ಜೈ ಭಾರತ ಸತ್ಯಾಗ್ರಹ ಯಾತ್ರೆಗೆ ಸಜ್ಜಾದ ಕೋಲಾರ; ಪ್ರಜಾಪ್ರಭುತ್ವದ ಉಳಿವಿಗೆ ರಾಹುಲ್ ಪ್ರಚಾರ

Date:

  • ಏಳು ಲಕ್ಷ ಜನರ ಸಮ್ಮುಖದಲ್ಲಿ ನಡೆಯಲಿರುವ ಜೈ ಭಾರತ ಸತ್ಯಾಗ್ರಹ
  • ರಾಹುಲ್ ಅನರ್ಹತೆ ಪ್ರಶ್ನಿಸಿ ಸತ್ಯಾಗ್ರಹಕ್ಕೆ ಮುಂದಾದ ಕಾಂಗ್ರೆಸ್

ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯ ಕಾಂಗ್ರೆಸ್‌ ಹಮ್ಮಿಕೊಂಡಿರುವ ಜೈ ಭಾರತ್‌ ಸತ್ಯಾಗ್ರಹ ಯಾತ್ರೆಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ.

ಏಪ್ರಿಲ್ 16ರ ಭಾನುವಾರ, ಬೆಳಗ್ಗೆ 11 ಗಂಟೆಗೆ ಭಾರತ ಸತ್ಯಾಗ್ರಹ ಯಾತ್ರೆಗೆ ಚಾಲನೆ ದೊರಕಲಿದೆ. ಕೋಲಾರದ ದೇವರಾಜ ಅರಸು ಕಾಲೇಜಿನ ಎದುರಿನಿಂದ ಈ ಯಾತ್ರೆ ಹೊರಡಲಿದೆ.

2019ರ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣದ ಕಾರಣ ನೀಡಿ ರಾಹುಲ್ ಗಾಂಧಿ ಅನರ್ಹತೆ ಮಾಡಿರುವ ಕ್ರಮ ಖಂಡಿಸುವುದು ಹಾಗೂ ದೇಶದ ಪ್ರಜಾಪ್ರಭುತ್ವ ಉಳಿವಿಗಾಗಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸತ್ಯಾಗ್ರಹದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸೇರಿದಂತೆ ರಾಜ್ಯದ ಇತರ ನಾಯಕರು ಭಾಗವಹಿಸಲಿದ್ದಾರೆ.

ಇತ್ತ ಯಾತ್ರೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, “7 ಲಕ್ಷ ಮತಗಳ ಅಂತರದಲ್ಲಿ ಗೆದ್ದು ಸಂಸತ್ ಸದಸ್ಯರಾದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದಾರೆ.

ಇದು ಪ್ರಜಾಪ್ರಭುತ್ವಕ್ಕೆ ದೊಡ್ಡ ಅಪಮಾನ. ರಾಹುಲ್ ಗಾಂಧಿ ಅವರು ಎಲ್ಲಿ ಭಾಷಣ ಮಾಡಿದ್ದರೋ ಅಲ್ಲಿಯೇ ಮತ್ತೆ ಭಾಷಣ ಮಾಡಬೇಕು ಎಂದು ನಾವೆಲ್ಲ ತೀರ್ಮಾನಿಸಿ ಈ ಸತ್ಯಾಗ್ರಹ ಯಾತ್ರೆ ಹಮ್ಮಿಕೊಂಡಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? :ಸಿದ್ದರಾಮಯ್ಯಗೆ ಕೋಲಾರ ಟಿಕೆಟ್‌ ಮಿಸ್‌ ಆಗಿದ್ದಕ್ಕೆ ರಮೇಶ್‌ ಕುಮಾರ್‌ ಮುನಿಸು; ಸುರ್ಜೇವಾಲಾ ಭೇಟಿ

ವಯನಾಡ್ ಕ್ಷೇತ್ರದ ಸಂಸದರಾಗಿದ್ದ ರಾಹುಲ್ ಗಾಂಧಿ ಅನರ್ಹತೆ ಪ್ರಶ್ನಿಸಿ ಕಾಂಗ್ರೆಸ್ ಈಗಾಗಲೇ ಹಲವು ಪ್ರತಿಭಟನೆಗಳನ್ನು ನಡೆಸಿದೆ. ಅದರ ಮುಂದುವರೆದ ಭಾಗವಾಗಿ ಕೋಲಾರದಲ್ಲೂ ಈ ಯಾತ್ರೆ ಆಯೋಜನೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...