೂರಿನ ಸಮಸ್ಯೆ ಪರಿಹಾರದ ಬಗ್ಗೆ ಪ್ರಣಾಳಿಕೆಯಲ್ಲಿ ಪ್ರಕಟ ಮಾಡಿದ್ದೇವೆ ಎಂದವರು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಕರ್ನಾಟಕದಲ್ಲಿ ನೆಮ್ಮದಿ ಬೇಕು ಎಂದರೆ ಬಿಜೆಪಿ ವಿರುದ್ಧ ಹೋರಾಡಲೇಬೇಕು: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರಿಗೆ ಸಂಬಂಧಿಸಿದಂತೆ ಜೆಡಿಎಸ್ ಪ್ರಣಾಳಿಕೆಯಲ್ಲಿ 8 ಭರವಸೆಗಳನ್ನು ನೀಡಲಾಗಿದೆ. ಸಾಮಾಜಿಕ ಭದ್ರತೆಗಳು ಮತ್ತು ಆರೋಗ್ಯ ಶ್ರೀರಕ್ಷೆ, ಮಹಾನಗರ ಪಾಲಿಕೆ ಆಡಳಿತ ಸುಧಾರಣೆ, ಶಿಕ್ಷಣ, ಆರೋಗ್ಯ, ಬೆಂಗಳೂರು ನಗರಕ್ಕೆ ಉತ್ತಮ ಸಾರಿಗೆ ವ್ಯವಸ್ಥೆ, ನಗರದಲ್ಲಿ ಹಸಿರೀಕರಣ ಮತ್ತು ಅರಣ್ಯೀಕರಣ, ನಗರದಲ್ಲಿನ ಕಣಿವೆ, ಕೆರೆಗಳ ಸಂರಕ್ಷಣೆ, ಕಾಲುವೆಗಳ ಪುನಶ್ಚೇತನ, ಕೋರಮಂಗಲ – ಚೆಲ್ಲಘಟ್ಟ ವ್ಯಾಲಿ ಏತ ನೀರಾವರಿ ಯೋಜನೆಯ ಆಧುನೀಕರಣ ಈ ಅಂಶಗಳನ್ನು ಪ್ರಣಾಳಿಕೆ ಒಳಗೊಂಡಿದೆ.

ಬೆಂಗಳೂರಿಗಾಗಿ ಜೆಡಿಎಸ್ ಪ್ರಮುಖ ಭರವಸೆಗಳು ಹೀಗಿವೆ:

  • ಖಾಸಗಿ ಶಾಲೆಗಳಲ್ಲಿ ದುಡಿಯುವ 10,000ಕ್ಕಿಂತ ಕಡಿಮೆ ವೇತನದ ಶಿಕ್ಷಕರಿಗೆ ಸಹಾಯಧನ.
  • ನಗರದ ಒಳಚರಂಡಿ ವ್ಯವಸ್ಥೆಯನ್ನು ಬಲಪಡಿಸುವುದು.
  • ಬಿಬಿಎಂಪಿ ವ್ಯಾಪ್ತಿಗೆ ಸೇರಿರುವ 110 ಗ್ರಾಮಗಳಿಗೆ ಕೊಳವೆ ಮಾರ್ಗದ ಮೂಲಕ ಕುಡಿಯುವ ನೀರು ಪೂರೈಕೆ.
  • ಸಭೆ ಸಮಾರಂಭಗಳಲ್ಲಿ ಸಂಪೂರ್ಣವಾಗಿ ಪ್ಲಾಸ್ಟಿಕ್ ಬಳಕೆ ನಿಷೇಧ.
  • ತ್ಯಾಜ್ಯ ವಿಲೇವಾರಿ ಮತ್ತು ನಿರ್ವಹಣೆ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು.
  • ಪಂಚರತ್ನ ಯೋಜನೆ ಅಡಿಯಲ್ಲಿ ಶಾಲಾ ಶಿಕ್ಷಣದಲ್ಲಿ ಸುಧಾರಣೆ.
  • ಮದರಸಾ ಸೇರಿದಂತೆ ಅಲ್ಪಸಂಖ್ಯಾತ ಸಮುದಾಯದ ಶಾಲೆಗಳಲ್ಲೂ ಹೊಸ ಶಿಕ್ಷಣ ನೀತಿ ಜಾರಿ.
  • ಬೆಂಗಳೂರು ಸಾರ್ವಜನಿಕ ಆರೋಗ್ಯ ಮಂಡಳಿ ರಚನೆ.
  • ಎಲ್ಲ ವಾರ್ಡ್ ಗಳಲ್ಲೂ 30 ಹಾಸಿಗೆಗಳ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ಆರಂಭ.
  • ಬೆಂಗಳೂರು ನಗರ ಮತ್ತು ಹೊರವಲಯ ಸೇರಿದಂತೆ ಸ್ಥಳೀಯ ರೈಲು ಯೋಜನೆ ಅನುಷ್ಠಾನ.
  • ದೀರ್ಘ ಕಾಲದಿಂದ ನನೆಗುದಿಗೆ ಬಿದ್ದಿರುವ ಹೊರವರ್ತುಲ ರಸ್ತೆ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...