ಹಳೆ ಮೈಸೂರಿನಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ಹರಸಾಹಸ : ಪ್ರಚಾರದ ಕಣಕ್ಕೆ ಎಚ್‌ಡಿಡಿ, ಎಚ್‌ಡಿಕೆ

Date:

  • ಇಂದಿನಿಂದ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ದಳಪತಿಗಳ ಪ್ರವಾಸ
  • ಪಕ್ಷದ ಅಭ್ಯರ್ಥಿಗಳ ಪರ ಎಚ್‌ಡಿಡಿ, ಎಚ್‌ಡಿಕೆ ಚುನಾವಣಾ ಪ್ರಚಾರ

ಜೆಡಿಎಸ್ ನ ಭದ್ರಕೋಟೆ ಎಂದೇ ಪರಿಗಣಿತವಾಗಿರುವ ಹಳೆ ಮೈಸೂರು ಭಾಗದಲ್ಲಿ ಪಕ್ಷದ ನೆಲೆ ಉಳಿಸಿಕೊಳ್ಳಲು ಜೆಡಿಎಸ್ ಇನ್ನಿಲ್ಲದ ಪ್ರಯತ್ನ ಆರಂಭಿಸಿದೆ.

ಪಕ್ಷಾಂತರದಿಂದಾಗಿ ಈ ಭಾಗದ ಹಲವು ಮುಖಂಡರು ಬಿಜೆಪಿ ಹಾಗೂ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲಿ ಜೆಡಿಎಸ್‌ ಈಗ ಅಸ್ತಿತ್ವ ಉಳಿಸಿಕೊಳ್ಳಲು “ಮಿಷನ್ ಹಳೆ ಮೈಸೂರು” ಆರಂಭಿಸಿದೆ.

ಇದಕ್ಕಾಗಿ ಖುದ್ದು ಜೆಡಿಎಸ್ ದಳಪತಿಗಳಾದ ಎಚ್ ಡಿ ದೇವೇಗೌಡ, ಎಚ್ ಡಿ ಕುಮಾರಸ್ವಾಮಿ ಅಖಾಡಕ್ಕಿಳಿದಿದ್ದಾರೆ. ಇಂದಿನಿಂದ (ಏ.25) ಮೈಸೂರು ಭಾಗದಲ್ಲಿ ಇಬ್ಬರೂ ನಾಯಕರು ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಾರಿ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಮೊದಲ ಬಾರಿ ಹಳೆ ಮೈಸೂರಿನ ಕ್ಷೇತ್ರಗಳ ಮೇಲೆ ಹೆಚ್ಚಿನ ಆಸ್ಥೆ ವಹಿಸಿ ಪ್ರಚಾರ ಕಾರ್ಯ ನಡೆಸುತ್ತಿವೆ.

ಬಿಜೆಪಿಯಿಂದ ಜೆ ಪಿ ನಡ್ಡಾ, ಅಮಿತ್ ಶಾ, ಮಂಡ್ಯದಲ್ಲಿ ಯುಪಿ ಸಿಎಂ ಆದಿತ್ಯನಾಥ್ ಹಾಗೂ ತಿಂಗಳಾಂತ್ಯದಲ್ಲಿ ಮೋದಿ ಪ್ರಚಾರ ನಡೆಸಿದರೆ, ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇತರ ಪ್ರಮುಖರೂ ಇಲ್ಲಿ ಪಕ್ಷದ ಪರ ರೋಡ್ ಶೋ ನಡೆಸಲಿದ್ದಾರೆ.

ಹೀಗೆ ಘಟಾನುಘಟಿ ನಾಯಕರ ನೇತೃತ್ವದಲ್ಲಿ ಎರಡೂ ಪಕ್ಷಗಳು ಹಳೆ ಮೈಸೂರು ಭಾಗದ ಕ್ಷೇತ್ರಗಳನ್ನು ಕಬ್ಜಾ ಮಾಡಿಕೊಳ್ಳುವ ತಂತ್ರ ಹೆಣೆಯುತ್ತಿವೆ. ಈ ಹಿನ್ನೆಲೆಯಲ್ಲಿ ತಮ್ಮ ಭದ್ರ ನೆಲೆ ಕೈಜಾರದಂತೆ ನೋಡಿಕೊಳ್ಳುವ ಅನಿವಾರ್ಯತೆ ಇರುವುದರಿಂದ ಪಕ್ಷದ ಪ್ರಮುಖರಿಬ್ಬರೂ ಅನಾರೋಗ್ಯದ ನಡುವೆ ಪ್ರಚಾರಾಂಗಣಕ್ಕೆ ಇಳಿಯಲಿದ್ದಾರೆ.

ಜಾತ್ಯತೀತ ಜನತಾದಳ ಪ್ರಮುಖರ ಚುನಾವಣಾ ಪ್ರಚಾರ ಯಾತ್ರೆ ಹೀಗಿರಲಿದೆ. ಇಂದು ಕೆ.ಆರ್.ನಗರ, ಪಿರಿಯಾಪಟ್ಟಣ ಕ್ಷೇತ್ರದಲ್ಲಿ ದೇವೇಗೌಡರು ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಹಾಗೆಯೇ ಕೃಷ್ಣರಾಜ, ಚಾಮರಾಜ, ವರುಣಾ, ಟಿ ನರಸೀಪುರದಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರು ಮತಯಾಚನೆ ಮಾಡಲಿದ್ದಾರೆ. ಚುನಾವಣೆ ಮುಗಿಯುವವರೆಗೂ ತನ್ನ ಪ್ರಾಬಲ್ಯದ ಕ್ಷೇತ್ರಗಳಲ್ಲಿ ನಿರಂತರ ಪ್ರಚಾರ ಮತ್ತು ಸಭೆಗಳನ್ನು ನಡೆಸಲು ಜೆಡಿಎಸ್ ತೀರ್ಮಾನಿಸಿದೆ.

ಆ ಮೂಲಕ ಒಗ್ಗಟ್ಟಿನ ಶಕ್ತಿ ಪ್ರದರ್ಶನದ ಮಾಡಲಿರುವ ಜಾತ್ಯತೀತ ಜನತಾದಳ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದಾರೆ.

ಗೌಡರ ಪ್ರವಾಸ

ಏಪ್ರಿಲ್ 25ರ ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ಪಿರಿಯಾಪಟ್ಟಣಕ್ಕೆ ಹೆಲಿಕ್ಯಾಪ್ಟರ್ ನಲ್ಲಿ ಬಂದಿಳಿದ ಅವರು ಅಲ್ಲಿಂದ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ ಮಹದೇವ ಪರ ಮತಯಾಚನೆ ಮಾಡಿ, ನಂತರ ಮಧ್ಯಾಹ್ನ 2 ಗಂಟೆಗೆ ಕೆ. ಆರ್ ನಗರದಲ್ಲಿ ಪಕ್ಷದ ಅಭ್ಯರ್ಥಿ ಸಾ.ರಾ. ಮಹೇಶ್ ಪರ ಹೊಸೂರು, ಸಾಲಿಗ್ರಾಮ, ಮಿರ್ಲೆ ಗ್ರಾಮದಲ್ಲಿ ಪ್ರಚಾರ ಮಾಡಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ?:ಸಿದ್ಧಾಂತ ಬದ್ಧತೆ ಕಳೆದುಕೊಂಡಿರುವ ಬಿಜೆಪಿ ಈಗ ವಿನಾಶದತ್ತ ಸಾಗುತ್ತಿದೆ;…

ಎಚ್ಡಿಕೆ ಪ್ರಚಾರ

ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಸೋಮವಾರ ಸಂಜೆ ಡಿಸ್ಚಾರ್ಜ್ ಆಗಿದ್ದರು. ವೈದ್ಯರು ವಿಶ್ರಾಂತಿಗೆ ಸೂಚನೆ ನೀಡಿದ್ದರೂ ಅದನ್ನೂ ಲೆಕ್ಕಿಸದೆ ಪಕ್ಷದ ಪರ ಕೆಲಸ ಮಾಡಲು ಹೆಚ್ಡಿಕೆ ಮುಂದಾಗಿದ್ದಾರೆ.

ಹೀಗಾಗಿ ಮಂಗಳವಾರ ಬೆಳಗ್ಗೆ 11ಗಂಟೆಗೆ ಮೈಸೂರು ನಗರದ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಪ್ರಚಾರ ಕಾರ್ಯದಲ್ಲಿ ಕುಮಾರಸ್ವಾಮಿ ಭಾಗವಹಿಸಿ ಮುಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ನಂತರ ಕುವೆಂಪುನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣಮಂಟಪದಲ್ಲಿನ ಕಾರ್ಯಕರ್ತರ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಬಳಿಕ ಜೆಡಿಎಸ್ ಅಭ್ಯರ್ಥಿ ಕೆ ವಿ ಮಲ್ಲೇಶ್ ಪರ ಮತಯಾಚಿಸಲಿದ್ದಾರೆ.

ಮಧ್ಯಾಹ್ನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಭಾರತಿ ಶಂಕರ್ ಪರ ಮತಬೇಟೆ ನಡೆಸಲಿರುವ ಎಚ್ಡಿಕೆ, ನರಸೀಪುರದ ಚುಂಚನಗಿರಿ ಸಮುದಾಯ ಭವನದ ಆವರಣದಲ್ಲಿ ಸಭೆ ನಡೆಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...