ಅರ್ಹ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲು ಸೀತಿಹೊಸೂರು ಮುರಳಿಗೌಡ ಒತ್ತಾಯ

Date:

ಕೋಲಾರ : ಜಿಲ್ಲೆಯಾದ್ಯಂತ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆಗೊಂಡಿರುವ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮತ್ತೆ ಎಪಿಎಲ್ ಕಾರ್ಡ ನಿಂದ ಬಿಪಿಎಲ್ ಕಾರ್ಡಿಗೆ ಪರಿವರ್ತನೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಸೀತಿಹೊಸೂರು ಮುರಳಿಗೌಡ ಬುಧವಾರ ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಕೆಲವು ಮಾನದಂಡಗಳ ಆಧಾರದಲ್ಲಿ ಬಿಪಿಎಲ್ ಕಾರ್ಡ್ ದಾರರನ್ನು ಎಪಿಎಲ್ ವರ್ಗಾವಣೆ ಮಾಡಿದ್ದಾರೆ ಅವರಿಗೆ ಬಿಪಿಎಲ್ ಕಾರ್ಡ್ ಸೇರಿದಂತೆ ಹೊಸದಾಗಿ ಕಾರ್ಡ್‌ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಬೇಕು ಬಿಪಿಎಲ್ ಕುಟುಂಬಗಳಿಗೆ ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನ್, ಎಂಆರ್‌ಐ ಸ್ಕ್ಯಾನ್, ಅಲ್ಟ್ರಾಸೌಂಡ್‌ ಹಾಗೂ ಅಂಗಾಂಗ ಕಸಿ ಸೌಲಭ್ಯಗಳನ್ನು ಉಚಿತವಾಗಿ ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಇದೆ ಎಂದು ತಿಳಿಸಿದರು.

ಆರೋಗ್ಯ ಸೌಲಭ್ಯ ಪಡೆಯಲು ಸಾರ್ವಜನಿಕರಿಗೆ ನೆರವಾಗಲು ಸರ್ಕಾರ ಕೂಡಲೇ ಸಲ್ಲಿಕೆಯಾದ ಬಿಪಿಎಲ್ ಕಾರ್ಡುಗಳ ಅರ್ಜಿ ಪರಿಷ್ಕರಣೆ ಮಾಡಿಸಬೇಕು ರಾಜ್ಯ ಸರ್ಕಾರ ನುಡಿದಂತೆ ಎಲ್ಲಾ ರೈತರಿಗೂ 10 ಕೆ.ಜಿ ಅಕ್ಕಿಯನ್ನು ಅನ್ನ ಭಾಗ್ಯ ರೂಪದಲ್ಲಿ ಕೊಡುತ್ತಿರುವುದು ರಾಜ್ಯದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಿರುವುದಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಸೇರಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೂ ಧನ್ಯವಾದ ತಿಳಿಸಿದರು.

ಇದನ್ನು ಓದಿದ್ದೀರಾ..? ಅರ್ಹ ನಿವೇಶನ ಮನೆ ರಹಿತರಿಗೆ ವಿತರಿಸಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಹಾರ ಮತ್ತು ನಾಗರೀಕ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಮನವಿಗೆ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಅತಿ ಶೀಘ್ರದಲ್ಲಿ ಅರ್ಜಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಜಿಲ್ಲೆಯ ರೈತಾಪಿ ವರ್ಗಕ್ಕೆ ಯಾವುದೇ ತೊಂದರೆ ಆಗದಂತೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನಕದಾಸರ 538ನೇ ಜಯಂತಿ-ಕೆಜಿಎಫ್ ಕುರುಬರ ಸಂಘದಿಂದ ಸಕಲ ಸಿದ್ಧತೆ

ಕೆಜಿಎಫ್ : ಶ್ರೀ ಭಕ್ತ ಕನಕದಾಸರ 538ನೇ ಕನಕ ಜಯಂತೋತ್ಸವವನ್ನು ನ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ...

ಕನ್ನಡ ರಾಜ್ಯೋತ್ಸವದಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

ಬೇತಮಂಗಲ: ಇಲ್ಲಿನ ಬಸ್ ನಿಲ್ದಾಣದ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿ ಡಾ ಬಿ...

ಪೋಕ್ಸೋ ಕಾಯ್ದೆ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

ಬೇತಮಂಗಲ: ಸಮಾಜದಲ್ಲಿ ಪ್ರತಿಯೊಬ್ಬ ಹೆಣ್ಣು ಮಗು ಸಹ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿ...