ನೆಹರು ಓಲೇಕಾರ್ ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ: ಸಿಎಂ ಬೊಮ್ಮಾಯಿ

Date:

  • ನೆಹರೂ ಓಲೇಕಾರ್ ಆರೋಪ ಅಲ್ಲಗಳೆದ ಮುಖ್ಯಮಂತ್ರಿ
  • ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ: ಬೊಮ್ಮಾಯಿ

ನೆಹರು ಓಲೇಕಾರ್ ಯಾವ ಆರೋಪ ಬೇಕಾದರೂ ಮಾಡಲಿ. ದಾಖಲೆ ಸಹಿತ 1,500 ಕೋಟಿ ಆರೋಪ ಸಾಬೀತು ಮಾಡಲಿ. ಕೇವಲ ಹೇಳಿಕೆ ಬೇಡ, ದಾಖಲೆ ನೀಡಲಿ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮಂಗಳೂರಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ನೆಹರೂ ಓಲೇಕಾರ್ ಆರೋಪಗಳಲ್ಲಿ ಹುರುಳಿಲ್ಲ” ಎಂದರು.

“ಅಸಮಾಧಾನಗೊಂಡ ನಾಯಕರ ಜೊತೆ ಪಕ್ಷದ ಹಿರಿಯರು ಮಾತನಾಡುತ್ತಿದ್ದು, ಭಿನ್ನಮತ ಶಮನವಾಗುತ್ತದೆ. ಲಕ್ಷ್ಮಣ ಸವದಿ ಜನರ ವಿಶ್ವಾಸ ಉಳಿಸಿಕೊಳ್ಳಬೇಕು. ಅವರು ಹಿರಿಯರು. ಅವರಿಗೂ ಭಾವನೆಗಳಿವೆ. ಸುದೀರ್ಘ ಕಾಲ ಸಾರ್ವಜನಿಕ ಜೀವನದಲ್ಲಿದ್ದಾರೆ. ಆದ್ದರಿಂದ ಕ್ಷೇತ್ರದ ಜನರ ವಿಶ್ವಾಸವನ್ನು ಅವರು ಉಳಿಸಬೇಕಾಗಿದ್ದು, ಆ ಕಡೆಯಿಂದಲೂ ಒತ್ತಡವಿದೆ. ಎಲ್ಲ ಸರಿಯಾಗುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಎರಡನೇ ಪಟ್ಟಿ ಬಿಡುಗಡೆಯಾಗಿದೆ. ಇನ್ನೂ 12 ಕ್ಷೇತ್ರ ಉಳಿದಿದೆ. ಕೆಲವೆಡೆ ಆಕಾಂಕ್ಷಿಗಳು, ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ಕೊಟ್ಟಿದ್ದಾರೆ. ಬದಲಿಸೋದು ಸಾಮಾನ್ಯ, ಆಗ್ತಾ ಇರುತ್ತೆ. ಅಸಮಾಧಾನಗೊಂಡವರ ಮನವೊಲಿಕೆ ಮಾಡುತ್ತೇವೆ.  ಪಕ್ಷದಲ್ಲಿ ಎದ್ದಿರುವ ಅಸಮಾಧಾನ ಸರಿಪಡಿಸಲಾಗುತ್ತಿದೆ. ಕಾರ್ಯಕರ್ತರು ಗಟ್ಟಿ ಇದ್ದಾರೆ, ಇದರಿಂದ ಯಾವುದೇ ಹಾನಿಯಾಗುವುದಿಲ್ಲ ಬಹುತೇಕ ಕಡೆ ಪಕ್ಷದ ಭಿನ್ನಮತ ಶಮನ ಆಗಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಾಂಗ್ರೆಸ್ ನವರಿಗೆ 60ರಿಂದ 65 ಕ್ಷೇತ್ರಗಳಿಗೆ ಅಭ್ಯರ್ಥಿಗಳೇ ಇಲ್ಲ. ಈಗ ಆಮದು ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿ ಇದ್ದಾರೆ. ಅವರು ಅಧಿಕಾರಕ್ಕೆ ಬರುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...