ಕರ್ನಾಟಕ ಉತ್ತರ ಪ್ರದೇಶದಂತಾಗಬೇಕು ಎಂದ ಸುಮಲತಾ : ತರಾಟೆ ತೆಗೆದುಕೊಂಡ ಕನ್ನಡಿಗರು

Date:

ಮೊಳಕಾಲ್ಮೂರು, ಜಗಳೂರಿನಲ್ಲಿ ಬಿಜೆಪಿ ಪರ ಸುದೀಪ್‌ ಪ್ರಚಾರ

ಮಂಡ್ಯದಲ್ಲಿ ಸುಮಲತಾ ಜೊತೆ ಯೋಗಿ ಆದಿತ್ಯನಾಥ್‌ ರೋಡ್‌ ಶೋ

ರಾಜ್ಯದಲ್ಲಿ ಚುನಾವಣೆಯ ಕಾವು ಜೋರಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿಕೊಂಡಿವೆ. ಬುಧವಾರ ರಾಜ್ಯಕ್ಕೆ ಬಂದಿಳಿದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚವಾಣ್‌ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರೆ, ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮೈಸೂರಿನಲ್ಲಿ ಕೈ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಈ ನಡುವೆ ನಟಿ, ಸಂಸದೆ ಸುಮಲತಾ ಅಂಬರೀಶ್‌ ಮತ್ತು ಸುದೀಪ್‌ ಕೂಡ ಬಿಜೆಪಿ ಅಭ್ಯರ್ಥಿಗಳ ಪರ ರೋಡ್‌ ಶೋ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕವೂ ಉತ್ತರ ಪ್ರದೇಶದಂತಾಗಬೇಕು ಎಂದ ಸುಮಲತಾ

ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪರ ಬೆಂಬಲ ಘೋಷಿಸಿರುವ ಸುಮಲತಾ ಅಂಬರೀಶ್‌ ಬುಧವಾರ ಮಂಡ್ಯದಲ್ಲಿ ಯೋಗಿ ಆದಿತ್ಯನಾಥ್‌ ಜೊತೆಗೂಡಿ ಬಿಜೆಪಿ ಅಭ್ಯರ್ಥಿಗಳ ಪರ ರೋಡ್‌ ಶೋ ನಡೆಸಿದ್ದಾರೆ. ಅದಾದ ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅವರು, “ಒಂದು ಕಾಲದಲ್ಲಿ ಉತ್ತರ ಪ್ರದೇಶದಲ್ಲಿ ʼಗೂಂಡಾರಾಜ್‌ʼ ಎಂಬ ರೀತಿಯ ವಾತಾವರಣವಿತ್ತು. ಜನಸಾಮಾನ್ಯರು ರಸ್ತೆಯಲ್ಲಿ ಓಡಾಡುವುದಕ್ಕೂ ಭಯಪಡುವ ಸ್ಥಿತಿ ನಿರ್ಮಾಣವಾಗಿತ್ತು. ವ್ಯಾಪಾರಿಗಳು ತಮ್ಮ ಸಂಪಾದನೆಯ ಹಣದಲ್ಲಿ ರೌಡಿಗಳಿಗೆ ಮಾಮೂಲಿ ಕೊಟ್ಟು ಬೇಸತ್ತು ಹೋಗಿದ್ದರು. ಆದರೆ, 2017ರಲ್ಲಿ ಯೋಗಿ ಆದಿತ್ಯನಾಥ್‌ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ʼಅಪರಾಧಿʼಗಳು, ಅಕ್ರಮ ಮಾಡುವ ಭ್ರಷ್ಟಾಚಾರಿಗಳು ಅಲ್ಲಿಂದ ಓಡಿಹೋಗುವಂಥ ವಾತಾವರಣ ಸೃಷ್ಟಿಯಾಗಿದೆ. ಇವತ್ತು ಉತ್ತರ ಪ್ರದೇಶದ ಜನ ಅವರ ವ್ಯಾಪಾರ ಮತ್ತು ಜೀವನವನ್ನು ನೆಮ್ಮದಿಯಾಗಿ ಸಾಗಿಸುತ್ತಾ ಬಂದಿದ್ದಾರೆ. ಅದಕ್ಕೆ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರವೇ ಕಾರಣ. ಅವರು ಕಾನೂನು ವ್ಯವಸ್ಥೆಯನ್ನು ಸುಧಾರಣೆಗೆ ತಂದರು ಮತ್ತು ಅಕ್ರಮವನ್ನು ತಡೆಯಲು ಬುಲ್ಡೋಜರ್‌ ಅನ್ನೇ ಬಳಸಿದರು. ಈ ವಿಷಯ ನಮಗೂ ಅನ್ವಯ ಆಗಬೇಕು ಎಂದರೆ ಡಬಲ್‌ ಇಂಜಿನ್‌ ಸರ್ಕಾರಕ್ಕೆ ಸ್ಪಷ್ಟ ಬಹುಮತ ನೀಡಬೇಕು ಎಂದಿದ್ದಾರೆ.

ಸುಮಲತಾ ಹೇಳಿಕೆಗೆ ಕನ್ನಡಿಗರ ಆಕ್ರೋಶ

ಸುಮಲತಾ ಅವರ ಈ ಹೇಳಿಕೆ ಸದ್ಯ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಯೋಗಿ ಆದಿತ್ಯನಾಥ್‌ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಸಾರ್ವಜನಿಕವಾಗಿ ನಡೆದ ಹತ್ಯೆಗಳು, ಉನ್ನಾವೋ, ಹತ್ರಾಸ್‌ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು, ಲಖೀಂಪುರ್‌ ಖೇರಿಯಲ್ಲಿ ರೈತರ ಮೇಲೆ ನಡೆದ ಹಿಂಸಾಚಾರ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಉತ್ತರ ಪ್ರದೇಶದಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ರೀತಿಯಲ್ಲಿ ಕೊಲೆ, ಹಿಂಸಾಚಾರ ನಡೆಯುತ್ತಲೇ ಇದೆ. ಅಸಂವಿಧಾನಿಕವಾಗಿ ಮನೆಗಳಿಗೆ ಬುಲ್ಡೋಜರ್‌ ನುಗ್ಗಿಸಿ ಧ್ವಂಸ ಮಾಡಲಾಗುತ್ತಿದೆ. ಇಂತಹ ಕೃತ್ಯಗಳನ್ನು ಕರ್ನಾಟಕದಲ್ಲೂ ಬಯಸುತ್ತಿದ್ದೀರಾ ಎಂದು ಸುಮಲತಾ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಮೊಳಕಾಲ್ಮೂರು, ಜಗಳೂರು ಕ್ಷೇತ್ರಗಳಲ್ಲಿ ಸುದೀಪ್‌ ಪ್ರಚಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರ ಶಿಗ್ಗಾವಿಯಲ್ಲಿ ರೋಡ್‌ ಶೋ ನಡೆಸುವ ಮೂಲಕ ಬಿಜೆಪಿ ಪರ ಚುನವಣಾ ಪ್ರಚಾರ ಆರಂಭಿಸಿದ್ದ ನಟ ಕಿಚ್ಚ ಸುದೀಪ್‌ ಬುಧವಾರ ಬೆಳಗ್ಗೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತಿಪ್ಪೇಸ್ವಾಮಿ ಅವರ ಪರ ರೋಡ್‌ ಶೋ ನಡೆಸಿದ್ದಾರೆ. ಮಧ್ಯಾಹ್ನದ ಬಳಿಕ ಜಗಳೂರಿಗೆ ಭೇಟಿ ನೀಡಿದ ಸುದೀಪ್‌, ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ವಿ ಚಂದ್ರಪ್ಪ ಅವರ ಪರವಾಗಿಯೂ ಪ್ರಚಾರ ಮಾಡಿದ್ದಾರೆ. ಇದೇ ವೇಳೆ ಮುಂದಿನ ದಿನಗಳಲ್ಲಿ ಇನ್ನೂ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿಸಿ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...