ಚುನಾವಣೆ 2023 | ಜೋಷಿ, ಬಿ.ಎಲ್.ಸಂತೋಷ್‌ಗಾಗಿ ಲಿಂಗಾಯಿತ ಶೆಟ್ಟರ್ ಬಲಿ

Date:

ಹೊಸ ಪೀಳಿಗೆಯ ನಾಯಕತ್ವ ಬೆಳೆಸಲು ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಅವರನ್ನೇ ಏಕೆ ಬಲಿ ನೀಡಲಾಗುತ್ತಿದೆ? ವಯಸ್ಸಂತು ಕಾರಣವಾಗಿರಲಿಕ್ಕಿಲ್ಲ! ಏಕೆಂದರೆ, ಈಗಿನ್ನೂ ಅವರು 67 ವಯಸ್ಸಿನ ಹರೆಯ. ಇದೇ ವಯಸ್ಸಿನ ಬ್ರಾಹ್ಮಣ ಸಮುದಾಯದ ಸುರೇಶ್ ಕುಮಾರ್ ಅವರಿಗೆ ಟಿಕೆಟ್ ನೀಡಿದ್ದಾರೆ. ಅದೇ ರೀತಿ 72 ವಯಸ್ಸಿನ ವಿ.ಸೋಮಣ್ಣನವರಿಗೂ ಒಂದಲ್ಲಾ ಎರಡೆರಡು ಕಡೆ ಟಿಕೆಟ್ ನೀಡಿದ್ದಾರೆ!

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ತನ್ನ ರಾಜಕೀಯ ಬದುಕು ಆರಂಭಿಸಿದ್ದೇ ಬಿಜೆಪಿಯಿಂದ. ಅವರೆಂದೂ ಸಂಘದ ಅಥವಾ ಬಿಜೆಪಿ ವಿರುದ್ಧ ಏರು ಧ್ವನಿಯಲ್ಲಿ ಮಾತನಾಡಿದವರಲ್ಲ. ನಿಷ್ಠೆಗೆ ಹೆಸರಾದವರು. ಆದರಿಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದೊಂದಿಗಿನ ತನ್ನ ಕಳ್ಳು ಬಳ್ಳಿ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಬಿಜೆಪಿಗೆ ಅವರ ಈ ಅನಿರೀಕ್ಷಿತ ನಡೆ ಆಘಾತ ತಂದದ್ದು ಸುಳ್ಳಲ್ಲ.

ನಿನ್ನೇ ಪಕ್ಷದ ರಾಜ್ಯ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಜೋಷಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಂಧಾನಕ್ಕೆ ಮುಂದಾಗಿ ಅವರೆದುರು ಎರಡು ಬಿಗ್ ಆಫರ್ ಇಟ್ಟಿತ್ತು. ಒಂದು, ತಾವು ಸೂಚಿಸಿದ ವ್ಯಕ್ತಿಗೆ ಅಥವಾ ತಮ್ಮ ಕುಟುಂಬದವರೊಬ್ಬರಿಗೆ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ನೀಡುತ್ತೇವೆ. ಇನ್ನೊಂದು ತಮಗೆ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಟಿಕೆಟ್ ನೀಡುತ್ತೇವೆ. ಆದರವರು ಎರಡೂ ಆಫರ್ ಗಳನ್ನು ನಯವಾಗಿಯೇ ತಿರಸ್ಕರಿಸಿ ಇಂದು ಪಕ್ಷದಿಂದಲೇ ಕಾಲ್ಕಿತ್ತಿದ್ದಾರೆ.

ಇದನ್ನೂ ಓದಿ ಚುನಾವಣೆ 2023 | ಬಿಜೆಪಿಗೆ ಮಾಜಿ ಸಿಎಂ ಜಗದೀಶ್‌ ಶೆಟ್ಟರ್ ರಾಜೀನಾಮೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗವರು ನನಗೆ ಪಕ್ಷ ಟಿಕೆಟ್ ನಿರಾಕರಿಸಿದ್ದೇಕೆಂದು ಪಕ್ಷದ ರಾಜ್ಯ ನಾಯಕರಿಗೆ ಹಾಗೂ ವರಿಷ್ಠರಿಗೆ ಕೇಳುತ್ತಿದ್ದಾರೆ. ಈಗ ಅನಿವಾರ್ಯವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಸ್ವತಃ ಫೀಲ್ಡ್ ಗಿಳಿದು ‘ಹೊಸ ಪೀಳಿಗೆಗೆ ಅವಕಾಶ ನೀಡಬೇಕು, ಪಕ್ಷದಲ್ಲಿ ಹೊಸ ನಾಯಕತ್ವ ಬೆಳೆಸಬೇಕು ಎಂಬುದು ಪಕ್ಷದ ತೀರ್ಮಾನ. ಅದೇ ಸರಣಿಯಲ್ಲಿ ಶೆಟ್ಟರ್ ಅವರಿಗೆ ಪಕ್ಷ ಟಿಕೆಟ್ ನೀಡಿಲ್ಲ. ಯಾರನ್ನೂ ವೈಯಕ್ತಿಕವಾಗಿ ಗುರಿಯಾಗಿಸಿ ಈ ತೀರ್ಮಾನ ತೆಗೆದುಕೊಂಡಿಲ್ಲ” ಎಂದು ಸಮಜಾಯಿಷಿ ನೀಡುತ್ತಿದ್ದಾರೆ. ಆದರವರ ಈ ಸಮಜಾಯಿಷಿ ಸ್ವತಃ ಬೊಮ್ಮಾಯಿಗೆ ಸಮಾಧಾನ ತಂದಿರಲಿಕ್ಕಿಲ್ಲ.

ಹೊಸ ಪೀಳಿಗೆಯ ನಾಯಕತ್ವ ಬೆಳೆಸಲು ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಅವರನ್ನೇ ಏಕೆ ಬಲಿ ನೀಡಲಾಗುತ್ತಿದೆ? ವಯಸ್ಸಂತು ಕಾರಣವಾಗಿರಲಕ್ಕಿಲ್ಲ! ಏಕೆಂದರೆ, ಈಗಿನ್ನೂ ಅವರು 67 ವಯಸ್ಸಿನ ಹರೆಯ. ಇದೇ ವಯಸ್ಸಿನ ಬ್ರಾಹ್ಮಣ ಸಮುದಾಯದ ಸುರೇಶ್ ಕುಮಾರ್ ಅವರಿಗೆ ಟಿಕೆಟ್ ನೀಡಿದ್ದಾರೆ. ಅದೇ ರೀತಿ 72 ವಯಸ್ಸಿನ ವಿ.ಸೋಮಣ್ಣನವರಿಗೂ ಒಂದಲ್ಲಾ ಎರಡೆರಡು ಕಡೆ ಟಿಕೆಟ್ ನೀಡಿದ್ದಾರೆ. ಶೆಟ್ಟರ್ ಹೇಳುತ್ತಿರುವಂತೆ, ಅವರೇನು ಸಿಡಿ ಕೇಸಿನ ಗಿರಾಕಿಯೂ ಅಲ್ಲ, ಕೈ-ಬಾಯಿ ಅಷ್ಟೇನೂ ರಾಡಿ ಮಾಡಿಕೊಂಡವರೂ ಅಲ್ಲ, ಹಾಗೆಯೇ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಲ್ಲಿ ಸೋಲುವ ಆಸಾಮಿಯೂ ಅಲ್ಲ.

ಟಿಕೆಟ್ ನಿರಾಕರಣೆಗೆ ಅಸಲಿ ಕಾರಣವೇನು?

ಶೆಟ್ಟರ್ ಆಕಸ್ಮಿಕವಾಗಿ ಲಕ್ಕಿ ಸಿಎಂ ಆಗಲು, ಆರಾರು ಸರ ಗೆಲ್ಲಲು, ಅನಾಯಾಸವಾಗಿ ಪಕ್ಷದಲ್ಲಿ ಬಲಾಢ್ಯವಾಗಿ ಬೆಳೆಯಲು ಕಾರಣ ಅವರು ಲಿಂಗಾಯತ ಸಮುದಾಯದವರೆಂಬುದು. ತಾನು ಲಿಂಗಾಯತ ಸಮುದಾಯದನೆಂಬುದೇ ಅವರ ಶಕ್ತಿ. ಆದರೀಗ ಅವರಿಗೆ ಅದೇ ಉರುಳಾಗಿದೆ. ಈ ಸಲ ಸಂಘ ಪರಿವಾರ ಶತಾಯ ಗತಾಯ ಬ್ರಾಹ್ಮಣ ಸಮುದಾಯದ ಪ್ರಲ್ಹಾದ ಜೋಶಿ, ಇಲ್ಲವೇ ಬಿ.ಎಲ್. ಸಂತೋಷಗೆ ಸಿಎಂ ಕುರ್ಚಿಯಲ್ಲಿ ಪ್ರತಿಷ್ಠಾಪಿಸಲು ಆಲೋಚಿಸಿದಂತಿದೆ. ಅದಕ್ಕಾಗಿಯೇ ಸಿಎಂ ರೇಸ್ ನಲ್ಲಿರುವ ವ್ಯಕ್ತಿಗಳನ್ನ ಗುರಿಯಾಗಿಸಿಕೊಂಡು ಅವರಿಗೆ ಟಿಕೆಟ್ ನಿರಾಕರಿಸಿಯೋ ಅಥವಾ ಪಕ್ಷದಿಂದ ನಿರ್ಲಕ್ಷಿಸಿಯೋ ಒಟ್ಟಿನಲ್ಲಿ ಅವರಾಗವರೇ ಪಕ್ಷ ತೊರೆಯುವಂತೆ ಮಾಡಲಾಗುತ್ತಿದೆ. ಈಗಾಗಲೇ ಲಕ್ಷ್ಮಣ ಸವದಿ ಕಾಲ್ಕಿತ್ತಾಗಿದೆ. ಈಗ ಶೆಟ್ಟರ್ ಸರದಿ.

ಇದನ್ನು ಓದಿ ಚುನಾವಣೆ 2023 | ಕುದುರೆಯಲ್ಲ, ಕತ್ತೆಯೂ ಗೆಲ್ಲಬಹುದು! ಎಚ್ಚರ ಮತದಾರ

ಶೆಟ್ಟರ್ ಬಿಜೆಪಿ ತೊರೆದು ಅವರು ಪ್ರತಿನಿಧಿಸುತ್ತಿದ್ದ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದಿಂದಲೇ ಕಾಂಗ್ರೆಸ್ ಪಕ್ಷದಿಂದಲೋ ಅಥವಾ ಜೆಡಿಎಸ್ ಪಕ್ಷದಿಂದಲೋ ಮತ್ತೇ ಕಣಕ್ಕೆ ಇಳಿದರೆ ಅದು ಹೈವೋಲ್ಟೇಜ್ ಕ್ಷೇತ್ರವಾಗಿ ರೂಪಾಂತರಗೊಳ್ಳುವುದು ಶತಸಿದ್ಧ. ರಾಜ್ಯದಲ್ಲಿ ಕರಾವಳಿ ಭಾಗ ಬಿಟ್ಟರೆ ಸಂಘ ಪರಿವಾರ ಗಟ್ಟಿಯಾಗಿ ಬೇರು ಬಿಟ್ಟಿದ್ದು ಹುಬ್ಬಳ್ಳಿಯಲ್ಲಿಯೆ ಎನ್ನುವುದು ಸುಳ್ಳಲ್ಲ. ಆದಾಗ್ಯೂ ಶೆಟ್ಟರ್ ಸ್ಪರ್ಧೆಯಿಂದ ಅನಾಯಾಸವಾಗಿ ಸ್ವತಃ ಅವರಾಗಲಿ ಅಥವಾ ಬಿಜೆಪಿಯಾಗಲಿ ಗೆಲ್ಲಲಾಗದು. ಮತೀಯ ಧ್ರುವೀಕರಣದಿಂದ ಮತ್ತೇ ಆ ಕ್ಷೇತ್ರ ಬಿಜೆಪಿ ಉಳಿಸಿಕೊಂಡರು ಉಳಿಸಿಕೊಳ್ಳಬಹುದು. ಈಗಾಗಲೇ ಲಿಂಗಾಯತರು ಅನುಮಾನದ ದೃಷ್ಟಿಯಿಂದ ಬಿಜೆಪಿ ಕಡೆ ನೋಡಲು ಆರಂಭಿಸಿದ್ದಾರೆ. ಈ ಬೆಳವಣಿಗೆ ಲಿಂಗಾಯತರಿಗೆ ಬೇರೆಯದೇ ಮೆಸೇಜ್ ಹೋಗುತ್ತದೆ. ಈಗಲ್ಲದಿದ್ದರೂ ಮುಂದೆಯಾದರೂ ಶೆಟ್ಟರ್ ಅವರ ನಡೆ ಬಿಜೆಪಿಗೆ ದೊಡ್ಡ ಪೆಟ್ಟು ನೀಡುವ ಸಾಧ್ಯತೆ ಇದೆ.

ಶೆಟ್ಟರ್ ಈಗವರು ಯಾವ ಪಕ್ಷಕ್ಕೋ ಹಾರುತ್ತಾರೆ, ಮತ್ತವರನ್ನು ಆ ಪಕ್ಷ ಹೇಗೆ ಬಳಸಿಕೊಳ್ಳುತ್ತದೆ ಎಂಬುವುದರ ಮೇಲೆ ಎಲ್ಲವೂ ನಿರ್ಧಾರವಾಗುತ್ತದೆ. ಈಗಾಗಲೇ ಅವರ ಬೀಗರಾದ ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಮೂಲಕ ಕಾಂಗ್ರೆಸ್ ಪಕ್ಷವು ಅವರನ್ನು ಸೆಳೆಯಲು ಯತ್ನಿಸುತ್ತಿದೆ.

ಇದನ್ನೂ ಓದಿ ಮೋದಿ ನೀಡಿದ ಆಫರ್‌ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!

49661542 294235811438250 5384525710729674752 n
ಸಿದ್ದಪ್ಪ ಮೂಲಗೆ
+ posts

ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಸಿದ್ದಪ್ಪ ಮೂಲಗೆ
ಸಿದ್ದಪ್ಪ ಮೂಲಗೆ
ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...