ಕೋಲಾರ : ಜಿಲ್ಲೆಯಾದ್ಯಂತ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡಿಗೆ ವರ್ಗಾವಣೆಗೊಂಡಿರುವ ಎಲ್ಲಾ ಅರ್ಹ ಫಲಾನುಭವಿಗಳನ್ನು ಗುರುತಿಸಿ ಮತ್ತೆ ಎಪಿಎಲ್ ಕಾರ್ಡ ನಿಂದ ಬಿಪಿಎಲ್ ಕಾರ್ಡಿಗೆ ಪರಿವರ್ತನೆ ಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಿಸಾನ್ ಘಟಕದ ಜಿಲ್ಲಾಧ್ಯಕ್ಷ ಸೀತಿಹೊಸೂರು ಮುರಳಿಗೌಡ ಬುಧವಾರ ಜಿಲ್ಲಾ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ರಾಜ್ಯ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ಕೆಲವು ಮಾನದಂಡಗಳ ಆಧಾರದಲ್ಲಿ ಬಿಪಿಎಲ್ ಕಾರ್ಡ್ ದಾರರನ್ನು ಎಪಿಎಲ್ ವರ್ಗಾವಣೆ ಮಾಡಿದ್ದಾರೆ ಅವರಿಗೆ ಬಿಪಿಎಲ್ ಕಾರ್ಡ್ ಸೇರಿದಂತೆ ಹೊಸದಾಗಿ ಕಾರ್ಡ್ ಪಡೆಯಲು ಅರ್ಹರಿಂದ ಅರ್ಜಿ ಆಹ್ವಾನಿಸಬೇಕು ಬಿಪಿಎಲ್ ಕುಟುಂಬಗಳಿಗೆ ರಾಜ್ಯದ ಎಲ್ಲಾ ಸಾರ್ವಜನಿಕ ಆಸ್ಪತ್ರೆಗಳಿಗೆ ಸಿಟಿ ಸ್ಕ್ಯಾನ್, ಎಂಆರ್ಐ ಸ್ಕ್ಯಾನ್, ಅಲ್ಟ್ರಾಸೌಂಡ್ ಹಾಗೂ ಅಂಗಾಂಗ ಕಸಿ ಸೌಲಭ್ಯಗಳನ್ನು ಉಚಿತವಾಗಿ ಸೌಲಭ್ಯಗಳಿಗೆ ಬಿಪಿಎಲ್ ಕಾರ್ಡ್ ಕಡ್ಡಾಯವಾಗಿ ಇದೆ ಎಂದು ತಿಳಿಸಿದರು.
ಆರೋಗ್ಯ ಸೌಲಭ್ಯ ಪಡೆಯಲು ಸಾರ್ವಜನಿಕರಿಗೆ ನೆರವಾಗಲು ಸರ್ಕಾರ ಕೂಡಲೇ ಸಲ್ಲಿಕೆಯಾದ ಬಿಪಿಎಲ್ ಕಾರ್ಡುಗಳ ಅರ್ಜಿ ಪರಿಷ್ಕರಣೆ ಮಾಡಿಸಬೇಕು ರಾಜ್ಯ ಸರ್ಕಾರ ನುಡಿದಂತೆ ಎಲ್ಲಾ ರೈತರಿಗೂ 10 ಕೆ.ಜಿ ಅಕ್ಕಿಯನ್ನು ಅನ್ನ ಭಾಗ್ಯ ರೂಪದಲ್ಲಿ ಕೊಡುತ್ತಿರುವುದು ರಾಜ್ಯದಲ್ಲಿ ಹಸಿವು ಮುಕ್ತ ಕರ್ನಾಟಕ ಮಾಡಿರುವುದಕ್ಕೆ ಸಚಿವ ಕೆ ಎಚ್ ಮುನಿಯಪ್ಪ ಸೇರಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೂ ಧನ್ಯವಾದ ತಿಳಿಸಿದರು.
ಇದನ್ನು ಓದಿದ್ದೀರಾ..? ಅರ್ಹ ನಿವೇಶನ ಮನೆ ರಹಿತರಿಗೆ ವಿತರಿಸಬೇಕು
ಆಹಾರ ಮತ್ತು ನಾಗರೀಕ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ್ ಮನವಿಗೆ ಸ್ಪಂದಿಸಿ ಅರ್ಹ ಫಲಾನುಭವಿಗಳಿಗೆ ಅತಿ ಶೀಘ್ರದಲ್ಲಿ ಅರ್ಜಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ಜಿಲ್ಲೆಯ ರೈತಾಪಿ ವರ್ಗಕ್ಕೆ ಯಾವುದೇ ತೊಂದರೆ ಆಗದಂತೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ.





