ಕೊಪ್ಪಳ | ʼಬಂದ್‌ʼ ಯಶಸ್ವಿ: ಕೇಂದ್ರ ಸಚಿವ ಅಮಿತ್‌ ಶಾ ಗಡಿಪಾರಿಗೆ ಆಗ್ರಹ

Date:

ಸಂಸತ್ತಿನಲ್ಲಿ ಡಾ. ಬಿ ಆರ್‌ ಅಂಬೇಡ್ಕರ್ ಕುರಿತು‌ ಕೇಂದ್ರ ಸಚಿವ ಅಮಿತ್‌ ಶಾ ಅಗೌರವದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಕೊಪ್ಪಳದಲ್ಲಿ ನಡೆಸಿದ ‘ಬಂದ್’ ಸಂಪೂರ್ಣ ಯಶಸ್ವಿಯಾಗಿದೆ.

‘ಬಂದ್’ ಪರಿಣಾಮ ನಗರದ ಬೀದಿ ವ್ಯಾಪಾರಿಗಳು, ಹೋಟೆಲ್, ಕಿರಾಣಿ ಅಂಗಡಿ ಸೇರಿದಂತೆ ಹಲವು ವ್ಯಾಪಾರಸ್ಥರು ವ್ಯಾಪಾರ-ವಹಿವಾಟುಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ, ಸ್ವಯಂಪ್ರೇರಿತರಾಗಿ ‘ಬಂದ್’ಗೆ ಬೆಂಬಲ ಸೂಚಿಸಿದರು. ಪ್ರತಿಭಟನಾಕಾರರು ನಗರದ ಅಶೋಕ ಸರ್ಕಲ್ ಮೂಲಕ ಹಾದು ಪಟ್ಟಣದ ಮುಖ್ಯ ಬೀದಿಗಳಲ್ಲಿ ‘ಅಂಬೇಡ್ಕರ್ ನಮ್ಮ ಉಸಿರು, ಅಂಬೇಡ್ಕರ್, ಅಂಬೇಡ್ಕರ್’, ‘ಕೊಲೆಗಡುಕ ಅಮಿತ್ ಶಾ ಅವರನ್ನ ಗಡಿಪಾರು ಮಾಡಿ’ ಎಂದು ಆಗ್ರಹಿಸಿ ಕೇಂದ್ರ‌ ಸಚಿವರ ವಿರುದ್ಧ ಘೋಷಣೆ ಕೂಗಿದರು.

WhatsApp Image 2025 01 06 at 10.43.17 PM

ಅಶೋಕ ಸರ್ಕಲ್‌ನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಕವಿ, ಲಡಾಯಿ ಪ್ರಕಾಶಕ, ಬಂಡಾಯ ಹೋರಾಟಗಾರ ಬಸವಾರಾಜ್ ಸೂಳಿಬಾವಿ ಮಾತನಾಡಿ “ಅಂಬೇಡ್ಕರ್ ಕುರಿತು ಅಮಿತ್ ಶಾ ನಿಂತು ಮಾತನಾಡಿದ ಭವನ ಕೂಡಾ ಅಂಬೇಡ್ಕರ್ ಅವರಿಂದ ಅಸ್ತಿತ್ವಕ್ಕೆ ಬಂದಿದ್ದು ಎಂಬುದನ್ನು ಸಚಿವರು ತಿಳಿದುಕೊಳ್ಳಬೇಕು. ಅವರು ಗೃಹ ಮಂತ್ರಿ ಆಗಲಿಕ್ಕೆ ಮೂಲ ಕಾರಣ ಸಂವಿಧಾನವೇ ಹೊರತು ದೇವರಲ್ಲ” ಎಂದು ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಧರ್ಮ- ದೇವರ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದ್ದೀರಿ. ಚಹಾ ಮಾರುವವರನ್ನು ಈ ದೇಶದ ಸಂವಿಧಾನ ಪ್ರಧಾನಿಯನ್ನಾಗಿ ಮಾಡಿದೆ. ಸ್ವರ್ಗ ನರಕ ನಿಮ್ಮ ಕಲ್ಪನೆಯ ಕಥೆಯೇ ಹೊರತು ವಾಸ್ತವ ಅಲ್ಲ. ಅದರಿಂದ ಶೋಷಣೆಗೆ ಒಳಗಾದ ಮಹಿಳೆಯರು, ದಲಿತರು ಹಿಂದುಳಿದವರು ಎಚ್ಚೆತ್ತುಕೊಳ್ಳಬೇಕಿದೆ” ಎಂದು ಕರೆಕೊಟ್ಟರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಚಿಂಚೋಳಿ ಬಂದ್‌ಗೆ ಉತ್ತಮ ಸ್ಪಂದನೆ : ಅಮಿತ್ ಶಾ ಅವರ ಅಣಕು ಶವಯಾತ್ರೆ

ನಗರ ಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ಮಾತನಾಡಿ, “ನಾವು ಬಂದಿದ್ದೇ ಸಂವಿಧಾನ ಬದಲಾಯಿಸಲು ಎಂದು ಸಚಿವರು ಬಹಿರಂಗವಾಗಿ ಹೇಳಿದ್ದರು. ಇವರಿಗೆ ದಮ್ಮಿದ್ರೆ ಸಂವಿಧಾನ ಬದಲಾಯಿಸಲಿ.. ಇಡೀ ದೇಶದಲ್ಲಿ ರಕ್ತ ಹರಿಯುತ್ತದೆ. ನಮ್ಮ ದೇಶದ ಸಂವಿಧಾನವನ್ನು ಮೆಚ್ಚಿ ಅನೇಕ ದೇಶಗಳು ಬಾಬಾ ಸಾಹೇಬರ ಸಲಹೆ ಪಡೆದಿವೆ. ಅದನ್ನೇ ಬದಲಾಯಿಸುತ್ತೀವಿ ಎಂದು ಗಡಿಪಾರು ಆದಂತಹವರು ಮಾತನಾಡುತ್ತೀರಾ? ಇನ್ನೊಮ್ಮೆ ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ತಂಟೆಗೆ ಬಂದರೆ ಇಡೀ ದೇಶ ಹೊತ್ತಿ ಉರಿಯುತ್ತದೆ” ಎಂದು ಎಚ್ಚರಿಕೆ ನೀಡಿದರು.

WhatsApp Image 2025 01 06 at 10.43.16 PM

ಜ್ಯೋತಿ ಗೊಂಡಬಾಳ ಮಾತನಾಡಿ “ಹೋರಾಟ ಮಾಡಿ ಸ್ವಾತಂತ್ರ್ಯ ಪಡೆದವರು ನಾವು, ಇವತ್ತು ಮತ್ತೆ ನಮ್ಮ ಹಕ್ಕಿಗಾಗಿ, ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಬೇಕಾದ ಸಂದರ್ಭ ಬರುತ್ತಿರುವುದು ದುರದೃಷ್ಟಕರ. ಈ ಹೋರಾಟಕ್ಕೆ ಸಜ್ಜಾಗಲು ಧೈರ್ಯ, ಸ್ಥೈರ್ಯ ಕೊಟ್ಟಿದ್ದು ಸಂವಿಧಾನ. ಸಂವಿಧಾನವನ್ನು ತಲೆ ಮೇಲೆ ಹೊತ್ತುಕೊಂಡು ನಾಟಕೀಯವಾಗಿ ನಡೆದುಕೊಳ್ಳುವ ಪ್ರಧಾನಿಗಳು ಉದ್ಧಟತನದಿಂದ ನಡೆದುಕೊಳ್ಳುವವರ ವಿರುದ್ಧ ಮೌನವಾಗಿರುತ್ತಾರೆ.  ಮನುವಾದಿಗಳ ಕುತಂತ್ರ ಏನು ಎಂಬುದನ್ನ ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಸಾವಿತ್ರಿ ಮುಜುಮ್‌ದಾರ ಮಾತಾನಾಡಿ, “ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ ಅಂದರೆ, ಅದಕ್ಕೆ ಅಂಬೇಡ್ಕರ್ ರಚಿಸಿದ ಸಂವಿಧಾನವೇ ಕಾರಣ. ಅಂಬೇಡ್ಕರ್ ನಿಮಗೆ ಒಪ್ಪಿಗೆ ಇಲ್ಲದಿದ್ದರೆ ನಿಮ್ಮ ದೇವರನ್ನು ಸ್ಮರಿಸಿ ಸ್ವರ್ಗಕ್ಕೆ ಹೋಗಬಹುದು. ಮಣಿಪುರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಆದರೂ ತುಟಿ ಬಿಚ್ಚದ ನಿಮಗೆ ಅಂಬೇಡ್ಕರ್ ಬಗ್ಗೆ ಮಾತನಾಡುವ ಹಕ್ಕುಇಲ್ಲ. ಸ್ವರ್ಗ ನರಕ ನಮಗೆ ಗೊತ್ತಿಲ್ಲ ನಮಗೆ ದುಡಿದು ತಿನ್ನುವುದು ಮಾತ್ರ ಗೊತ್ತು” ಎಂದು ಆಕ್ರೋಶ ವ್ಯಕ್ತಪಡಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...